ಬಸವರಾಜ್ ಹೊರಟ್ಟಿ 
ರಾಜಕೀಯ

ಸಿಎಂ ಇರೋದು ಹೆಬ್ಬೆಟ್ಟು ಒತ್ತುವುದಕ್ಕಲ್ಲ: ಬಸವರಾಜ್ ಹೊರಟ್ಟಿ

ವಿಧಾನ ಪರಿಷತ್​ ಸಭಾಪತಿ ಹುದ್ದೆ ಕಾಂಗ್ರೆಸ್ ಪಾಲಾಗಿದ್ದು, ಸಭಾಪತಿ ಸ್ಥಾನದ ಆಕಾಂಕ್ಷಿಯಾಗಿದ್ದ....

ಬೆಳಗಾವಿ: ವಿಧಾನ ಪರಿಷತ್​ ಸಭಾಪತಿ ಹುದ್ದೆ ಕಾಂಗ್ರೆಸ್ ಪಾಲಾಗಿದ್ದು, ಸಭಾಪತಿ ಸ್ಥಾನದ ಆಕಾಂಕ್ಷಿಯಾಗಿದ್ದ ಜೆಡಿಎಸ್ ಮುಖಂಡ ಬಸವರಾಜ ಹೊರಟ್ಟಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರ ವಿರುದ್ಧ ತೀವ್ರ ಅಸಮಧಾನ ವ್ಯಕ್ತಪಡಿಸಿದ್ದಾರೆ.
ಮೈತ್ರಿ ಸರ್ಕಾರ ರಚನೆಯಾದ ನಂತರ ಪರಿಷತ್​ ಹಂಗಾಮಿ ಸಭಾಪತಿಯಾಗಿದ್ದ ಬಸವರಾಜ ಹೊರಟ್ಟಿ ಅವರು ತಾವೇ ಸಭಾಪತಿಯಾಗುತ್ತೇವೆ ಎಂಬ ನಂಬಿಕೆಯಲ್ಲಿದ್ದರು. ಆದರೆ, ಆ ಸ್ಥಾನ ಸಿಗದಿದ್ದರಿಂದ ತೀವ್ರ ನಿರಾಸೆಗೊಂಡ ಹೊರಟ್ಟಿ ಅವರು ಹೆಬ್ಬೆಟ್ಟು ಒತ್ತುವುದಕ್ಕೆ ಮುಖ್ಯಮಂತ್ರಿಯಾಗಿರಬಾರದು ಎಂದು ಸಿಎಂ ಎಚ್ ಡಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇಂದು ಸುವರ್ಣ ಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೊರಟ್ಟಿ ಅವರು 'ಎಚ್‌ಡಿಕೆ ಅವರು ಮುಖ್ಯಮಂತ್ರಿಯಾಗಿರುವುದು ಮೈತ್ರಿ ಧರ್ಮ ಪಾಲಿಸುವುದಕ್ಕೆ. ಮೈತ್ರಿ ಪಕ್ಷ ಕಾಂಗ್ರೆಸ್ ನಲ್ಲಿ ಒಗ್ಗಟ್ಟಿಲ್ಲ. ಏಕ ಪಕ್ಷೀಯವಾಗಿ ನಿರ್ಧಾರ ಕೈಗೊಳ್ಳುತ್ತಿದ್ದಾರೆ. ಕಾಂಗ್ರೆಸ್‌ ವರ್ತನೆ ಪ್ರಶ್ನಿಸುವಂತೆ ವರಿಷ್ಠರಿಗೆ ಕೇಳಿಕೊಳ್ಳುತ್ತೇನೆ' ಎಂದಿದ್ದಾರೆ. 
ಪ್ರಮುಖ ಹುದ್ದೆಗಳ ವಿಚಾರದಲ್ಲಿ ಕಾಂಗ್ರೆಸ್‌ ಹೇಳಿದಂತೆ ನಡೆದರೆ, ಇದೇ ತರ ಮುಂದುವರಿದರೆ ಹೆಬ್ಬೆಟ್ಟು ಒತ್ತುವುದಕ್ಕೆ ಮುಖ್ಯಮಂತ್ರಿ ಆಗುತ್ತಾರೆ ಎಂದು ಎಚ್‌ಡಿಕೆ ವಿರುದ್ಧ ಅಸಮಧಾನ ಹೊರ ಹಾಕಿದ್ದಾರೆ. 
ಸಚಿವ ಸ್ಥಾನ ಸಿಗದ ಹತಾಶೆಯಲ್ಲಿದ್ದ ಹೊರಟ್ಟಿ ಅವರಿಗೆ ಸಭಾಪತಿ ಸ್ಥಾನ ಕೊಡಿಸುವುದಾಗಿ ಜೆಡಿಎಸ್ ವರಿಷ್ಠರು ಸಮಾಧಾನ ಮಾಡಿದ್ದರು. ಆದರೆ ಬುಧವಾರ ನಡೆದ ರಾಜಕೀಯ ಬೆಳವಣಿಗೆಯಲ್ಲಿ ಕೊನೆ ಕ್ಷಣದಲ್ಲಿ ಕಾಂಗ್ರೆಸ್ ನ ಪ್ರತಾಪ್ ಚಂದ್ರಶೆಟ್ಟಿ ಅವರನ್ನು ಸಭಾಪತಿಯಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT