ಡಿ ಕೆ ಶಿವಕುಮಾರ್ 
ರಾಜಕೀಯ

'ಸಿದ್ಧಗಂಗಾ ಶ್ರೀಗೆ ಮುಸ್ಲಿಂ ವೈದ್ಯರಿಂದ ಚಿಕಿತ್ಸೆ': 'ಧರ್ಮ' ಹೇಳಿಕೆಗೆ ಕ್ಷಮೆ ಕೇಳಿದ ಡಿಕೆಶಿ

ತುಮಕೂರಿನ ಸಿದ್ಧಗಂಗಾ ಮಠದ ಶಿವಕುಮಾರ ಶ್ರೀಗಳಿಗ ಶಸ್ತ್ರ ಚಿಕಿತ್ಸೆ ನಡೆಸಿದ ವೈದ್ಯರ ಧರ್ಮದ ಬಗ್ಗೆ ಮಾತನಾಡಿದ್ದ ಜಲಸಂಪನ್ಮೂಲ ಸಚಿವ ಡಿ ಕೆ ಶಿವಕುಮಾರ್ ಅವರು ಸೋಮವಾರ ತಮ್ಮ ಹೇಳಿಕೆಗೆ ಕ್ಷಮೆಯಾಚಿಸಿದ್ದಾರೆ.

ಬೆಂಗಳೂರು: ತುಮಕೂರಿನ ಸಿದ್ಧಗಂಗಾ ಮಠದ ಶಿವಕುಮಾರ ಶ್ರೀಗಳಿಗ ಶಸ್ತ್ರ ಚಿಕಿತ್ಸೆ ನಡೆಸಿದ ವೈದ್ಯರ ಧರ್ಮದ ಬಗ್ಗೆ ಮಾತನಾಡಿದ್ದ ಜಲಸಂಪನ್ಮೂಲ ಸಚಿವ ಡಿ ಕೆ ಶಿವಕುಮಾರ್ ಅವರು ಸೋಮವಾರ ತಮ್ಮ ಹೇಳಿಕೆಗೆ ಕ್ಷಮೆಯಾಚಿಸಿದ್ದಾರೆ.
ಚೆನ್ನೈನ ರೆಲಾ ಆಸ್ಪತ್ರೆ ವಿಚಾರದಲ್ಲಿ ನಾನು ನೀಡಿದ ಹೇಳಿಕೆಯನ್ನು ಬಿಜೆಪಿ ಮುಖಂಡರು ತಿರುಚಿದ್ದು, ನನ್ನ ಹೇಳಿಕೆಯನ್ನು ಯಾರೂ ತಪ್ಪಾಗಿ ಭಾವಿಸುವುದು ಬೇಡ. ಒಂದೊಮ್ಮೆ ಹೇಳಿಕೆಯಿಂದ ಯಾರ ಮನಸ್ಸಿಗಾದರೂ ನೋವಾಗಿದ್ದರೆ ಕ್ಷಮೆ ಕೋರುತ್ತೇನೆ ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಇಂದು ತಮ್ಮ ಧರ್ಮ ಹೇಳಿಕೆ ಬಗ್ಗೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಡಿಕೆಶಿ, ನನ್ನ ಹೇಳಿಕೆಯನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳಲು ಯತ್ಮಿಸಿದ್ದಾರೆ. ಒಂದು ಉತ್ತಮ ಆಸ್ಪತ್ರೆ ನಿರ್ಮಾಣ, ನಿರ್ವಹಣೆಗೆ ಯಾವುದೇ ಜಾತಿ, ಧರ್ಮದ ಲೇಪ ಇರುವುದಿಲ್ಲ ಎಂಬುದು ನನ್ನ ಮಾತಿನ ತಿರುಳಾಗಿತ್ತು. ನೈಜ ಭಾವನೆಯ ಈ ಹೇಳಿಕೆಯನ್ನು ಬಿಜೆಪಿಯವರು ತಿರುಚಿದ್ದಾರೆ ಎಂದು ಆರೋಪಿಸಿದ್ದಾರೆ.
ನಾನು ಸಿದ್ಧಗಂಗಾ ಶ್ರೀಗಳ ದೊಡ್ಡ ಅಭಿಮಾನಿ ಎಂದು ಡಿಕೆಶಿ ಹೇಳಿದ್ದಾರೆ.
ಕಳೆದ ಶನಿವಾರ ಆಸ್ಪತ್ರೆಗೆ ಭೇಟಿ ನೀಡಿ ಶ್ರೀಗಳ ಆರೋಗ್ಯ ವಿಚಾರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ್ದ ಡಿಕೆಶಿ, ಸಿದ್ದಗಂಗಾ ಶ್ರೀಗಳು ಆರೋಗ್ಯವಾಗಿದ್ದಾರೆ. ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ. ಯಾರು ಕೂಡ ಆಸ್ಪತ್ರೆಗೆ ಹೋಗುವ ಅವಶ್ಯಕತೆ ಇಲ್ಲ. ಅಲ್ಲಿ ಅಲ್ಪಸಂಖ್ಯಾತರ ಆಡಳಿತ ಮಂಡಳಿ ಇದ್ದರೂ ಶ್ರೀಗಳನ್ನು ಚೆನ್ನಾಗಿ ‌ನೋಡಿಕೊಳ್ಳಲಾಗುತ್ತಿದೆ ಎಂದು ಹೇಳಿದ್ದರು.
ಮುಸ್ಲಿಂ ಸಮುದಾಯದ ‌ಹೆಸರಾಂತ ವೈದ್ಯ ಮೊಹಮ್ಮದ್ ರೇಲಾ ಎನ್ನುವರು ಶ್ರೀಗಳಿಗೆ ಶಸ್ತ್ರಚಿಕಿತ್ಸೆ ‌ಮಾಡಿದ್ದಾರೆ. ಇವರು ಈ ಹಿಂದೆ 5 ವರ್ಷದ ಮಗುವಿಗೂ ಆಪರೇಷನ್ ಮಾಡಿದ್ದರು. ಇದೀಗ, 111ರ ವಯಸ್ಸಿನ ಶ್ರೀಗಳಿಗೆ ಆಪರೇಷನ್ ‌ಮಾಡಿದ್ದಾರೆ. ನಾನು ವೈದ್ಯಕೀಯ ಶಿಕ್ಷಣ ‌ಸಚಿವನಾಗಿ ಹೇಳುತ್ತಿದ್ದೇನೆ. ಇಂಥ ಆಸ್ಪತ್ರೆಯನ್ನು ನಾನು ಎಲ್ಲೂ ನೋಡಲಿಲ್ಲ. ಈ ಆಸ್ಪತ್ರೆ ತುಂಬಾ ಚೆನ್ನಾಗಿದೆ. ಅಲ್ಲಿನ ವೈದ್ಯರ ಶ್ರೀಗಳಿಗೆ ಸೂಕ್ತ ಚಿಕಿತ್ಸೆ ಕೊಟ್ಟು ತುಂಬಾ ಚೆನ್ನಾಗಿ ನೋಡಿಕೊಂಡಿದ್ದಾರೆ ಎಂದಿದ್ದರು. ಸಚಿವರ ಈ ಹೇಳಿಕೆಗೆ ಬಿಜೆಪಿ ಮುಖಂಡರು, ಮಠದ ಕಿರಿಯ ಶ್ರೀ ಹಾಗೂ ಭಕ್ತರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

SCROLL FOR NEXT