ಜಿ ಪರಮೇಶ್ವರ 
ರಾಜಕೀಯ

ಕೆಪಿಸಿಸಿ ಅಧ್ಯಕ್ಷರನ್ನೇ 'ಚಮ್ಚಾ...' ಎಂದು ಕರೆದ ಹಿರಿಯ ಕಾಂಗ್ರೆಸ್ ನಾಯಕ ವೈಜನಾಥ್ ಪಾಟೀಲ್

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರು ತಮ್ಮ ಪಕ್ಷದ ಹಿರಿಯ ನಾಯಕರಿಂದಲೇ ಮುಜುಗರಕ್ಕಿಡಾದ....

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರು ತಮ್ಮ ಪಕ್ಷದ ಹಿರಿಯ ನಾಯಕರಿಂದಲೇ ಮುಜುಗರಕ್ಕಿಡಾದ ಘಟನೆ ಮಂಗಳವಾರ ಕೆಪಿಸಿಸಿ ಕಚೇರಿಯಲ್ಲಿ ನಡೆದಿದೆ.
ಇಂದು ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಲು ಸಿದ್ಧತೆ ನಡೆಸುತ್ತಿರುವಾಗಲೇ ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಸಚಿವ ವೈಜನಾಥ್ ಪಾಟೀಲ್ ಅವರು ಅಲ್ಲಿಗೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ವೈಜನಾಥ್ ಪಾಟೀಲ್ ಅವರು ಪರಮೇಶ್ವರ ಅವರನ್ನು ಕರೆದರೂ ಕೂಡಾ ತಿರುಗಿ ನೋಡದೆ ಹೊರಟಿದ್ದರು. ಇದರಿಂದ ಆಕ್ರೋಶಗೊಂಡ ವೈಜನಾಥ್ ಪಾಟೀಲ್ ಅವರು, ಏಯ್ ಅಧ್ಯಕ್ಷ…ಅರೇ ನಾನ್ ಮಾತನಾಡಿಸಿದ್ರೂ ಹಾಗೆ ಹೊಂಟ ಹೋಗುತ್ತಿದ್ದಾನಲ್ರೀ.. ಏಯ್ ಚಮ್ಚಾ.. ಹೀಗೆ ಬಹಿರಂಗವಾಗಿಯೇ ಪರಮೇಶ್ವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಮುಂಬರುವ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ತಮ್ಮ ಪುತ್ರನಿಗೆ ಟಿಕೆಟ್ ನೀಡಲು ನಿರಾಕರಿಸಿದ್ದರಿಂದ ವೈಜನಾಥ್ ಪಾಟೀಲ್ ಅವರು ಈ ರೀತಿ ಏರುಧ್ವನಿಯಲ್ಲಿ ಕೂಗುವ ಮೂಲಕ ಪರಮೇಶ್ವರ ವಿರುದ್ಧ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.
ನನ್ನ ಮಗ ವಿಕ್ರಂ ಪಾಟೀಲ್ ಗೆ ಟಿಕೆಟ್ ಕೊಡುವುದಾಗಿ ಭರವಸೆ ನೀಡಿದ್ದರು. ಆದರೆ ಈಗ ಟಿಕೆಟ್ ಕೇಳಿದ್ರೆ, ಉಸ್ತುವಾರಿ ಸಚಿವರ ಪತ್ರ ತನ್ನಿ ಎಂದು ಹೇಳುತ್ತಾರೆ. ಆದರೆ ಧರಂಸಿಂಗ್, ಮಲ್ಲಿಕಾರ್ಜುನ ಖರ್ಗೆ ಮಕ್ಕಳಿಗೆ ಮಾತ್ರ ಟಿಕೆಟ್ ಕೊಡುತ್ತಾರೆ. ಅಷ್ಟೇ ಅಲ್ಲ ಪರಂ, ಸಿಎಂನಿಂದಾಗಿ ಹೈದರಾಬಾದ್ ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂದು ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT