ಸಂಗ್ರಹ ಚಿತ್ರ 
ರಾಜಕೀಯ

ವಿಧಾನಸಭಾ ಚುನಾವಣೆ: ಮಾಜಿ ಶಾಸಕ ಗವಿಯಪ್ಪ, ಎಂ.ವೈ. ಘೋರ್ಪಡೆ ಪುತ್ರ ಬಿಜೆಪಿಗೆ ಸೇರ್ಪಡೆ

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಜಯಭೇರಿ ಬಾರಿಸಿದ್ದ ಆನಂದ್ ಸಿಂಗ್ ಅವರನ್ನು ತನ್ನತ್ತ ಸೆಳೆದುಕೊಂಡ ಕಾಂಗ್ರೆಸ್'ಗೆ ಬಿಜೆಪಿ ಸೆಡ್ಡು ಹೊಡೆದಿದ್ದು, ಬಳ್ಳಾರಿಯ ಮಾಜಿ ಶಾಸಕ ಹೆಚ್.ಆರ್.ಗವಿಯಪ್ಪ ಅವರನ್ನು ತನ್ನತ್ತ ಸೆಳೆದುಕೊಂಡಿದೆ...

ನವದೆಹಲಿ: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಜಯಭೇರಿ ಬಾರಿಸಿದ್ದ ಆನಂದ್ ಸಿಂಗ್ ಅವರನ್ನು ತನ್ನತ್ತ ಸೆಳೆದುಕೊಂಡ ಕಾಂಗ್ರೆಸ್'ಗೆ ಬಿಜೆಪಿ ಸೆಡ್ಡು ಹೊಡೆದಿದ್ದು, ಬಳ್ಳಾರಿಯ ಮಾಜಿ ಶಾಸಕ ಹೆಚ್.ಆರ್.ಗವಿಯಪ್ಪ ಅವರನ್ನು ತನ್ನತ್ತ ಸೆಳೆದುಕೊಂಡಿದೆ. 
ಇದೇ ವೇಳೆ ಮಾಜಿ ಸಚಿವ ಎಂ.ವೈ ಘೋರ್ಪಡೆ ಪುತ್ರ ಕಾರ್ತಿಕೇಯ ರಾಜೇ ಘೋರ್ಪಡೆ ಕೂಡ ಬಿಜೆಪಿಗೆ ಸೋವಾರ ಸೇರ್ಪಡೆಗೊಂಡಿದ್ದಾರೆ. 
2008ರ ವಿಧಾನಸಭಾ ಚುನಾವಣೆಯಲ್ಲಿ ಆನಂದ್ ಸಿಂಗ್ ವಿರುದ್ಧ ಸ್ಪರ್ಧಿಸಿ ಗವಿಯಪ್ಪ ಅವರು ಪರಾಭವಗೊಂಡಿದ್ದರು. ದೆಹಲಿಯಲ್ಲಿನ ಬಿಜೆಪಿ ಕಚೇರಿಯಲ್ಲಿ ಕೇಂದ್ರ ಸಚಿವಾರದ ಅನಂತ್ ಕುಮಾರ್, ಡಿ.ವಿ. ಸದಾನಂದ ಗೌಡ, ಕರ್ನಾಟಕ ಬಿಜೆಪಿ ಚುನಾವಣಾ ಉಸ್ತುವಾರಿ ಪ್ರಕಾಶ್ ಜವಡೇಕರ್ ಮತ್ತು ಬಳ್ಳಾರಿ ಸಂಸದ ಶ್ರೀ ರಾಮುಲು ಅವರ ಸಮ್ಮುಖದಲ್ಲಿ ಇಬ್ಬರೂ ನಾಯಕರು ಬಿಜೆಪಿಗೆ ಸೇರ್ಪಡೆಗೊಂಡರು, ಜವಡೇಕರ್ ಅವರು ಇಬ್ಬರು ನಾಯಕರಿಗೂ ಪಕ್ಷದ ಪ್ರಾಥಮಿತ ಸದಸ್ಯತ್ವ ನೀಡಿದರು. 
ಗವಿಯಪ್ಪ ಅವರು ಹೊಸಪೇಟೆ ಅಭ್ಯರ್ಥಿಯಾಗುವ ಸಾಧ್ಯತೆಗಳಿವೆ. ಹೊಸಪೇಟೆ ಶಾಸಕರಾಗಿದ್ದ ಆನಂತ್ ಸಿಂಗ್ ಕಾಂಗ್ರೆಸ್ ಸೇರ್ಪಡೆಗೊಂಡಿದ್ದು, ವಿಧಾನಸಬೆ ಚುನಾವಣೆಯಲ್ಲಿ ಅವರು ಕಾಂಗ್ರೆಸ್ ಟಿಕೆಟ್ ನಿಂದ ಸ್ಪರ್ಧಿಸುವುದು ಖಚಿತವಾದ ಹಿನ್ನಲೆಯಲ್ಲಿ ಗವಿಯಪ್ಪ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

SCROLL FOR NEXT