ಅಂಬರೀಷ್ 
ರಾಜಕೀಯ

ಕೊನೆಗೂ ಅಂಬರೀಷ್ ಗೆ ಸಂತಾಪ ಸೂಚಿಸಿದ ಲೋಕಸಭೆ

ಇತ್ತೀಚಿಗಷ್ಟೇ ನಿಧನರಾದ ಮಾಜಿ ಕೇಂದ್ರ, ರಾಜ್ಯ ಸಚಿವ ಹಾಗೂ ಹಿರಿಯ ಅಂಬರೀಷ್ ಅವರಿಗೆ ಗುರುವಾರ ಲೋಕಸಭೆಯಲ್ಲಿ ಸಂತಾಪ ಸೂಚಿಸಲಾಯಿತು.

ನವದೆಹಲಿ: ಇತ್ತೀಚಿಗಷ್ಟೇ ನಿಧನರಾದ ಮಾಜಿ ಕೇಂದ್ರ, ರಾಜ್ಯ ಸಚಿವ ಹಾಗೂ ಹಿರಿಯ  ಅಂಬರೀಷ್ ಅವರಿಗೆ ಗುರುವಾರ ಲೋಕಸಭೆಯಲ್ಲಿ ಸಂತಾಪ ಸೂಚಿಸಲಾಯಿತು. 
ಕಳೆದ ಮಂಗಳವಾರದಿಂದ ಸಂಸತ್ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಮೊದಲ ದಿನವೇ ಎನ್​.ಡಿ ತಿವಾರಿ, ಮದನ್​ ಲಾಲ್​ ಕುರಾನಾ, ಸಿ.ಕೆ. ಜಾಫರ್​ ಷರೀಫ್​, ಗುರುದಾಸ್​ ಕಾಮತ್​ ಮುಂತಾದವರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು. ಆದರೆ, ಮಾಜಿ ಸಂಸದರೂ, ಮಾಜಿ ಕೇಂದ್ರ ಸಚಿವರೂ ಆಗಿದ್ದ ಅಂಬರೀಷ್​ ಅವರ ಹೆಸರು ಈ ಪಟ್ಟಿಯಲ್ಲಿ ಇಲ್ಲದೇ ಇರುವುದಕ್ಕೆ ಮಾಜಿ ಪ್ರಧಾನಿ ಎಚ್​.ಡಿ. ದೇವೇಗೌಡ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ಅಲ್ಲದೆ ಈ ವಿಚಾರವನ್ನು ಸ್ಪೀಕರ್ ಸುಮಿತ್ರಾ ಮಹಾಜನ್ ಅವರ ಗಮನಕ್ಕೆ ತಂದಿದ್ದರು. ಬಳಿಕ ಎಚ್ಚೆತ್ತುಕೊಂಡಿದ್ದ ಸ್ಪೀಕರ್​ ಸುಮಿತ್ರಾ ಮಹಾಜನ್​, ಬುಧವಾರ ಸಂತಾಪ ಸೂಚಿಸುವುದಾಗಿ ಹೇಳಿದ್ದರು. ಆದರೆ, ಬುಧವಾರವೂ ಅಂಬರೀಷ್​ ಅವರಿಗೆ ಸಂತಾಪ ಸೂಚಿಸಲಿಲ್ಲ. 
ಮೂರನೆ ದಿನವಾದ ಇಂದು ಕಲಾಪ ಆರಂಭವಾಗುತ್ತಿದ್ದಂತೆ ಸುಮಿತ್ರ ಮಹಾಜನ್ ಅವರು ನವೆಂಬರ್ 24ರಂದು ನಿಧನರಾದ ಅಂಬರೀಷ್ ಅವರಿಗೆ ಸಂತಾಪ ಸೂಚಿಸಿ, ರಾಜಕೀಯ ಕ್ಷೇತ್ರಕ್ಕೆ ಅವರು ನೀಡಿದ ಸೇವೆಯನ್ನು ಸ್ಮರಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT