ಎಚ್ ಡಿ ಕುಮಾರಸ್ವಾಮಿ 
ರಾಜಕೀಯ

ರೈತರ ಸಾಲಮನ್ನಾ ಯೋಜನೆ ಕುರಿತು ಪ್ರಧಾನಿ ಮೋದಿ ಹೇಳಿಕೆ ದುರದೃಷ್ಟಕರ: ಸಿಎಂ ಕುಮಾರಸ್ವಾಮಿ

ರಾಜ್ಯದ ರೈತರ ಸಾಲಮನ್ನಾ ಯೋಜನೆ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ ಹೇಳಿಕೆ ಸರಿ ಇಲ್ಲ...

ಬೆಂಗಳೂರು: ರಾಜ್ಯದ ರೈತರ ಸಾಲಮನ್ನಾ ಯೋಜನೆ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ ಹೇಳಿಕೆ ಸರಿ ಇಲ್ಲ. ಅದು ಸೂಕ್ಷ್ಮವಲ್ಲದ ಮತ್ತು ದುರದೃಷ್ಟಕರ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಇಂದು ಟ್ವೀಟ್‌ ಮಾಡಿರುವ ಸಿಎಂ, ಸಾಲಮನ್ನಾ ಕುರಿತು ಪ್ರಧಾನಿ ನರೇಂದ್ರ ಮೋದಿ ದಾರಿ ತಪ್ಪಿಸುವ ಹೇಳಿಕೆ ನೀಡುತ್ತಿದ್ದಾರೆ. ಅವರ ಹೇಳಿಕೆಯು ಸಂಪೂರ್ಣ ತಪ್ಪಾದ, ಸೂಕ್ಷ್ಮವಲ್ಲದ ಮತ್ತು ದುರದೃಷ್ಟಕರ ಎಂದಿದ್ದಾರೆ.
ಸಾಲಮನ್ನಾ ಯೋಜನೆಯ ಬಗ್ಗೆ ಸಂಪೂರ್ಣ ಸತ್ಯವನ್ನು ಅರಿಯದೆ ದೇಶದ ಜನರನ್ನು ಮೋದಿಯವರು ತಪ್ಪು ದಾರಿಗೆ ಎಳೆಯುತ್ತಿರುವುದು ದುಃಖದ ವಿಚಾರ ಎಂದು ಸಿಎಂ ಹೇಳಿದ್ದಾರೆ.
ಮಾನ್ಯ ಪ್ರಧಾನ ಮಂತ್ರಿಗಳೇ ಹೇಳಿಕೆಯನ್ನು ನೀಡುವ ಮುನ್ನ ಯೋಜನೆಯ ಸತ್ಯಾಸತ್ಯತೆಯನ್ನು ಅರಿತುಕೊಳ್ಳಿ. ಬೆಳೆ ಸಾಲಮನ್ನಾವು ಪಾರದರ್ಶಕವಾಗಿದ್ದು, ಇತರೆ ರಾಜ್ಯಗಳಿಗೆ ಹೋಲಿಸಿದರೆ ಇಲ್ಲಿ ಆನ್‌ಲೈನ್‌ನಲ್ಲಿಯೇ ಮಾಹಿತಿ ಲಭ್ಯವಿದೆ. ರಾಜ್ಯದ ಪ್ರತಿಯೊಬ್ಬರ ತೆರಿಗೆ ಹಣವನ್ನು ವ್ಯವಸ್ಥಿತವಾಗಿ ರೈತರ ಕೈಸೇರುವಂತೆ ನೋಡಿಕೊಳ್ಳಲಾಗುತ್ತಿದೆ. ಪ್ರತಿ ರೈತನು ಕೂಡ ಇದರ ಲಾಭವನ್ನು ಪಡೆಯುತ್ತಾನೆ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.
ಕಾಂಗ್ರೆಸ್‌-ಜೆಡಿಎಸ್ ಮೈತ್ರಿ ಸರ್ಕಾರದ ರೈತರ ಸಾಲಮನ್ನಾ ಯೋಜನೆ 'ಅಪಹಾಸ್ಯ' ಎಂದು ಮೋದಿ ಲೇವಡಿ ಮಾಡಿದ್ದ ಪ್ರಧಾನಿ ಮೋದಿ, ರೈತರ ಸಾಲ ಮನ್ನಾ ಘೋಷಣೆ ರೈತರ ಬಗ್ಗೆ ಮಾಡಿದ ಅತ್ಯಂತ ಕ್ರೂರ ಜೋಕ್ ಎಂದು ಟೀಕಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT