ಸಂಗ್ರಹ ಚಿತ್ರ 
ರಾಜಕೀಯ

ಬೆಳಗಾವಿ ಅಧಿವೇಶನ: ಅತೃಪ್ತ 10 ಕಾಂಗ್ರೆಸ್ ಶಾಸಕರು ಗೈರು ಹಾಜರು ಸಾಧ್ಯತೆ

ಕಾಂಗ್ರೆಸ್ ಪಾಳಯದಲ್ಲಿ ಅತೃಪ್ತಿಯ ಹೊಗೆಯಾಡುತ್ತಿದ್ದು, ಈ ನಡುವಲ್ಲೇ ಸಚಿವ ರಮೇಶ್ ಜಾರಕಿಹೊಳಿ ನೇತೃತ್ವದ 10 ಅತೃಪ್ತ ಶಾಸಕರು ಬೆಳಗಾವಿ ಅಧಿವೇಶನಕ್ಕೆ ಗೈರು ಹಾಜರಾಗಲಿದ್ದಾರೆಂದು ಹೇಳಲಾಗುತ್ತಿದೆ...

ಬೆಂಗಳೂರು: ಕಾಂಗ್ರೆಸ್ ಪಾಳಯದಲ್ಲಿ ಅತೃಪ್ತಿಯ ಹೊಗೆಯಾಡುತ್ತಿದ್ದು, ಈ ನಡುವಲ್ಲೇ ಸಚಿವ ರಮೇಶ್ ಜಾರಕಿಹೊಳಿ ನೇತೃತ್ವದ 10 ಅತೃಪ್ತ ಶಾಸಕರು ಬೆಳಗಾವಿ ಅಧಿವೇಶನಕ್ಕೆ ಗೈರು ಹಾಜರಾಗಲಿದ್ದಾರೆಂದು ಹೇಳಲಾಗುತ್ತಿದೆ. 
ಕಾಂಗ್ರೆಸ್ ಶಾಸಕರ ಬಗ್ಗೆ ಮೈತ್ರಿ ಸರ್ಕಾರದಲ್ಲಿ ತಾರತಮ್ಯ ತೋರಲಾಗುತ್ತಿದೆ ಮತ್ತು ಕಾಂಗ್ರೆಸ್ ಶಾಸಕರು ಹೇಳಿದ ಕೆಲಸಗಳಿಗಿಂದ ಆ ಕ್ಷೇತ್ರದ ಜೆಡಿಎಸ್ ನಾಯಕರ ಮಾತುಗಳಿಗೆ ಹೆಚ್ಚಿನ ಮನ್ನಣೆ ನೀಡಲಾಗತ್ತಿದೆ ಎಂಬ ಅಸಮಾಧಾನ ಕಾಂಗ್ರೆಸ್ ನಲ್ಲಿ ತೀವ್ರವಾಗಿದ್ದು, ಈ ಹಿನ್ನಲೆಯಲ್ಲಿ ಅಧಿವೇಶನಕ್ಕೆ 10 ಕಾಂಗ್ರೆಸ್ ಶಾಸಕರು ಗೈರು ಹಾಜರಾಗಲಿದ್ದಾರೆಂದು ಜಾರಕಿಹೊಳಿ ಆಪ್ತ ಮೂಲಗಳು ಮಾಹಿತಿ ನೀಡಿವೆ. 
ಬಳ್ಳಾರಿ, ರಾಯಚೂರು ಹಾಗೂ ಕೊಪ್ಪಳ ಮೂಲದ ಕಾಂಗ್ರೆಸ್ ಶಾಸಕರು ಅಧಿವೇಶನಕ್ಕೆ ಗೈರಾಗಲಿದ್ದಾರೆಂದು ತಿಳಿದುಬಂದಿದೆ. 
ಕಳೆದ ಕೆಲ ವಾರಗಳಿಂದಲೂ ಜಾರಕಿಹೊಳಿ ನೇತೃತ್ವದ ತಂಡ ಬಿಜೆಪಿಯೊಂದಿಗೆ ಸಂಪರ್ಕದಲ್ಲಿದ್ದು, ಸಂಪುಟ ವಿಸ್ತರಣೆಯಾದ ಬಳಿಕ ಈ ತಂಡ ಅಂತಿಮ ನಿರ್ಧಾಗಳನ್ನು ಕೈಗೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ. 
ಈಗಾಗಲೇ ಉತ್ತರ ಕರ್ನಾಟಕ ಹಾಗೂ ಹೈದರಾಬಾದ್ ಕರ್ನಾಟಕವನ್ನು ನಿರ್ಲಕ್ಷಿಸಿದ್ದಾರೆಂಬ ಆರೋಪಗಳನ್ನು ಎದುರಿಸುತ್ತಿರುವ ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ, ಅಧಿವೇಶಕ್ಕೆ ಕಾಂಗ್ರೆಸ್ ಶಾಸಕರ ಗೈರು ಹಾಜರು ದೊಡ್ಡ ತಲೆನೋವಾಗಿ ಪರಿಣಿಸಲಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT