ಬೆಂಗಳೂರು: ಭಾಷಣದಲ್ಲಿ ಮಹಾದಾಯಿ ಬಗ್ಗೆ ಮೌನ, ಪ್ರಧಾನಿ ವಿರುದ್ಧ ಅಸಮಾಧಾನ! 
ರಾಜಕೀಯ

ಬೆಂಗಳೂರು: ಭಾಷಣದಲ್ಲಿ ಮಹಾದಾಯಿ ಬಗ್ಗೆ ಮೌನ, ಪ್ರಧಾನಿ ವಿರುದ್ಧ ಅಸಮಾಧಾನ!

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಬಿಜೆಪಿಯ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ವೇಳೆ ಪ್ರಧಾನಿ ನರೇಂದ್ರ ಮೋದಿ ಮಹದಾಯಿ ಬಗ್ಗೆ..

ಬೆಂಗಳೂರು: ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಬಿಜೆಪಿಯ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ವೇಳೆ ಪ್ರಧಾನಿ ನರೇಂದ್ರ ಮೋದಿ ಮಹದಾಯಿ ಬಗ್ಗೆ ಮಾತನಾಡಲಿದ್ದಾರೆ ಎಂಬ ನಿರೀಕ್ಷೆ ಇತ್ತು. ಆದರೆ ಆ ನಿರೀಕ್ಷೆ ಹುಸಿಯಾಗಿದ್ದು, ಮಹದಾಯಿ ನೀರಿಗಾಗಿ ಹೋರಾಡುತ್ತಿರುವವರಲ್ಲಿ ಅಸಮಾಧಾನ ಮೂಡಿದೆ. 
ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಜ್ಯ ಸರ್ಕಾರದ ಆಡಳಿತ ವೈಫಲ್ಯ, ಅನುದಾನ ಬಳಕೆ ಮಾಡಿಕೊಳ್ಳದೇ ಇರುವುದು, ರಾಜ್ಯದ ಕಾನೂನು ಸುವ್ಯವಸ್ಥೆ ಬಗ್ಗೆ ಮಾತನಾಡಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು, ಆದರೆ ಮಹದಾಯಿ ನೀರಿನ ವಿವಾದವನ್ನು ಬಗೆಹರಿಸುವುದಕ್ಕೆ ಸಂಬಂಧಿಸಿದಂತೆ ಒಂದೇ ಒಂದು ಶಬ್ದವನ್ನೂ ಮಾತನಾಡಲಿಲ್ಲ. ಇದು ಮಹದಾಯಿ ನೀರಿಗಾಗಿ ಹೋರಾಡುತ್ತಿರುವವರಲ್ಲಿ ತೀವ್ರ ಅಸಮಾಧಾನ ಮೂಡುವಂತೆ ಮಾಡಿದೆ. 
ಕಾರ್ಯಕ್ರಮಕ್ಕೂ ಮುನ್ನ ಮಾತನಾಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ, ಸಮಾರೋಪ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಯಾತ್ರೆ ಹೊರಪಡಿಸಿ ಬೇರೆ ಯಾವುದೇ ವಿಚಾರದ ಬಗ್ಗೆಯೂ ಮಾತನಾಡುವ ಸಾಧ್ಯತೆ ಕಡಿಮೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದರು, ಈ ಮೂಲಕ ಪರೋಕ್ಷವಾಗಿ ಮೋದಿಯವರು ಮಹದಾಯಿ ವಿವಾದ ಪ್ರಸ್ತಾಪಿಸುವುದಿಲ್ಲ ಎಂಬ ಸುಳಿವು ನೀಡಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT