ಸಿದ್ದರಾಮಯ್ಯ 
ರಾಜಕೀಯ

ಸಿಎಂ 'ಉಗ್ರ' ಹೇಳಿಕೆ ವಿರುದ್ಧ ಪ್ರತಿಭಟನೆ, ಕಾಂಗ್ರೆಸ್ ಕಚೇರಿಗಳಿಗೆ ಬಿಜೆಪಿ ಕಾರ್ಯಕರ್ತರ ಮುತ್ತಿಗೆ

ಬಿಜೆಪಿ, ಆರ್ಎಸ್ಎಸ್ ಮತ್ತು ಬಜರಂಗದಳದ ಕಾರ್ಯಕರ್ತರು ಉಗ್ರರು ಎಂದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿ....

ಕಲಬುರಗಿ/ಹಾಸನ: ಬಿಜೆಪಿ, ಆರ್ಎಸ್ಎಸ್ ಮತ್ತು ಬಜರಂಗದಳದ ಕಾರ್ಯಕರ್ತರು ಉಗ್ರರು ಎಂದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿ ಶುಕ್ರವಾರ ರಾಜ್ಯಾದ್ಯಂತ ಜೈಲ್ ಭರೋ ಚಳವಳಿ ನಡೆಸುತ್ತಿದ್ದು, ಕಲಬುರಗಿ ಹಾಗೂ ಹಾಸನದಲ್ಲಿ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದೆ.
ಜೈಲ್ ಭರೋ ಚಳವಳಿಯ ಭಾಗವಾಗಿ ಇಂದು ಕಲಬುರಗಿಯಲ್ಲಿ ಸುಮಾರು 200 ಹೆಚ್ಚು ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕುವ ಮೂಲಕ ಬಂಧನಕ್ಕೆ ಒಳಗಾದರು. ಪ್ರತಿಭಟನೆಯಲ್ಲಿ ಬಿಜೆಪಿ ಎಂಎಲ್ ಸಿ ಹಾಗೂ ನಗರ ಘಟಕದ ಅಧ್ಯಕ್ಷ ಬಿಜಿ ಪಾಟೀಲ್, ಕಲಬುರಗಿ ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ದತ್ತಾತ್ರೇಯ ಪಾಟೀಲ್ ನರಿಬೋಳ್ ಸೇರಿದಂತೆ ಹಲವು ನಾಯಕರು ಭಾಗವಹಿಸಿದ್ದರು.
ಇನ್ನು ಹಾಸದಲ್ಲೂ ಉಗ್ರ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು ಮುಖ್ಯಮಂತ್ರಿ ಸಿದ್ದರಾಮಯ್ಯ ಅತ್ಯಂತ ಕೆಟ್ಟ ಸಿಎಂ ಎಂದು ಆಕ್ರೋಶ ವ್ಯಕ್ತಪಡಿಸಿದರು. ನೂರಾರು ಬಿಜೆಪಿ ಕಾರ್ಯಕರ್ತರು ಜಿಲ್ಲಾ ಕಾಂಗ್ರೆಸ್ ಕಚೇರಿವರೆಗೆ ರ್ಯಾಲಿ ನಡೆಸಿ ಮುತ್ತಿಗೆ ಹಾಕಲು ಯತ್ನಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಿಹಾರದ ಫಲಿತಾಂಶ ಬಂಗಾಳದಲ್ಲಿ ಬಿಜೆಪಿ ಗೆಲುವಿಗೆ 'ರಹದಾರಿ': ಪ್ರಧಾನಿ ಮೋದಿ ಮಾತಿನ ಮರ್ಮವೇನು?

ಟಿ-20 ವಿಶ್ವಕಪ್: ಭಾರತ ತಂಡ ಪ್ರಕಟ, ಶುಭ್ ಮನ್ ಗಿಲ್ ಗೆ ಕೊಕ್‌, ಇಶಾನ್ ಕಿಶಾನ್ ಗೆ ಸ್ಥಾನ!

ಹಿಂದೂ ಯುವಕನ ಬರ್ಬರ ಹತ್ಯೆ: ವ್ಯಾಪಕ ಆಕ್ರೋಶ ಬೆನ್ನಲ್ಲೆ 7 ಆರೋಪಿಗಳನ್ನು ಬಂಧಿಸಿದ್ದಾಗಿ ಯೂನಸ್ ಘೋಷಣೆ

ಕಲಬುರಗಿ: ಉದ್ಯಮಿ ಮಲ್ಲಿನಾಥ್ ಬಿರಾದಾರ್ ಮನೆ ಬಳಿ ಬೆಂಕಿ ಹಚ್ಚಿಕೊಂಡು BJP ಕಾರ್ಯಕರ್ತೆ ಆತ್ಮಹತ್ಯೆ

ಉ.ಕ. ನಿರ್ಲಕ್ಷ್ಯ ಮಾಡಿದ್ದೇವೆ ಎಂದು ಹೇಳುವ ನೈತಿಕ ಹಕ್ಕು ಬಿಜೆಪಿಯವರಿಗೆ ಇಲ್ಲ, 'ಗ್ಯಾರಂಟಿ ನಿಧಿ'ಯ ಶೇ. 43.63 ಭಾಗ ನೀಡಿದ್ದೇವೆ: ಸಿದ್ದರಾಮಯ್ಯ

SCROLL FOR NEXT