ರಮೇಶ್ ಕುಮಾರ್ ಮತ್ತು ಸಿದ್ದರಾಮಯ್ಯ 
ರಾಜಕೀಯ

ನನ್ನ ಸಾವಿಗಿಂತಲೂ ಸಿದ್ದರಾಮಯ್ಯ ಸೋಲು ಹೆಚ್ಚು ನೋವಿನ ವಿಷಯ: ರಮೇಶ್ ಕುಮಾರ್

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಸೋಲು ಅನುಭವಿಸಿದ್ದು ನನಗೆ ನನ್ನ ಸಾವಿಗಿಂತಲೂ ಹೆಚ್ಚು ನೋವು ಕೊಡುವ ವಿಷಯ ಎಂದು ...

ಕೋಲಾರ: ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಸೋಲು ಅನುಭವಿಸಿದ್ದು ನನಗೆ ನನ್ನ ಸಾವಿಗಿಂತಲೂ ಹೆಚ್ಚು ನೋವು ಕೊಡುವ ವಿಷಯ ಎಂದು ವಿಧಾನಸಭೆ ಅಧ್ಯಕ್ಷ ಕೆ.ಆರ್‌.ರಮೇಶ್‌ ಕುಮಾರ್ ಕಣ್ಣೀರು ಹಾಕಿದ್ದಾರೆ.
ಕೋಲಾರದಲ್ಲಿ ನಡೆದ ಕನಕ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡುವಾಗ ಭಾವುಕರಾದ ಅವರು, ಕುರಿ ಕಾಯುವ ಸಮಾಜದಲ್ಲಿ ಹುಟ್ಟಿ 13 ಬಾರಿ ಬಜೆಟ್​ ಮಂಡಿಸಿ, ಎಲ್ಲ ಸಮಾಜದ ಒಳಿತಿಗಾಗಿ ಶ್ರಮಿಸಿರುವ ಸಿದ್ದರಾಮಯ್ಯನವರನ್ನು ಕೆಳಗೆ ಬೀಳಲು ಬಿಡಬಾರದು ಎಂದು ಹೇಳುತ್ತ ಕಂಬನಿ ಮಿಡಿದರು.
ಸತ್ಯ ಕಹಿಯಾಗಿರುತ್ತೆ, ಸತ್ಯ ಕಠಿಣವಾಗಿರುತ್ತೆ. ಆದರೆ ಸತ್ಯಕ್ಕೆ ಸಾವಿಲ್ಲ. ಕೊನೆಗೆ ಅದೇ ಗೆಲ್ಲುತ್ತೆ. ಬರಡು ಭೂಮಿಗೆ ನೀರು ಕೊಟ್ಟ ಭಗೀರಥ ಸಿದ್ಧರಾಮಯ್ಯ ಎಂದು ರಮೇಶ್ ಕುಮಾರ ಭಾವನಾತ್ಮಕವಾಗಿ ಮಾತನಾಡಿದರು.
ಸಿದ್ದರಾಮಯ್ಯ ಅವರ ಸೋಲನ್ನು ಎಂದಿಗೂ ನಾನು ಮರೆಯಲಾರೆ. ನನಗೆ ನನ್ನ ಸಾವಿಗಿಂತಲೂ ಅವರೆ ನನಗೆ ಹೆಚ್ಚು. ಆರೋಗ್ಯ ಸಚಿವನಾಗಿದ್ದಾಗ ನೀಡಿದ ಬೆಂಬಲ ಮರೆಯಲಾರೆ. ಅವರಿಗೆ ಪುತ್ರನನ್ನು ಕಳೆದುಕೊಂಡ ಸಮಯಕ್ಕಿಂತಲೂ ಹೆಚ್ಚು ನೋವನ್ನು ಚುನಾವಣೆ ಸೋಲು ನೀಡಿದೆ ಎಂದು ಹೇಳುವ ಮೂಲಕ ಬಾವುಕರಾಗಿ ಕಣ್ಣೀರು ಸುರಿಸಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IndiGo ಅವಾಂತರ ತಹಬದಿಗೆ: ಅಡಚಣೆ ಪ್ರಮಾಣ ಇಳಿಕೆ; 'ಹಂತಹಂತವಾಗಿ ಮರಳುತ್ತಿದ್ದೇವೆ' ಎಂದ CEO

LeT ಜೊತೆಗೆ ಒಪ್ಪಂದ; ಹಮಾಸ್ 'ಭಯೋತ್ಪಾದಕ ಸಂಘಟನೆ' ಎಂದು ಘೋಷಿಸಿ; ಭಾರತಕ್ಕೆ ಇಸ್ರೇಲ್ ಒತ್ತಾಯ!

ರಾಷ್ಟ್ರ ಪ್ರಶಸ್ತಿ ವಿಜೇತ ಚಿತ್ರ: 'ತಿಥಿ' ಹೀರೋಗೆ ಇಂದೆಂಥಾ ಸ್ಥಿತಿ?, ಅಭಿ ಈಗ ದಿನಗೂಲಿ ಕಾರ್ಮಿಕ!

ಮದುವೆ ರದ್ದು ಬೆನ್ನಲ್ಲೇ ಪರಸ್ಪರ 'ಅನ್‌ಫಾಲೋ' ಮಾಡಿಕೊಂಡ ಸ್ಮೃತಿ ಮಂಧಾನ, ಪಲಾಶ್ ಮುಚ್ಚಲ್!

Goa nightclub fire: ರೆಸ್ಟೋರೆಂಟ್‌ ಮಾಲೀಕ, ಕಾರ್ಯಕ್ರಮ ಆಯೋಜಕರ ವಿರುದ್ಧ FIR; ಸರಪಂಚ್ ಬಂಧನ!

SCROLL FOR NEXT