ಎಚ್ ಡಿ ಕುಮಾರಸ್ವಾಮಿ 
ರಾಜಕೀಯ

ಕಾಂಗ್ರೆಸ್ ಗೆಲುವು: ಸೋನಿಯಾ, ರಾಹುಲ್ ಪ್ರಯತ್ನಕ್ಕೆ ಸಿಕ್ಕ ಫಲ ಎಂದ ಸಿಎಂ ಕುಮಾರಸ್ವಾಮಿ

ಪಂಚರಾಜ್ಯಗಳ ವಿಧಾನಸಭೆ ಚುನಾವಣೆಯ ಫಲಿತಾಂಶ ಮಂಗಳವಾರ ಪ್ರಕಟವಾಗಿದ್ದು, ಈ ಫಲಿತಾಂಶ ಮುಂಬರುವ ಲೋಕಸಭಾ....

ಬೆಳಗಾವಿ: ಪಂಚರಾಜ್ಯಗಳ ವಿಧಾನಸಭೆ ಚುನಾವಣೆಯ ಫಲಿತಾಂಶ ಮಂಗಳವಾರ ಪ್ರಕಟವಾಗಿದ್ದು, ಈ ಫಲಿತಾಂಶ ಮುಂಬರುವ ಲೋಕಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂದು ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ.
ಮಧ್ಯ ಪ್ರದೇಶ, ರಾಜಸ್ಥಾನ, ಛತ್ತೀಸ್ ಗಢ, ತೆಲಂಗಾಣ ಹಾಗೂ ಮಿಜೋರಾ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಪತ್ರಿಕಾ ಪ್ರಕಟಣೆ ನೀಡಿರುವ ಸಿಎಂ, ಜಾತ್ಯತೀತ ಪಕ್ಷಗಳತ್ತ ರಾಷ್ಟ್ರ ಸಾಗುತ್ತಿದೆ ಎಂಬುದಕ್ಕೆ ವಿಧಾನಸಭೆ ಚುನಾವಣೆಯಲ್ಲಿ ಮತದಾರ ನೀಡಿರುವ ತೀರ್ಪು ಸಾಕ್ಷಿಯಾಗಿದೆ ಎಂದಿದ್ದಾರೆ.
ದೇಶಾದ್ಯಂತ ಏಕಪಕ್ಷೀಯ ಆಡಳಿತದ ನಿರೀಕ್ಷೆ ಇಟ್ಟುಕೊಂಡು ಪ್ರತಿಪಕ್ಷಗಳನ್ನು ದಮನ ಮಾಡಲು ಮುಂದಾಗಿದ್ದವರಿಗೆ ಇದೀಗ ಮುಖಭಂಗವಾಗಿದೆ ಎಂದು ಸಿಎಂ ಪರೋಕ್ಷವಾಗಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಐದು ರಾಜ್ಯಗಳ ಫಲಿತಾಂಶ ಜಾತ್ಯತೀತ ಪಕ್ಷಗಳೆಲ್ಲವೂ ಜತೆಯಾಗಿ ಚುನಾವಣೆ ಎದುರಿಸಲು ವೇದಿಕೆಯನ್ನು ದೊರಕಿಸಿಕೊಟ್ಟಿದೆ. ಕಾಂಗ್ರೆಸ್​ ನಾಯಕಿ ಸೋನಿಯಾ ಗಾಂಧಿ ಹಾಗೂ  ಕಾಂಗ್ರೆಸ್ ಅಧ್ಯಕ್ಷ ರಾಹುಲ್​ ಗಾಂಧಿಯವರ ಪ್ರಯತ್ನಕ್ಕೆ ಸಿಕ್ಕ ಫಲ ಇದು ಎಂದು ಕುಮಾರಸ್ವಾಮಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?