ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಮತ್ತು ಕಾರ್ಯಕಾರಿ ಅಧ್ಯಕ್ಷ ದಿನೇಶ್ ಗುಂಡೂರಾವ್ ನಿನ್ನೆ ಕೆಪಿಸಿಸಿ ಕಚೇರಿಯಲ್ಲಿ ನಡೆದ ಸ
ಬೆಂಗಳೂರು: ಬಿಜೆಪಿ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಡೆಸಿದ ವಾಗ್ದಾಳಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಸಹ ದನಿಗೂಡಿಸಿ ಸುದ್ದಿಯಾದರು.
ಚಿಕ್ಕಮಗಳೂರಿನ ಮೂಡಿಗೆರೆಯಲ್ಲಿ ಧನ್ಯಶ್ರೀ ಎಂಬಾಕೆ ಆತ್ಮಹತ್ಯೆ ಮಾಡಿಕೊಳ್ಳಲು ಬಿಜೆಪಿ ಯುವಮೋರ್ಚದವರೇ ಕಾರಣ ಎಂದು ಬೆಂಗಳೂರಿನಲ್ಲಿ ನಿನ್ನೆ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಸಂಘ ಪರಿವಾರ ಭಯೋತ್ಪಾದಕ ಸಂಘಟನೆಯಾಗಿ ಪರಿವರ್ತನೆಯಾಗಿದೆ. ಮುಗ್ಧ ಜನರ ಮರಣದ ವಿಷಯವನ್ನಿಟ್ಟುಕೊಂಡು ಬಿಜೆಪಿಯವರು ಆಟವಾಡುತ್ತಿದ್ದಾರೆ ಎಂದು ಆರೋಪಿಸಿದರು.
ಧನ್ಯಶ್ರೀ ಮರಣದ ಬಗ್ಗೆ ಬಿಜೆಪಿಯವರೇಕೆ ಮಾತನಾಡುವುದಿಲ್ಲ?ಆಕೆ ಹಿಂದೂ ಅಲ್ಲವೇ?ಪಿಎಫ್ಐ ಮತ್ತು ಎಸ್ ಡಿಪಿಐಯನ್ನು ನಿಷೇಧಿಸುವಂತೆ ಬಿಜೆಪಿಯವರು ಒತ್ತಾಯಿಸುತ್ತಿದ್ದಾರೆ. ಬಿಜೆಪಿ, ಆರ್ಎಸ್ಎಸ್ ಮತ್ತು ಭಜರಂಗ ದಳವನ್ನು ಕೂಡ ನಿಷೇಧಿಸಬೇಕೆಂದು ನಾನು ಭಾವಿಸುತ್ತೇನೆ ಎಂದು ಹೇಳಿದರು.
ಇದಕ್ಕೂ ಮುನ್ನ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಹೀನಾಯ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿರುವ ಯಾವುದೇ ಭಯೋತ್ಪಾದಕ ಸಂಘಟನೆ ಅದು ಪಿಎಫ್ಐ, ಆರ್ಎಸ್ಎಸ್ ಅಥವಾ ಭಜರಂಗ ದಳವಾಗಿರಬಹುದು ಅವುಗಳನ್ನು ಸುಮ್ಮನೆ ಬಿಡುವುದಿಲ್ಲ ಎಂದು ಗುಡುಗಿದ್ದರು.