ಹುಲಿಗೆಮ್ಮ ದೇವಸ್ಥಾನದಲ್ಲಿ ರಾಹುಲ್ ಗಾಂಧಿ 
ರಾಜಕೀಯ

ದೇವಸ್ಥಾನಕ್ಕೆ ಹೋಗುವುದು ನನಗೆ ಇಷ್ಟ, ದೇವರ ದರ್ಶನ ಮುಂದುವರೆಯಲಿದೆ: ರಾಹುಲ್

ದೇವಸ್ಥಾನಕ್ಕೆ ಹೋಗುವುದು ನನಗೆ ಇಷ್ಟ. ಹೀಗಾಗಿ ನಾನು ದೇವಾಲಯಗಳಿಗೆ ಭೇಟಿ ನೀಡುತ್ತಿದ್ದೇನೆ ಮತ್ತು ಅದು ಮುಂದುವರೆಯಲಿದೆ ಎಂದು ಕಾಂಗ್ರೆಸ್

ಜೇವರ್ಗಿ: ದೇವಸ್ಥಾನಕ್ಕೆ ಹೋಗುವುದು ನನಗೆ ಇಷ್ಟ. ಹೀಗಾಗಿ ನಾನು ದೇವಾಲಯಗಳಿಗೆ ಭೇಟಿ ನೀಡುತ್ತಿದ್ದೇನೆ ಮತ್ತು ಅದು ಮುಂದುವರೆಯಲಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಬಿಜೆಪಿಯ 'ಮೃದು ಹಿಂದೂತ್ವ' ಟೀಕೆಗೆ ಸೋಮವಾರ ತಿರುಗೇಟು ನೀಡಿದ್ದಾರೆ.
ಕಳೆದ ಶನಿವಾರ ಹೊಸಪೇಟೆಯಿಂದ ಆರಂಭವಾದ ಕಾಂಗ್ರೆಸ್ ಜನಾರ್ಶೀವಾದ ಯಾತ್ರೆ ಇಂದು ಕಲಬುರಗಿ ಜಿಲ್ಲೆಯ ಜೇವರ್ಗಿ ತಲುಪಿದ್ದು, ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, ದೇವಸ್ಥಾನಕ್ಕೆ ಹೋಗುವುದು ನನಗೆ ಇಷ್ಟ. ದಾರಿಯ ಮಧ್ಯೆ ಸಿಗುವ ದೇವಸ್ಥಾನ ಮತ್ತು ಧಾರ್ಮಿಕ ಕೇಂದ್ರಗಳಿಗೆ ಭೇಟಿ ನೀಡುತ್ತೇನೆ. ಇದರಿಂದ ನನಗೆ ಸಂತೋಷವಾಗುತ್ತದೆ ಮತ್ತು ಇದು ಮುಂದುವರೆಯಲಿದೆ ಎಂದಿದ್ದಾರೆ.
ರಾಹುಲ್ ಗಾಂಧಿಯ ದೇವಸ್ಥಾನ ಭೇಟಿಯ ವಿರುದ್ಧ ವಾಗ್ದಾಳಿ ನಡೆಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು, ರಾಹುಲ್ ಗಾಂಧಿ ದೇವಾಲಯ ಭೇಟಿ ರಾಜಕೀಯ ಗಿಮಿಕ್ ಆಗಿದ್ದು, ಅದು ಗುಜರಾತ್ ಚುನಾವಣೆಯಿಂದ ಆರಂಭವಾಗಿದೆ. ಅಲ್ಲದೆ ಇತರೆ ಬಿಜೆಪಿ ನಾಯಕರು ರಾಹುಲ್ ದೇವಸ್ಥಾನ ಭೇಟಿ 'ಮೃದು ಹಿಂದೂತ್ವ' ಎಂದು ಟೀಕಿಸಿದ್ದರು.
ನಾಲ್ಕು ದಿನಗಳ ಕರ್ನಾಟಕ ಪ್ರವಾಸದಲ್ಲಿರುವ ರಾಹುಲ್ ಗಾಂಧಿ ಅವರು, ಹುಲಿಗೆಮ್ಮ ದೇವಸ್ಥಾನ, ಗವಿ ಸಿದ್ದೇಶ್ವರ ಮಠ ಹಾಗೂ ರಾಯಚೂರಿನಲ್ಲಿ ದರ್ಗಾಗೆ ಭೇಟಿ ನೀಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT