ದೀಪಕ್ ರಾವ್ ಮನೆಗೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ 
ರಾಜಕೀಯ

ಮುಗ್ಧ ಜನರ ಸಾವಿನಲ್ಲಿ ಬಿಜೆಪಿ ರಾಯಕೀಯ ಮಾಡುತ್ತಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮುಗ್ಧ ಜನರ ಸಾವಿನಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದ್ದು, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಜನರು ಬೆಂಬಲ ನೀಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಹೇಳಿದ್ದಾರೆ...

ಮಂಗಳೂರು: ಮುಗ್ಧ ಜನರ ಸಾವಿನಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದ್ದು, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಜನರು ಬೆಂಬಲ ನೀಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಹೇಳಿದ್ದಾರೆ. 
ರೂ.76 ಕೋಟಿ ವೆಚ್ಚದಲ್ಲಿ ಬೆಳ್ತಂಗಡಿಯಲ್ಲಿ ನಿರ್ಮಾಣಗೊಳ್ಳಲಿರುವ ಮಿನಿ ವಿಧಾನಸೌಧಕ್ಕೆ ಶಂಕುಸ್ಥಾಪನೆ ಮಾಡಿದ ಬಳಿಕ ಪ್ರತಿಕ್ರಿಯೆ ನೀಡಿರುವ ಅವರು, ನಗರದಲ್ಲಿ ಕೋಮು ಘರ್ಷಣೆ ಸೃಷಟಿಸಲು ಯತ್ನಗಳು ನಡೆಯುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಬಾರಿ ನಡೆದ ಚುನಾವಣೆಯಲ್ಲಿ 8 ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ 1 ಕ್ಷೇತ್ರದಲ್ಲಷ್ಟೇ ಗೆಲವು ಸಾಧಿಸಿತ್ತು. ಮುಂದಿನ ಚುನಾವಣೆಯಲ್ಲಿ ಅದೂ ಕೂಡ ದೊರೆಯುವ ಭರವಸೆಗಳು ಬಿಜೆಪಿಯಲ್ಲಿಲ್ಲ. ಹೀಗಾಗಿ ಜಿಲ್ಲೆಯಲ್ಲಿ ಗೋಮು ಘರ್ಷಣೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದು ಹೇಳಿದ್ದಾರೆ. 
ಮತ್ತೆ ಅಧಿಕಾರಕ್ಕೆ ಬರುವ ಉದ್ದೇಶವನ್ನು ಹೊಂದಿರುವ ಬಿಜೆಪಿ, ಮುಗ್ಧ ಜನರ ಸಾವಿನಲ್ಲಿ ರಾಜಕೀಯ ಮಾಡುತ್ತಿದೆ. ಜಾತಿ ಹಾಗೂ ಧರ್ಮದ ಆಧಾರದ ಮೇಲೆ ಜನರನ್ನು ಒಡೆಯಲು ಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ. 
ಕೋಮು ಘರ್ಷಣೆ ಸೃಷ್ಟಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಇದೇ ವೇಳೆ ಸಿದ್ದರಾಮಯ್ಯ ಅವರು ಎಚ್ಚರಿಸಿದ್ದಾರೆ. ಕೋಮು ಘರ್ಷಣೆ ಸೃಷ್ಟಿಸವವರನ್ನು ಸರ್ಕಾರ ಸುಮ್ಮನೆ ಬಿಡುವುದಿಲ್ಲ. ಅಂತಹ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ. ಎಂತಹದ್ದೇ ಒತ್ತಡಗಳಿಗೂ ಸರ್ಕಾರ ಮಣಿಯುವುದಿಲ್ಲ ಎಂದು ಹೇಳಿದ್ದಾರೆ. 

ಬಿಜೆಪಿ ಕೋಮು ಪ್ರತಿನಿಧಿಯಾಗಿದ್ದು, ಬಿಜೆಪಿ ಕಾರ್ಯಕರ್ತರು ಎರಡು ಸಮುದಾಯಗಳು ಕೋಮು ಘರ್ಷಣೆಯಲ್ಲಿ ಪಾಲ್ಗೊಳ್ಳುವಂತೆ ಮಾಡುತ್ತಿದ್ದಾರೆ. ತಮ್ಮ ಧರ್ಮವನ್ನು ಅನುಸರಿಸಿ ಜೀವನ ನಡೆಸುವ ಹಕ್ಕು ಪ್ರತಿಯೊಬ್ಬರಿಗೂ ಇದೆ. ಒಬ್ಬರ ಧರ್ಮವನ್ನು ಮತ್ತೊಬ್ಬರು ಗೌರವಿಸಬೇಕು. ಜಿಲ್ಲೆಗೆ ಬೆಂಕಿ ಹಚ್ಚುತ್ತೇವೆ. ಸಂವಿಧಾನವನ್ನು ಬದಲಿಸುತ್ತೇವೆಂದು ಬಿಜೆಪಿಯವರು ಹೇಳುತ್ತಾರೆ. ಇಂತಹ ನಾಯಕರು ಗ್ರಾಮ ಪಂಚಾಯಿತಿ ಸದಸ್ಯರಾಗಲು ಅರ್ಹರಲ್ಲ ಎಂದು ಕಿಡಿಕಾರಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

SCROLL FOR NEXT