ಜನಾಶೀರ್ವಾದ ಯಾತ್ರೆಯಲ್ಲಿ ಸಿಎಂ ಸಿದ್ದರಾಮಯ್ಯ ಜೊತೆ ರಾಹುಲ್ ಗಾಂಧಿ 
ರಾಜಕೀಯ

ಬಸವಣ್ಣನವರ 'ನುಡಿದಂತೆ ನಡೆ' ತತ್ವ ಪಾಲಿಸದ ಮೋದಿ: ರಾಹುಲ್ ಗಾಂಧಿ ವ್ಯಂಗ್ಯ

21ನೇ ಶತಮಾನದ ಸಮಾಜ ಸುಧಾರಕ ಬಸವಣ್ಣವರ ವಚನಗಳನ್ನು ಸಂಸತ್ತಿನಲ್ಲಿ ಹಾಗೂ ಇತ್ತೀಚೆಗೆ ಮೈಸೂರಿನಲ್ಲಿ ನಡೆದ ರ್ಯಾಲಿಗಳಲ್ಲಿ ಪಠಿಸಿದ ಮೋದಿ ...

ಅಥಣಿ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ಮುಂದುವರಿಸಿದ್ದಾರೆ. 
21ನೇ ಶತಮಾನದ ಸಮಾಜ ಸುಧಾರಕ ಬಸವಣ್ಣವರ ವಚನಗಳನ್ನು ಸಂಸತ್ತಿನಲ್ಲಿ ಹಾಗೂ ಇತ್ತೀಚೆಗೆ ಮೈಸೂರಿನಲ್ಲಿ ನಡೆದ ರ್ಯಾಲಿಗಳಲ್ಲಿ ಪಠಿಸಿದ ಮೋದಿ ಅವರ ತತ್ವಗಳನ್ನು ಪಾಲಿಸುತ್ತಿಲ್ಲ, ನುಡಿದಂತೆ ನಡೆಯದೇ ಬಸವಣ್ಣನ ತತ್ವಾದರ್ಶಗಳನ್ನು ಉಲ್ಲಂಘಿಸುತ್ತಿದ್ದಾರೆ, ಬಸವಣ್ಣನವರ ಹೆಸರಿನಲ್ಲಿ ಜನರನ್ನು ಓಲೈಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. 
ಕಾಂಗ್ರೆಸ್ ಜನಾಶೀರ್ವಾದ ಯಾತ್ರೆ ಸಮಾವೇಶದಲ್ಲಿ ಭಾಷಣ ಮಾಡಿದ ಅವರು, ನಾವು ಕರ್ನಾಟಕದಲ್ಲಿ ಬಸವಣ್ಣನವರ ತತ್ವದಡಿ ಸರ್ವರ ಅಭಿವೃದ್ಧಿ ಮಾಡಿದ್ದೇವೆ.
"ಕಳಬೇಡ ಕೊಲಬೇಡ, ಹುಸಿಯ ನುಡಿಯಲು ಬೇಡ, ಮುನಿಯಬೇಡ, ಅನ್ಯರಿಗೆ ಅಸಹ್ಯ ಪಡಬೇಡ" ಐದು ತತ್ವಗಳಡಿ ನಾವು ಕೆಲಸ ಮಾಡುತ್ತೇವೆ ಎಂದಿದ್ದಾರೆ,
ಬಸವಣ್ಣನವರ ವಚನ ಬಳಸುವ ಮೋದಿ, ನುಡಿದಂತೆ ನಡೆದಿಲ್ಲ. ನೀವು ಕೇವಲ ವೋಟಿಗಾಗಿ ಬಸವಣ್ಣನವರ ಹೆಸರು ಹೇಳುತ್ತಿದ್ದೀರಾ ಎಂದು ರಾಹುಲ್‌ ಪ್ರಶ್ನಿಸಿದರು.
ಮೋದಿಯವರು ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತೇನೆ, 15 ಲಕ್ಷ ಪ್ರತಿಯೊಬ್ಬರಿಗೆ ಕೊಡುತ್ತೇನೆ ಎಂದಿದ್ದರು. ಆದರೆ, ಕೊಡಲಿಲ್ಲ ಎಂದು ದೂರಿದರು.ಗುಜರಾತ್ ಮತ್ತು ಉತ್ತರ ಪ್ರದೇಶದಲ್ಲಿ ಅಪರಾಧಗಳ ಸಂಖ್ಯೆಗಣನೀಯವಾಗಿ ಹೆಚ್ಚುತ್ತಿದೆ. ಅಮಿತ್ ಶಾ ಮತ್ತು ಮೋದಿ ಅದರ ಬಗ್ಗೆ ಗಮನ ಕೊಡದೇ ಕರ್ನಾಟಕದಲ್ಲಿನ ಸಣ್ಣ ವಿಷಯಗಳನ್ನು ದೊಡ್ಡದು ಮಾಡುತ್ತಿದ್ದಾರೆ ಎಂದು ದೂರಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT