ಸಾಂದರ್ಭಿಕ ಚಿತ್ರ 
ರಾಜಕೀಯ

ಪಂಚರಾಜ್ಯಗಳ ಫಲಿತಾಂಶ: ರಾಜ್ಯ ಬಿಜೆಪಿಯಲ್ಲಿ ತಳಮಳ, ಲೋಕಸಭಾ ಚುನಾವಣೆಗೆ ಸಿದ್ಧತೆ

ರಾಜಸ್ತಾನ, ಮಧ್ಯಪ್ರದೇಶ, ಛತ್ತೀಸ್ ಗಡ , ಮಿಜೋರಾಂ ಹಾಗೂ ತೆಲಂಗಾಣ ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ ರಾಜ್ಯ ಬಿಜೆಪಿಯಲ್ಲಿ ತಳಮಳಕ್ಕೆ ಕಾರಣವಾಗಿದ್ದು, ಮುಂದಿನ ಲೋಕಸಭಾ ಚುನಾವಣೆಯತ್ತ ನಾಯಕರು ಕಾರ್ಯತಂತ್ರ ರೂಪಿಸುತ್ತಿದ್ದಾರೆ.

ಬೆಂಗಳೂರು: ರಾಜಸ್ತಾನ, ಮಧ್ಯಪ್ರದೇಶ, ಛತ್ತೀಸ್ ಗಡ , ಮಿಜೋರಾಂ ಹಾಗೂ ತೆಲಂಗಾಣ ರಾಜ್ಯಗಳ ವಿಧಾನಸಭಾ ಚುನಾವಣಾ  ಫಲಿತಾಂಶ  ರಾಜ್ಯ  ಬಿಜೆಪಿಯಲ್ಲಿ  ತಳಮಳಕ್ಕೆ ಕಾರಣವಾಗಿದ್ದು,  ಮುಂದಿನ ಲೋಕಸಭಾ ಚುನಾವಣೆಯತ್ತ ನಾಯಕರು ಕಾರ್ಯತಂತ್ರ ರೂಪಿಸುತ್ತಿದ್ದಾರೆ.

ಪಂಚ ರಾಜ್ಯಗಳ  ಚುನಾವಣೆಯಲ್ಲಿ  ಮೋದಿ ಅಲೆ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲಿಲ್ಲ ಅಂಶವನ್ನು  ಜೆಡಿಎಸ್ - ಕಾಂಗ್ರೆಸ್ ಮೈತ್ರಿ ಸರ್ಕಾರ ಮುನ್ನೆಲೆಗೆ ತರುವ ಸಾಧ್ಯವಿರುವುದರಿಂದ ಬಿಜೆಪಿ ರಾಜ್ಯದಲ್ಲಿ ಪರಿಪೂರ್ಣ ಪ್ರತಿಪಕ್ಷವಾಗಿ ಕಾರ್ಯನಿರ್ವಹಿಸಬೇಕೆಂಬ ಸಲಹೆಯನ್ನು ಪಕ್ಷದೊಳಗಿನ ನಾಯಕರು  ನೀಡುತ್ತಿದ್ದಾರೆ ಎಂಬುದು ತಿಳಿದುಬಂದಿದೆ.

ಈ ವರ್ಷದ ಆರಂಭದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಅಧಿಕ ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರೂ ಕರ್ನಾಟಕದಲ್ಲಿ ಸರ್ಕಾರ ರಚಿಸಲು ಸಾಧ್ಯವಾಗದ ಬಿಜೆಪಿ ಈಗ  ಮಧ್ಯಪ್ರದೇಶ, ಛತ್ತೀಸ್  ಗಢ  ಹಾಗೂ ರಾಜಸ್ತಾನದ ಚುನಾವಣೆಯಲ್ಲಿ ಈಗ ಬಿಜೆಪಿ ಹಿನ್ನಡೆ ಅನುಭವಿಸಿರುವುದು ಸಹಜವಾಗಿಯೇ ಬಿಜೆಪಿಗೆ ಎಚ್ಚರಿಕೆಯ ಘಂಟೆಯಾಗಿ ಪರಿಣಮಿಸಿದೆ.

ಸ್ಥಳೀಯ ಆಡಳಿತ ವಿರೋಧಿ ಅಲೆ ಈ ಚುನಾವಣೆಯಲ್ಲಿ ಪ್ರಭಾವ ಬೀರಿದೆ. ಆದರೆ, ಇದು ಮೈತ್ರಿ ಆಟ ಗೆದ್ದಂತಲ್ಲಾ  ಈ ರಾಜ್ಯಗಳಲ್ಲಿಯೂ ಎಲ್ಲಿಯೂ ಮೈತ್ರಿ ಪರ ಮತದಾರರು ಒಲವು ತೋರಿಲ್ಲ ಎಂದು ಬಿಜೆಪಿ ವಕ್ತಾರ ವಿವೇಕ್ ರೆಡ್ಡಿ ಅಭಿಪ್ರಾಯಪಟ್ಟಿದ್ದಾರೆ.

2019ರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್- ಕಾಂಗ್ರೆಸ್ ಮೈತ್ರಿ ಸರ್ಕಾರ ಪತನದ ಬಗ್ಗೆ ಬಿಜೆಪಿ ನಾಯಕರು ಅನುಮಾನ ಹೊಂದಿದ್ದು,  ಪಕ್ಷ ಸದೃಢಗೊಳಿಸುವತ್ತ ಚಿಂತನೆ ನಡೆಸಿದ್ದಾರೆ. ಈಗ ಅಲ್ಲದಿದ್ದರೂ 2023 ರಲ್ಲಿ ಹೋರಾಟ ನಡೆಸುತ್ತೇವೆ. ಸದ್ಯ 2019 ರ ಲೋಕಸಭಾ ಚುನಾವಣೆಯತ್ತ ಗಮನ ಹರಿಸುವುದಾಗಿ ಬಿಜೆಪಿಯ ಕಾರ್ಯಕಾರಿ ಪದಾಧಿಕಾರಿಯೊಬ್ಬರು  ಹೇಳಿದ್ದಾರೆ.

ಆಡಳಿತ ವಿರೋಧಿ ಚುನಾವಣಾ ಫಲಿತಾಂಶದ ಮೇಲೆ ಪರಿಣಾಮ ಬೀರಿದೆ. ಮೋದಿ ಅಲೆಯಿಂದ ಮತ್ತಷ್ಚು ಬೀರಬಹುದಾಗಿದ್ದ ಪರಿಣಾಮವನ್ನು ತಗ್ಗಿಸಿದೆ. ಆದ್ದರಿಂದಲೇ ಹೆಚ್ಚಿನ ಸ್ಥಾನಗಳಲ್ಲಿ ಬಿಜೆಪಿ ಗೆಲುವು ಸಾಧಿಸಲು ಸಾಧ್ಯವಾಗಿದೆ ಎಂದು ವಿವೇಕ್ ರೆಡ್ಡಿ ಹೇಳಿದ್ದಾರೆ.

ಕರ್ನಾಟಕ ಬಿಜೆಪಿ ಘಟಕ ಈಗ ಮುಂಬರುವ ಲೋಕಸಭಾ ಚುನಾವಣೆಯತ್ತ ಚಿತ್ತ ಹರಿಸಿದ್ದು, ಪಕ್ಷ ಬಲಗೊಳಿಸುವ ಬಗ್ಗೆ ಕಾರ್ಯತಂತ್ರ ರೂಪಿಸುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

Indian Stock Market: 5 ದಿನಗಳ ಸತತ ಕುಸಿತಕ್ಕೆ ಕೊನೆಗೂ ಬ್ರೇಕ್, Sensex 301 ಅಂಕ ಏರಿಕೆ!

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

ಬಿಜೆಪಿ ನಿಯೋಗದಿಂದ ರಾಜ್ಯಪಾಲರ ಭೇಟಿ: 'ದ್ವೇಷ ಭಾಷಣ ತಡೆ' ಮಸೂದೆಗೆ ಅಂಕಿತ ಹಾಕದಂತೆ ಮನವಿ!

SCROLL FOR NEXT