ರಾಜಕೀಯ

ಸಿಎಂ 'ಉಗ್ರ' ಹೇಳಿಕೆ ವಿರುದ್ಧ ಪ್ರತಿಭಟನೆ, ಕಾಂಗ್ರೆಸ್ ಕಚೇರಿಗಳಿಗೆ ಬಿಜೆಪಿ ಕಾರ್ಯಕರ್ತರ ಮುತ್ತಿಗೆ

Lingaraj Badiger
ಕಲಬುರಗಿ/ಹಾಸನ: ಬಿಜೆಪಿ, ಆರ್ಎಸ್ಎಸ್ ಮತ್ತು ಬಜರಂಗದಳದ ಕಾರ್ಯಕರ್ತರು ಉಗ್ರರು ಎಂದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿ ಶುಕ್ರವಾರ ರಾಜ್ಯಾದ್ಯಂತ ಜೈಲ್ ಭರೋ ಚಳವಳಿ ನಡೆಸುತ್ತಿದ್ದು, ಕಲಬುರಗಿ ಹಾಗೂ ಹಾಸನದಲ್ಲಿ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದೆ.
ಜೈಲ್ ಭರೋ ಚಳವಳಿಯ ಭಾಗವಾಗಿ ಇಂದು ಕಲಬುರಗಿಯಲ್ಲಿ ಸುಮಾರು 200 ಹೆಚ್ಚು ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕುವ ಮೂಲಕ ಬಂಧನಕ್ಕೆ ಒಳಗಾದರು. ಪ್ರತಿಭಟನೆಯಲ್ಲಿ ಬಿಜೆಪಿ ಎಂಎಲ್ ಸಿ ಹಾಗೂ ನಗರ ಘಟಕದ ಅಧ್ಯಕ್ಷ ಬಿಜಿ ಪಾಟೀಲ್, ಕಲಬುರಗಿ ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ದತ್ತಾತ್ರೇಯ ಪಾಟೀಲ್ ನರಿಬೋಳ್ ಸೇರಿದಂತೆ ಹಲವು ನಾಯಕರು ಭಾಗವಹಿಸಿದ್ದರು.
ಇನ್ನು ಹಾಸದಲ್ಲೂ ಉಗ್ರ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು ಮುಖ್ಯಮಂತ್ರಿ ಸಿದ್ದರಾಮಯ್ಯ ಅತ್ಯಂತ ಕೆಟ್ಟ ಸಿಎಂ ಎಂದು ಆಕ್ರೋಶ ವ್ಯಕ್ತಪಡಿಸಿದರು. ನೂರಾರು ಬಿಜೆಪಿ ಕಾರ್ಯಕರ್ತರು ಜಿಲ್ಲಾ ಕಾಂಗ್ರೆಸ್ ಕಚೇರಿವರೆಗೆ ರ್ಯಾಲಿ ನಡೆಸಿ ಮುತ್ತಿಗೆ ಹಾಕಲು ಯತ್ನಿಸಿದರು.
SCROLL FOR NEXT