ಸಿದ್ದರಾಮಯ್ಯ 
ರಾಜಕೀಯ

ನಲ್ ಪಾಡ್ ಪ್ರಕರಣ: ಬಿಜೆಪಿಯಿಂದ ಸಾಮಾಜಿಕ ಜಾಲತಾಣಗಳಲ್ಲಿ ಸ್ಯಾಕ್ ಹ್ಯಾರಿಸ್ ಅಭಿಯಾನ, ಸಿಎಂ ಗೆ 7 ಪ್ರಶ್ನೆ

ಶಾಸಕ ಹ್ಯಾರಿಸ್ ಪುತ್ರ ಉದ್ಯಮಿಯೊಬ್ಬರ ಪುತ್ರ ವಿದ್ವತ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಪ್ರಕರಣದಲ್ಲಿ ಶಾಸಕ ಹ್ಯಾರಿಸ್ ತಮ್ಮ ಪ್ರಭಾವ ಬಳಸಿ ಮಗನ ಹೆಸರು ರೌಡಿಶೀಟರ್ ಲಿಸ್ಟ್ ನಲ್ಲಿ...

ಬೆಂಗಳೂರು: ಶಾಸಕ ಹ್ಯಾರಿಸ್ ಪುತ್ರ ಉದ್ಯಮಿಯೊಬ್ಬರ ಪುತ್ರ ವಿದ್ವತ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಪ್ರಕರಣದಲ್ಲಿ ಶಾಸಕ ಹ್ಯಾರಿಸ್ ತಮ್ಮ ಪ್ರಭಾವ ಬಳಸಿ ಮಗನ ಹೆಸರು ರೌಡಿಶೀಟರ್ ಲಿಸ್ಟ್ ನಲ್ಲಿ ದಾಖಲಾಗದಂತೆ ಒತ್ತಡ ಹೇರಿದ್ದಾರೆ ಎಂದು ಬಿಜೆಪಿ ಸಾಮಾಜಿಕ ಜಾಲತಾಣ ವಿಭಾಗ ಆರೋಪಿಸಿದೆ. 
ಹಲ್ಲೆ ಪ್ರಕರಣ ನಡೆದ ನಂತರ ಹ್ಯಾರಿಸ್ ತಮ್ಮ ಮಗನನ್ನು ಮನೆಯಲ್ಲೇ ಇಟ್ಟುಕೊಂಡು 38 ಗಂಟೆಗಳಾದರೂ ಪೊಲೀಸರ ಮುಂದೆ ಹಾಜರುಪಡಿಸದೇ ಇರುವುದೂ ಅಪರಾಧವಾಗಿದ್ದು, ಅಪರಾಧಿಯನ್ನು ಬೆಂಬಲಿಸುವ ಮೂಲಕ ಹ್ಯಾರಿಸ್ ಕೂಡಾ ಅಪರಾಧವೆಸಗಿದ್ದಾರೆ. ಅಧಿಕಾರವನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ ಎನ್ಎ ಹ್ಯಾರಿಸ್ ಅವರನ್ನು ಸಿಎಂ ಸಿದ್ದರಾಮಯ್ಯ ಶಾಸಕ ಸ್ಥಾನದಿಂದ ವಜಾಗೊಳಿಸಬೇಕೆಂದು ಆಗ್ರಹಿಸಿ ಬಿಜೆಪಿ ಸಾಮಾಜಿಕ ಜಾಲತಾಣ ವಿಭಾಗ ನಡೆಸಿದ್ದ ಸ್ಯಾಕ್ ಹ್ಯಾರಿಸ್ ಹ್ಯಾಶ್ ಟ್ಯಾಗ್ ಅಭಿಯಾನ ಟ್ರೆಂಡಿಂಗ್ ಟಾಪಿಕ್ ಆಗಿತ್ತು. 
ಸಿಎಂ ಗೆ ಕನ್ನಡಿಗರ ಪ್ರಶ್ನೆ ಎಂಬ ಶೀರ್ಷಿಕೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ 7 ಪ್ರಶ್ನೆಗಳನ್ನು ಕೇಳಲಾಗಿದ್ದು, ಹ್ಯಾರಿಸ್ ತಮ್ಮ ಪ್ರಭಾವ ಬಳಸಿ ತಡವಾಗಿ ಎಫ್ಐಆರ್ ದಾಖಲಿಸುವಂತೆ ಮಾಡಿದ್ದಾರೆ. ಅಧಿಕಾರಿಗಳ ಮೇಲೆ ಒತ್ತಡ ಹಾಕಿ ಸೆಕ್ಷನ್ 307 ರ ಅಡಿ ಕೊಲೆ ಯತ್ನ ಪ್ರಕರಣ ದಾಖಲಾಗದಂತೆ ಒತ್ತಡ ಹೇರಿರುವುದು ಕಾನೂನಿನ ಉಲ್ಲಂಘನೆಯಲ್ಲವೇ ಎಂದು ಪ್ರಶ್ನೆ ಕೇಳಲಾಗಿದೆ. 
ಘಟನೆ ನಡೆದು 38 ಗಂಟೆಗಳಾದರೂ ಮಗನನ್ನು ಪೊಲೀಸರಿಗೆ ಒಪ್ಪಿಸದೇ ಮನೆಯಲ್ಲೇ ಇಟ್ಟುಕೊಂಡಿದ್ದು ಅಪರಾಧಿಯನ್ನು ಬೆಂಬಲಿಸಿರುವುದು, ಹಲ್ಲೆ ನಡೆದ ಪಬ್ ನ ಸಿಸಿಟಿವಿ ದೃಶ್ಯಾವಳಿಗಳನ್ನು ನಾಶ ಮಾಡಿ ಸಾಕ್ಷ್ಯ ಸಿಗದಂತೆ ನೋಡಿಕೊಂಡಿರುವುದು ಅಪರಾಧವಲ್ಲವೇ? ಎಂದು ಪ್ರಶ್ನಿಸಿರುವ ಬಿಜೆಪಿ ಹ್ಯಾರಿಸ್ ಅವರ ಆದೇಶವನ್ನು ಅನುಸರಿಸಿದ ಪೊಲೀಸ್ ಇನ್ಸ್ ಪೆಕ್ಟರ್ ನ್ನು ಅಮಾನತು ಮಾಡಲಾಗಿದೆ. ಆದರೆ ಇಷ್ಟೆಲ್ಲಾ ಮಾಡುವಂತೆ ಆದೇಶ ಕೊಟ್ಟ ಶಾಸಕ ಹ್ಯಾರಿಸ್ ಮಾತ್ರ ಸುರಕ್ಷಿತವಾಗಿದ್ದಾರೆ, ಅವರನ್ನೂ ವಜಾ ಮಾಡಬೇಕು ಎಂದು ಬಿಜೆಪಿ ಮುಖ್ಯಮಂತ್ರಿಗಳನ್ನು ಒತ್ತಾಯಿಸಿದೆ.
ಬಿಜೆಪಿ ಸಾಮಾಜಿಕ ಜಾಲತಾಣದ ಅಭಿಯಾನದ ಪ್ರಶ್ನೆಗಳನ್ನು ಕೇಂದ್ರ ಸಚಿವ ಅನಂತ್ ಕುಮಾರ್, ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಸೇರಿದಂತೆ ಪಕ್ಷದ ಪ್ರಮುಖ ನಾಯಕರು ಟ್ವೀಟ್ ಮಾಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT