ದಿನೇಶ್ ಗುಂಡೂರಾವ್ 
ರಾಜಕೀಯ

ಡಿಸೆಂಬರ್ 22 ಸಂಪುಟ ವಿಸ್ತರಣೆ: ಕಾಂಗ್ರೆಸ್ ಆಕಾಂಕ್ಷಿಗಳಲ್ಲಿ ಅನುಮಾನದ ಕಾರ್ಮೋಡ!

ಡಿಸೆಂಬರ್ 22 ರಂದು ಸಂಪುಟ ವಿಸ್ತರಣೆ ಬಗ್ಗೆ ಕಾಂಗ್ರೆಸ್ ಪಕ್ಷದ ಆಕಾಂಕ್ಷಿಗಳಲ್ಲಿ ಅನುಮಾನ ಕಾಡತೊಡಗಿದೆ.ಆದಾಗ್ಯೂ, ಸಂಪುಟ ವಿಸ್ತರಣೆ ವಿಳಂಬ ಮಾಡುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಬೆಂಗಳೂರು: ಡಿಸೆಂಬರ್ 22 ರಂದು ಸಂಪುಟ ವಿಸ್ತರಣೆ ಬಗ್ಗೆ ಕಾಂಗ್ರೆಸ್ ಪಕ್ಷದ ಆಕಾಂಕ್ಷಿಗಳಲ್ಲಿ ಅನುಮಾನ ಕಾಡತೊಡಗಿದೆ. ಸಚಿವ ಸ್ಥಾನ ಸಿಗದಿರುವವರು ಬಂಡಾಯ ಏಳುವುದರಿಂದ ಸಮ್ಮಿಶ್ರ ಸರ್ಕಾರದ ಸ್ಥಿರತೆ ಮೇಲೆ ಪರಿಣಾಮ ಬೀರುವ ಆತಂಕದಲ್ಲಿ  ನಾಯಕರು ಮತ್ತೊಂದು ಸುಳ್ಳಿನ ಭರವಸೆ ನೀಡಿದ್ದಾರೆ ಎಂದು ಹಲವರು ಹೇಳಿಕೊಳ್ಳುತ್ತಿದ್ದಾರೆ.

ಆದಾಗ್ಯೂ, ಸಂಪುಟ ವಿಸ್ತರಣೆ ವಿಳಂಬ ಮಾಡುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಚಳಿಗಾಲ ಅಧಿವೇಶನಕ್ಕೂ ಮುಂಚಿತವಾಗಿ ನಡೆದ ಶಾಸಕಾಂಗ ಸಭೆಯಲ್ಲಿ ಡಿಸೆಂಬರ್ 22 ರಂದು ಸಂಪುಟ ವಿಸ್ತರಣೆ  ನಡೆಯಲಿದೆ ಎಂದು ರಾಜ್ಯ ಕಾಂಗ್ರೆಸ್ ನಾಯಕರು ಘೋಷಿಸಿದ್ದರು.  ಡಿಸೆಂಬರ್ 18 ರಂದು ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಈ ವಿಚಾರದ ಬಗ್ಗೆ ಚರ್ಚೆಯಾಗುವ ಸಾಧ್ಯತೆ ಇದೆ.

ಹಲವು ತಿಂಗಳುಗಳಿಂದ ಸಂಪುಟ ವಿಸ್ತರಣೆ ಮಾಡುವುದಾಗಿ ನಾಯಕರು ಹೇಳುತ್ತಲೇ ಇದ್ದಾರೆ. ಆದರೆ.  ಡಿಸೆಂಬರ್ 22 ಸಂಪುಟ ವಿಸ್ತರಣೆ ಮಾಡುತ್ತಾರೆ ಎಂಬ ಭರವಸೆ ಇಲ್ಲ ಎಂದು  ಬಿರಿಯ ಕಾಂಗ್ರೆಸ್ ಮುಖಂಡ ಹಾಗೂ ಸಚಿವ ಸ್ಥಾನದ ಆಕಾಂಕ್ಷಿಯೊಬ್ಬರು ಹೇಳಿದ್ದಾರೆ.

ಇನ್ನೂ ಕೆಲವು ದಿನ ಕಾಂಗ್ರೆಸ್ ಹೈಕಮಾಂಡ್  ರಾಜಸ್ತಾನ, ಮಧ್ಯಪ್ರದೇಶ, ಮತ್ತು ಛತ್ತೀಸ್ ಗಡ  ಸರ್ಕಾರ ರಚನೆ ಸಂಬಂಧ ಬ್ಯೂಸಿಯಾಗಲಿದ್ದು,  ಕರ್ನಾಟಕದ ಬಗ್ಗೆ  ಆದ್ಯತೆ ನೀಡುವುದು ಕಡಿಮೆ ಎನ್ನಲಾಗುತ್ತಿದೆ.

 ಎಐಸಿಸಿ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್ ಸೇರಿದಂತೆ ಹಲವು ನಾಯಕರು ಹಿರಿಯ ನಾಯಕರ ವಿರುದ್ಧ ಅಸಮಾಧಾನಗೊಂಡಿದ್ದಾರೆ. ಯಾವುದೇ ಪ್ರಮುಖ ವಿಚಾರಗಳ ಸಂದರ್ಭದಲ್ಲಿ ಪ್ರಮುಖ ನಾಯಕರ ಕಡೆಗಣನೆ ಈ ನಾಯಕರ ಅಸಮಾಧಾನಕ್ಕೆ ಕಾರಣವಾಗಿದೆ.

ಕೆಲ ನಾಯಕರು ಮಾತ್ರ ಜೆಡಿಎಸ್ ನಾಯಕತ್ವದೊಂದಿಗೆ ಹೊಂದಾಣಿಕೆಯಲ್ಲಿದ್ದಾರೆ. ಇದು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಮೇಲೆ ಪರಿಣಾಮ ಬೀರಲಿದೆ ಎಂದು ಮಾಜಿ ನಾಯಕರೊಬ್ಬರು ಹೇಳುತ್ತಾರೆ.

 ಸಭಾಪತಿ ಆಯ್ಕೆ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರ ಕಡೆಗಣನೆಯಿಂದ  ಕಾಂಗ್ರೆಸ್ ಪಕ್ಷದೊಳಗಿನ ಹಲವು ನಾಯಕರು ಆಕ್ರೋಶಗೊಂಡಿದ್ದಾರೆ. ಕೊನೆ ಕ್ಷಣದಲ್ಲಿ ನಡೆದ ಬೆಳವಣಿಗೆಯಲ್ಲಿ  ಎಸ್ ಆರ್ ಪಾಟೀಲ್ ಅವರನ್ನು ತುಳಿದು ಪ್ರತಾಪ್ ಚಂದ್ರ ಶೆಟ್ಟಿ ಅವರನ್ನು ಸಭಾಪತಿಯನ್ನಾಗಿ ಮಾಡಲಾಗಿದೆ.

ಆದಾಗ್ಯೂ,  ಸಿದ್ದರಾಮಯ್ಯ ನಾಯಕತ್ವದ ಬಗ್ಗೆ  ಪಕ್ಷದ ಶಾಸಕರಿಗೆ ಅಸಮಾಧಾನವಿದೆ ಎಂಬುದು ಸುಳ್ಳಿನ ವಿಚಾರ ಎನ್ನುವ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್  ಡಿಸೆಂಬರ್ 22 ರಂದು ಸಂಪುಟ ವಿಸ್ತರಣೆಯಾಗಲಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್, ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

ಲೆಬನಾನ್ ನಲ್ಲಿ ಇಸ್ರೇಲ್ ಆರ್ಭಟ: ಮನೆಗಳ ಮೇಲೆ ಸ್ಫೋಟಕಗಳಿಂದ ದಾಳಿ; ಹಲವು ಹಳ್ಳಿಗಳು ನಾಮಾವಶೇಷ!

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

SCROLL FOR NEXT