ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ 
ರಾಜಕೀಯ

ಬೆಳಗಾವಿ ಅಧಿವೇಶನ: ವಿಪಕ್ಷ ಎದುರಿಸಲು ನಮ್ಮಲ್ಲಿ ಸಮರ್ಥ ನಾಯಕರಿದ್ದಾರೆ: ದಿನೇಶ್ ಗುಂಡೂರಾವ್

ಬೆಳಗಾವಿ ಅಧಿವೇಶನದಲ್ಲಿ ವಿರೋಧ ಪಕ್ಷವನ್ನು ಎದುರಿಸಲು ನಮ್ಮ ಪಕ್ಷದಲ್ಲಿ ಸಮರ್ಥ ನಾಯಕರಿದ್ದಾರೆಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಹೇಳಿದ್ದಾರೆ...

ಬೆಂಗಳೂರು: ಬೆಳಗಾವಿ ಅಧಿವೇಶನದಲ್ಲಿ ವಿರೋಧ ಪಕ್ಷವನ್ನು ಎದುರಿಸಲು ನಮ್ಮ ಪಕ್ಷದಲ್ಲಿ ಸಮರ್ಥ ನಾಯಕರಿದ್ದಾರೆಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಹೇಳಿದ್ದಾರೆ. 
ಕ್ವೀನ್ಸ್ ರಸ್ತೆಯ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿವೇಶನದಲ್ಲಿ ಬಿಜೆಪಿಯನ್ನು ಎದುರಿಸಲು ನಮಲ್ಲಿ ಸಮರ್ಥ ನಾಯಕರಿದ್ದಾರೆ.  ಉಪ ಚುನಾವಣೆಗಳಲ್ಲೂ ಅಭೂತಪೂರ್ವ ಗೆಲವು ಸಿಕ್ಕಿದೆ. ಪಂಚ ರಾಜ್ಯ ಚುನಾವಣೆಗಳಲ್ಲೂ ಗೆಲುವಿನ ವಿಶ್ವಾಸ ದೊರೆತಿದೆ. ಹಾಗಾಗಿ ಧೈರ್ಯದಿಂದಲೇ ಅಧಿವೇಶನಕ್ಕೆ ಹೋಗುತ್ತೇವೆಂದು ಹೇಳಿದ್ದಾರೆ. 
ಹಿಂದಿನ ಕಾಂಗ್ರೆಸ್ ಸರ್ಕಾರದ ಮೇಲೆ ಭ್ರಷ್ಟಾಚಾರ ಆರೋಪದ ಹಿನ್ನಲೆಯಲ್ಲಿ ಸಿದ್ದರಾಮಯ್ಯ ಅವರು ವಿದೇಶಕ್ಕೆ ಹೋಗುತ್ತಿದ್ದಾರೆಂಬ ಮಾತುಗಳಿವೆಯಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಅದೆಲ್ಲಾ ಸುಳ್ಳು. ಸಿದ್ದರಾಮಯ್ಯ ಅವರು 10 ದಿನಗಳ ಹಿಂದೆಯೇ ನಿಗದಿಯಾಗಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದಾರೆ, ಡಿ.17ರ ನಂತರ ವಾಪಸ್ ಬಂದು ಅಧಿವೇಶನದಲ್ಲಿ ಪಾಲ್ಗೊಳ್ಳುತ್ತಾರೆ. ಡಿ.18ಕ್ಕೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ ಎಂದು ತಿಳಿಸಿದ್ದಾರೆ. 
ಬಿಜೆಪಿಯವರು ಉದ್ದೇಶಪೂರ್ವಕವಾಗಿ ಭ್ರಷ್ಟಾಚಾರದ ಆರೋಪ ಮಾಡುತ್ತಿದ್ದಾರೆ. ಸಾರ್ವಜನಿಕ ಲೆಕ್ಕಪತ್ರ ಸಮಿತಿಗೆ ಎಲ್ಲಾ ವರದಿ ಹೋಗುತ್ತದೆ. ಈ ಸಮಿತಿಗೆ ಬಿಜೆಪಿಯ ಆರ್.ಅಶೋಕ್ ಅವರೇ ಅಧ್ಯಕ್ಷರಾಗಿದ್ದಾರೆ. ನಾಲ್ಕನೇ ಬಾರಿ ಶಾಸಕರಾಗಿರುವ ಸಿ.ಟಿ.ರವಿಗೆ ಇದು ಗೊತ್ತಿಲ್ಲವೇ? ಅವರಿಗೆಲ್ಲೋ ಬುದ್ಧಿ ಕಡಿಮೆಯಾಗಿರಬೇಕೆಂದಿದ್ದಾರೆ. 
ಇದೇ ವೇಳೆ ಸಭಾಪತಿ ಸ್ಥಾನದ ಬಿಕ್ಕಟ್ಟು ವಿಚಾರ ಕುರಿತು ಮಾತನಾಡಿದ ಅವರು, ಈ ವಿಚಾರದಲ್ಲಿ ಯಾವುದೇ ರೀತಿಯ ಗೊಂದಲಗಳಿಲ್ಲ. ಸಭಾಪತಿ ಚುನಾವಣೆಗೆ ನಾಮಪತ್ರ ಹಾಕಲೇಬೇಕು. ನಾಮಪತ್ರ ಸಲ್ಲಿಸಿದವರು ಮತ್ತೆ ಸಬಾಪತಿಯಾಗಿ ಆಯ್ಕೆಯಾಗುತ್ತಾರೆಂದಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT