ಸಂಗ್ರಹ ಚಿತ್ರ 
ರಾಜಕೀಯ

ವಿಧಾನಸಭಾ ಚುನಾವಣೆ: ಮಾಜಿ ಶಾಸಕ ಗವಿಯಪ್ಪ, ಎಂ.ವೈ. ಘೋರ್ಪಡೆ ಪುತ್ರ ಬಿಜೆಪಿಗೆ ಸೇರ್ಪಡೆ

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಜಯಭೇರಿ ಬಾರಿಸಿದ್ದ ಆನಂದ್ ಸಿಂಗ್ ಅವರನ್ನು ತನ್ನತ್ತ ಸೆಳೆದುಕೊಂಡ ಕಾಂಗ್ರೆಸ್'ಗೆ ಬಿಜೆಪಿ ಸೆಡ್ಡು ಹೊಡೆದಿದ್ದು, ಬಳ್ಳಾರಿಯ ಮಾಜಿ ಶಾಸಕ ಹೆಚ್.ಆರ್.ಗವಿಯಪ್ಪ ಅವರನ್ನು ತನ್ನತ್ತ ಸೆಳೆದುಕೊಂಡಿದೆ...

ನವದೆಹಲಿ: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಜಯಭೇರಿ ಬಾರಿಸಿದ್ದ ಆನಂದ್ ಸಿಂಗ್ ಅವರನ್ನು ತನ್ನತ್ತ ಸೆಳೆದುಕೊಂಡ ಕಾಂಗ್ರೆಸ್'ಗೆ ಬಿಜೆಪಿ ಸೆಡ್ಡು ಹೊಡೆದಿದ್ದು, ಬಳ್ಳಾರಿಯ ಮಾಜಿ ಶಾಸಕ ಹೆಚ್.ಆರ್.ಗವಿಯಪ್ಪ ಅವರನ್ನು ತನ್ನತ್ತ ಸೆಳೆದುಕೊಂಡಿದೆ. 
ಇದೇ ವೇಳೆ ಮಾಜಿ ಸಚಿವ ಎಂ.ವೈ ಘೋರ್ಪಡೆ ಪುತ್ರ ಕಾರ್ತಿಕೇಯ ರಾಜೇ ಘೋರ್ಪಡೆ ಕೂಡ ಬಿಜೆಪಿಗೆ ಸೋವಾರ ಸೇರ್ಪಡೆಗೊಂಡಿದ್ದಾರೆ. 
2008ರ ವಿಧಾನಸಭಾ ಚುನಾವಣೆಯಲ್ಲಿ ಆನಂದ್ ಸಿಂಗ್ ವಿರುದ್ಧ ಸ್ಪರ್ಧಿಸಿ ಗವಿಯಪ್ಪ ಅವರು ಪರಾಭವಗೊಂಡಿದ್ದರು. ದೆಹಲಿಯಲ್ಲಿನ ಬಿಜೆಪಿ ಕಚೇರಿಯಲ್ಲಿ ಕೇಂದ್ರ ಸಚಿವಾರದ ಅನಂತ್ ಕುಮಾರ್, ಡಿ.ವಿ. ಸದಾನಂದ ಗೌಡ, ಕರ್ನಾಟಕ ಬಿಜೆಪಿ ಚುನಾವಣಾ ಉಸ್ತುವಾರಿ ಪ್ರಕಾಶ್ ಜವಡೇಕರ್ ಮತ್ತು ಬಳ್ಳಾರಿ ಸಂಸದ ಶ್ರೀ ರಾಮುಲು ಅವರ ಸಮ್ಮುಖದಲ್ಲಿ ಇಬ್ಬರೂ ನಾಯಕರು ಬಿಜೆಪಿಗೆ ಸೇರ್ಪಡೆಗೊಂಡರು, ಜವಡೇಕರ್ ಅವರು ಇಬ್ಬರು ನಾಯಕರಿಗೂ ಪಕ್ಷದ ಪ್ರಾಥಮಿತ ಸದಸ್ಯತ್ವ ನೀಡಿದರು. 
ಗವಿಯಪ್ಪ ಅವರು ಹೊಸಪೇಟೆ ಅಭ್ಯರ್ಥಿಯಾಗುವ ಸಾಧ್ಯತೆಗಳಿವೆ. ಹೊಸಪೇಟೆ ಶಾಸಕರಾಗಿದ್ದ ಆನಂತ್ ಸಿಂಗ್ ಕಾಂಗ್ರೆಸ್ ಸೇರ್ಪಡೆಗೊಂಡಿದ್ದು, ವಿಧಾನಸಬೆ ಚುನಾವಣೆಯಲ್ಲಿ ಅವರು ಕಾಂಗ್ರೆಸ್ ಟಿಕೆಟ್ ನಿಂದ ಸ್ಪರ್ಧಿಸುವುದು ಖಚಿತವಾದ ಹಿನ್ನಲೆಯಲ್ಲಿ ಗವಿಯಪ್ಪ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆಂದು ತಿಳಿದುಬಂದಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT