ಮುಖ್ಯಮಂತ್ರಿ ಸಿದ್ದರಾಮಯ್ಯ 
ರಾಜಕೀಯ

ಹತ್ಯೆಗೀಡಾದ ಸಂತೋಷ್ ಬಿಜೆಪಿ ಕಾರ್ಯಕರ್ತನಲ್ಲ, ಸಿಸಿಬಿ ತನಿಖೆಗೆ ಆದೇಶ: ಸಿಎಂ ಸಿದ್ದರಾಮಯ್ಯ

ಮೊನ್ನೆ ಬುಧವಾರ ಸಂಜೆ ಬೆಂಗಳೂರಿನ ಜೆಸಿ ನಗರ ಸಮೀಪ ಚಿನ್ನಪ್ಪ ಗಾರ್ಡನ್ ನಲ್ಲಿ ...

ಬೆಂಗಳೂರು: ಮೊನ್ನೆ ಬುಧವಾರ ಸಂಜೆ ಬೆಂಗಳೂರಿನ ಜೆಸಿ ನಗರ ಸಮೀಪ ಚಿನ್ನಪ್ಪ ಗಾರ್ಡನ್ ನಲ್ಲಿ ಕೊಲೆಯಾದ ವ್ಯಕ್ತಿ ಸಂತೋಷ್ ಬಿಜೆಪಿ ಕಾರ್ಯಕರ್ತನಲ್ಲ, ರಾಜಕೀಯ ಲಾಭಕ್ಕಾಗಿ ಬಿಜೆಪಿ ಮುಖಂಡರು ಆತನನ್ನು ಬಿಜೆಪಿ ಕಾರ್ಯಕರ್ತ ಎಂದು ಬಿಂಬಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೊಲೆಯಾದವರು, ಸತ್ತವರೆಲ್ಲರನ್ನೂ ಬಿಜೆಪಿ ಕಾರ್ಯಕರ್ತರೆಂದು ಬಿಂಬಿಸುವುದು ಸರಿಯಲ್ಲ. ಅವರ ಮನೆಗೆ ಭೇಟಿ ನೀಡುವುದಿಲ್ಲ. ಆದರೆ ಸಂತೋಷ್ ಕೊಲೆಯ ಬಗ್ಗೆ ಬೇಸರವಿದೆ, ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಬೇಕು. ಈಗಾಗಲೇ ಹತ್ಯೆಯ ತನಿಖೆಯನ್ನು ಸಿಸಿಬಿಗೆ ವಹಿಸಲಾಗಿದೆ ಎಂದು ಹೇಳಿದರು.
ನಿನ್ನೆ ಜೆಸಿ ನಗರ ಹತ್ತಿರ ಜಯಮಹಲ್ ನಲ್ಲಿ ಸಚಿವ ಯುಟಿ ಖಾದರ್ ನಿವಾಸಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಔತಣಕೂಟಕ್ಕೆ ಹೋಗಿದ್ದರು. ಆದರೆ ಅಲ್ಲಿಂದ ಸ್ವಲ್ಪವೇ ದೂರದಲ್ಲಿದ್ದ ಸಂತೋಷ್ ಮನೆಗೆ ಹೋಗಿ ಅವರ ಕುಟುಂಬ ವರ್ಗದವರಿಗೆ ಸಾಂತ್ವನ ಹೇಳುವ ಕೆಲಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾಡಲಿಲ್ಲ ಎಂಬ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಈ ಹೇಳಿಕೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT