ಬೆಂಗಳೂರು: ಭಾಷಣದಲ್ಲಿ ಮಹಾದಾಯಿ ಬಗ್ಗೆ ಮೌನ, ಪ್ರಧಾನಿ ವಿರುದ್ಧ ಅಸಮಾಧಾನ! 
ರಾಜಕೀಯ

ಬೆಂಗಳೂರು: ಭಾಷಣದಲ್ಲಿ ಮಹಾದಾಯಿ ಬಗ್ಗೆ ಮೌನ, ಪ್ರಧಾನಿ ವಿರುದ್ಧ ಅಸಮಾಧಾನ!

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಬಿಜೆಪಿಯ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ವೇಳೆ ಪ್ರಧಾನಿ ನರೇಂದ್ರ ಮೋದಿ ಮಹದಾಯಿ ಬಗ್ಗೆ..

ಬೆಂಗಳೂರು: ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಬಿಜೆಪಿಯ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ವೇಳೆ ಪ್ರಧಾನಿ ನರೇಂದ್ರ ಮೋದಿ ಮಹದಾಯಿ ಬಗ್ಗೆ ಮಾತನಾಡಲಿದ್ದಾರೆ ಎಂಬ ನಿರೀಕ್ಷೆ ಇತ್ತು. ಆದರೆ ಆ ನಿರೀಕ್ಷೆ ಹುಸಿಯಾಗಿದ್ದು, ಮಹದಾಯಿ ನೀರಿಗಾಗಿ ಹೋರಾಡುತ್ತಿರುವವರಲ್ಲಿ ಅಸಮಾಧಾನ ಮೂಡಿದೆ. 
ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಜ್ಯ ಸರ್ಕಾರದ ಆಡಳಿತ ವೈಫಲ್ಯ, ಅನುದಾನ ಬಳಕೆ ಮಾಡಿಕೊಳ್ಳದೇ ಇರುವುದು, ರಾಜ್ಯದ ಕಾನೂನು ಸುವ್ಯವಸ್ಥೆ ಬಗ್ಗೆ ಮಾತನಾಡಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು, ಆದರೆ ಮಹದಾಯಿ ನೀರಿನ ವಿವಾದವನ್ನು ಬಗೆಹರಿಸುವುದಕ್ಕೆ ಸಂಬಂಧಿಸಿದಂತೆ ಒಂದೇ ಒಂದು ಶಬ್ದವನ್ನೂ ಮಾತನಾಡಲಿಲ್ಲ. ಇದು ಮಹದಾಯಿ ನೀರಿಗಾಗಿ ಹೋರಾಡುತ್ತಿರುವವರಲ್ಲಿ ತೀವ್ರ ಅಸಮಾಧಾನ ಮೂಡುವಂತೆ ಮಾಡಿದೆ. 
ಕಾರ್ಯಕ್ರಮಕ್ಕೂ ಮುನ್ನ ಮಾತನಾಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ, ಸಮಾರೋಪ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಯಾತ್ರೆ ಹೊರಪಡಿಸಿ ಬೇರೆ ಯಾವುದೇ ವಿಚಾರದ ಬಗ್ಗೆಯೂ ಮಾತನಾಡುವ ಸಾಧ್ಯತೆ ಕಡಿಮೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದರು, ಈ ಮೂಲಕ ಪರೋಕ್ಷವಾಗಿ ಮೋದಿಯವರು ಮಹದಾಯಿ ವಿವಾದ ಪ್ರಸ್ತಾಪಿಸುವುದಿಲ್ಲ ಎಂಬ ಸುಳಿವು ನೀಡಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT