ಯಡಿಯೂರಪ್ಪ 
ರಾಜಕೀಯ

ಬಿಎಸ್ ವೈ 'ಚಿಕನ್' ಹೇಳಿಕೆ ದುರ್ಬಲ ಬಿಜೆಪಿಯ ಅಸ್ವಸ್ಥ ಮನಸ್ಥಿತಿಯನ್ನು ತೋರಿಸುತ್ತದೆ: ಶಿವಸೇನೆ

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಚಿಕನ್ ತಿಂದು ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ ಎಂಬ ಹೇಳಿಕೆಗೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ....

ಮುಂಬೈ: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಚಿಕನ್ ತಿಂದು ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ ಎಂಬ ಹೇಳಿಕೆಗೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ ಎಸ್ ಯಡಿಯೂರಪ್ಪ ಅವರ ವಿರುದ್ಧ ಬಿಜೆಪಿ ಮಿತ್ರ ಪಕ್ಷ ಶಿವಸೇನೆ ತೀವ್ರ ವಾಗ್ದಾಳಿ ನಡೆಸಿದ್ದು, ಅವರ ಹೇಳಿಕೆ ದುರ್ಬಲ ಬಿಜೆಪಿಯ ಅಸ್ವಸ್ಥ ಮನಸ್ಥಿತಿಯನ್ನು ತೋರಿಸುತ್ತದೆ ಎಂದಿದೆ.
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಗುಜರಾತ್ ನಲ್ಲಿ ಬಿಜೆಪಿ ನಾಯಕ ನಿದ್ದೆಗೇಡಿಸಿದ್ದರು. ಈಗ ಕರ್ನಾಟಕದಲ್ಲೂ ಅದೇ ಪರಿಸ್ಥಿತಿ ಮರುಕಳುಹಿಸುವ ಸಾಧ್ಯತೆ ಇದೆ. ರಾಹುಲ್ ಗಾಂಧಿ ಗುಜರಾತ್ ನಲ್ಲಿ ಹಲವು ದೇವಸ್ಥಾನಗಳಿಗೆ ಭೇಟಿ ನೀಡಿದ್ದರು. 
ಒಂದು ವೇಳೆ ಕಾಂಗ್ರೆಸ್ ಹಿಂದೂತ್ವವಾದ ಅಳವಡಿಸಿಕೊಂಡರೆ ತಮಗೆ ಹಿನ್ನಡೆಯಾಗಬಹುದು ಎಂಬ ಆತಂಕದಿಂದ ಬಿಜೆಪಿ ರಾಹುಲ್ ಗಾಂಧಿ ದೇವಸ್ಥಾನ ಭೇಟಿಯನ್ನು ಕಟುವಾಗಿ ಟೀಕಿಸುತ್ತಿದೆ ಎಂದು ಶಿವಸೇನಾ ಮುಖವಾಣಿ ಸಾಮ್ನಾದಲ್ಲಿ ವಿವರಿಸಲಾಗಿದೆ.
ಕಾಂಗ್ರೆಸ್ ಕಳೆದ ವರ್ಷ ಡಿಸೆಂಬರ್ ನಲ್ಲಿ ನಡೆದ ಗುಜರಾತ್ ವಿಧಾನಸಭೆ ಚುನಾವಣೆ ವೇಳೆ ಅನುಸರಿಸಿದ ಮೃತ ಹಿಂದೂತ್ವವನ್ನೇ ಮುಂಬರುವ ಕರ್ನಾಟಕ ವಿಧಾನಸಭೆ ಚುವಾವಣೆಯಲ್ಲಿ ಅನುಸರಿಸುವ ಮೂಲಕ ಬಿಜೆಪಿಯನ್ನು ಎದುರಿಸಲಿದೆ ಎಂದು ಸಾಮ್ನಾ ಸಂಪಾದಕೀಯ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

SCROLL FOR NEXT