ರಮೇಶ್ ಜಾರಕಿಹೊಳಿ 
ರಾಜಕೀಯ

ರಾಜೀನಾಮೆ ಮಾತಿಗೆ ಈಗಲೂ ಬದ್ಧ, 4 ದಿನ ಕಾದು ನೋಡಿ: ರಮೇಶ್ ಜಾರಕಿಹೊಳಿ

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಮಾತಿಗೆ ನಾನು ಈಗಲೂ ಬದ್ಧ. ಆದರೆ ನನಗೆ ನಾಲ್ಕು ದಿನ ಸಮಯ ಕೊಡಿ.

ಬೆಂಗಳೂರು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಮಾತಿಗೆ ನಾನು ಈಗಲೂ ಬದ್ಧ. ಆದರೆ ನನಗೆ ನಾಲ್ಕು ದಿನ ಸಮಯ ಕೊಡಿ. ನಾಲ್ಕು ದಿನದಲ್ಲಿ ನನ್ನ ನಿರ್ಧಾರ ಪ್ರಕಟಿಸುತ್ತೇನೆ ಎಂದು ಸಚಿವ ಸ್ಥಾನ ಕಳೆದುಕೊಂಡ ಹಿರಿಯ ಕಾಂಗ್ರೆಸ್ ನಾಯಕ ರಮೇಶ್ ಜಾರಕಿಹೊಳಿ ಅವರು ಸೋಮವಾರ ಹೇಳಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ, ಕಳೆದ ಒಂದು ವಾರದಲ್ಲಿ ಮಾಧ್ಯಮಗಳು ಹೀರೋನ ವಿಲನ್ ಮಾಡಿವೆ. ವಿಲನ್ ​ನ  ಹೀರೋ ಮಾಡಿವೆ. ವಿಲನ್ ಯಾರು? ಹೀರೋ ಯಾರು? ಅನ್ನೋದನ್ನು ಮುಂದೆ ಹೇಳುತ್ತೇನೆ ಎಂದರು.
ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಸೇರಿದಂತೆ ಪಕ್ಷದ ಯಾವ ಮುಖಂಡರನ್ನು ನಾನು ಭೇಟಿಯಾಗಲ್ಲ ಎಂದು ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
ಇದೇ ವೇಳೆ ನೀವು ಬಿಜೆಪಿಗೆ ಹೋಗುತ್ತೀರಾ? ನಿಮ್ಮ ಜತೆ ಎಷ್ಟು ಶಾಸಕರಿದ್ದಾರೆ ಎಂಬ ವರದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಜಾರಕಿಹೊಳಿ,  ನನ್ನ ಜೊತೆ ಎಷ್ಟು ಶಾಸಕರು ಇದ್ದಾರೆ ಅನ್ನೋದನ್ನು ನಿಮಗ್ಯಾಕೆ ಹೇಳ್ಬೇಕು. ಎಷ್ಟು ಜನ ಇದ್ದಾರೆ ಅನ್ನೋದನ್ನು ಮುಂದಿನ ದಿನದಲ್ಲಿ ಬಹಿರಂಗಪಡಿಸುತ್ತೇನೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT