ಸಂಗ್ರಹ ಚಿತ್ರ 
ರಾಜಕೀಯ

ನನ್ನ ಗುರು ಎಚ್ ಡಿ ದೇವೇಗೌಡ ಅಲ್ಲ ರಾಮಕೃಷ್ಣ ಹೆಗಡೆ: ಸಿಎಂ ಸಿದ್ದರಾಮಯ್ಯ

ನನ್ನ ರಾಜಕೀಯ ಗುರು ಎಚ್ ಡಿ ದೇವೇಗೌಡ ಅಲ್ಲ.. ರಾಮಕೃಷ್ಣ ಹೆಗಡೆ ಎಂದು ಸಿಎಂ ಸಿದ್ದರಾಮಯ್ಯ ಬುಧವಾರ ಹೇಳಿದ್ದಾರೆ.

ಬೆಂಗಳೂರು: ನನ್ನ ರಾಜಕೀಯ ಗುರು ಎಚ್ ಡಿ ದೇವೇಗೌಡ ಅಲ್ಲ.. ರಾಮಕೃಷ್ಣ ಹೆಗಡೆ ಎಂದು ಸಿಎಂ ಸಿದ್ದರಾಮಯ್ಯ ಬುಧವಾರ ಹೇಳಿದ್ದಾರೆ.
ಮಾಧ್ಯಮಗಳಲ್ಲಿ ವರದಿಯಾಗಿರುವಂತೆ ಬುಧವಾರ ಶಾಸಕರ ಭವನದ ಆವರಣದಲ್ಲಿ ಶಾಸಕರ ಸಾಂಸಾರಿಕ ಕೊಠಡಿ ಕಟ್ಟಡ ಉದ್ಘಾಟನೆ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನಾನು ರಾಜಕೀಯವಾಗಿ ಇಷ್ಟು ಎತ್ತರಕ್ಕೆ  ಬೆಳೆದಿದ್ದು ದೇವೇಗೌಡರಿಂದಾಗಿ ಅಲ್ಲ, ರಾಮಕೃಷ್ಣ ಹೆಗಡೆ ಅವರು ನನ್ನನ್ನು ಬೆಳೆಸಿದರು. ಅನಂತರ ನನ್ನ ಸ್ವಂತ ಸಾಮರ್ಥ್ಯದಿಂದ ಬೆಳೆದು ಮುಖ್ಯಮಂತ್ರಿಯಾಗಿದ್ದೇನೆ ಎಂದು ಹೇಳಿದರು. 
"ನನ್ನನ್ನು ರಾಜಕೀಯವಾಗಿ ಬೆಳೆಸಿದ್ದು ಮಾಜಿ ಮುಖ್ಯಮಂತ್ರಿ ದಿ.ರಾಮಕೃಷ್ಣ ಹೆಗಡೆ ಅವರೇ ಹೊರತು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರಲ್ಲ.  1983ರಲ್ಲಿ ಸ್ವಂತ ಬಲದಿಂದ ಗೆದ್ದು ಬಂದೆ. ಆಗ ದೇವೇಗೌಡರು ಯಾರು  ಎಂಬುದೇ ನನಗೆ ಗೊತ್ತಿರಲಿಲ್ಲ. ಎರಡು ಬಾರಿ ಯಾರ ಹಂಗಿಲ್ಲದೇ ಚುನಾವಣೆಯಲ್ಲಿ ಗೆಲವು ಸಾಧಿಸಿದ್ದೆ. ರಾಮಕೃಷ್ಣ ಹೆಗಡೆ ಅವರು ತಮ್ಮ ಸಂಪುಟದಲ್ಲಿ ನನ್ನನ್ನು ಸಚಿವರಾಗಿ ಮಾಡಿದ್ದರು. ನಂತರ ನನಗೂ ಹೆಗಡೆ ಅವರ ನಡುವಿನ  ಮನಸ್ತಾಪದಿಂದ ನನ್ನನ್ನು ವಜಾ ಮಾಡಿದರು. ಬಳಿಕ ನನ್ನನ್ನು ದೇವೇಗೌಡರು ಕರೆದುಕೊಂಡು ಹೋದರು ಎಂದು ಸಿದ್ದರಾಮಯ್ಯ ಹೇಳಿದರು.
ಬೇರೆಯವರ ಬೆಳವಣಿಗೆಯನ್ನು ದೇವೇಗೌಡ ಮತ್ತು ಅವರ ಕುಟುಂಬ ಸಹಿಸುವುದಿಲ್ಲ
ಇದೇ ವೇಳೆ ಪಕ್ಕದಲ್ಲಿಯೇ ಇದ್ದ ಬಸವರಾಜ ಹೊರಟ್ಟಿ ಹಾಗೂ ಶ್ರೀಕಂಠೇಗೌಡರ ಕುರಿತು ಮಾತನಾಡಿದ ಅವರು, ಈ ಇಬ್ಬರ ಮಧ್ಯದಲ್ಲಿ ನಾನು ಸಿಕ್ಕಿಹಾಕಿಕೊಂಡಿಲ್ಲ. ಅವರ ಮಧ್ಯೆ ಸಿಕ್ಕಿಕೊಂಡಿದ್ದರೆ ಇಷ್ಟು ಎತ್ತರಕ್ಕೆ  ಬೆಳೆಯುತ್ತಿರಲಿಲ್ಲ. ನಿಮ್ಮಿಬ್ಬರ ಮಧ್ಯೆ ಉಳಿಯದೆ ನಾನು ಸೇಫ್‌ ಆದೆ. ಆದರೆ, ಸಿದ್ದರಾಮಯ್ಯನವರನ್ನು ಬೆಳೆಸಿದ್ದು ನಾನು ಎಂದು ದೇವೇಗೌಡರು ಹೇಳುತ್ತಾರಲ್ಲ. ನನ್ನಂತಹ ನಾಲ್ಕು ಮಂದಿಯನ್ನು ಬೆಳೆಸಲಿ ನೋಡೋಣ.  ಅವರದ್ದು ಕುಟುಂಬ ರಾಜಕಾರಣ. ಬೇರೆಯವರು ಬೆಳೆಯುವುದನ್ನು ದೇವೇಗೌಡರ ಕುಟುಂಬ ಸಹಿಸುವುದಿಲ್ಲ ಎಂದು ಟೀಕಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಾ ಗೌಡಗೆ ಬಿಗ್ ಶಾಕ್: ಪ್ರದೋಷ್‌ ಮಾಫಿ ಸಾಕ್ಷಿಗೆ ಕೋರ್ಟ್‌ ಅಸ್ತು

ಪ್ರತಿಪಕ್ಷಗಳು ಸಂಪುಟದಿಂದ ವಜಾಕ್ಕೆ ಆಗ್ರಹಿಸುತ್ತಿರುವ ಮಧ್ಯೆ ಸಚಿವ ಬಿ. ನಾಗೇಂದ್ರಗೆ ಹೈಕೋರ್ಟ್ ಬಿಗ್ ರಿಲೀಫ್!

ಸಂಪುಟ ವಿಸ್ತರಣೆ ಮುನಿಸು ಕೊನೆಗೂ ಶಮನ: ರಾಜೀನಾಮೆ ವಾಪಸ್ ಪಡೆದ ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ಪಾಟೀಲ್

ರಾಜ್‌ಗಢದಲ್ಲಿ ಭಾರೀ ಮಳೆ: 11 ಪ್ರಯಾಣಿಕರ ಸಮೇತ ಚರಂಡಿಯಲ್ಲಿ ಕೊಚ್ಚಿ ಹೋದ ವ್ಯಾನ್; 9 ಮಂದಿ ಸಾವು!

ದೇಶದ ಅತ್ಯಂತ ದುಬಾರಿ ಪೆಂಟ್‌ಹೌಸ್! ಈ ಐಷಾರಾಮಿ ಮನೆ 271 ಕೋಟಿಗೆ ಮಾರಾಟ!