ಸಿದ್ದರಾಮಯ್ಯ 
ರಾಜಕೀಯ

ಸಿಎಂ ಸಿದ್ದರಾಮಯ್ಯ ದುರ್ಯೋಧನನಂತೆ ವರ್ತಿಸುತ್ತಿದ್ದಾರೆ: ಸಿಟಿ ರವಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದುರ್ಯೋಧನನಂತೆ ವರ್ತಿಸುತ್ತಿದ್ದಾರೆ. ಅವರ ಹಾವಭಾವಗಳು ಮಹಾಭಾರತದ ದುರ್ಯೋಧನನ...

ಚಿಕ್ಕಮಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದುರ್ಯೋಧನನಂತೆ ವರ್ತಿಸುತ್ತಿದ್ದಾರೆ. ಅವರ ಹಾವಭಾವಗಳು ಮಹಾಭಾರತದ ದುರ್ಯೋಧನನ ಪಾತ್ರ ಹೋಲುತ್ತವೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಸೋಮವಾರ ಹೇಳಿದ್ದಾರೆ.
ಇಂದು ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಬಿಜೆಪಿ ವಿಶೇಷ ಸಭೆಯಲ್ಲಿ ಅವರು ಮಾತನಾಡಿದ ಸಿಟಿ ರವಿ ಅವರು, ರಾಜ್ಯ ಕಾಂಗ್ರೆಸ್‌ ಸರ್ಕಾರವು ನಿಶ್ವಿತವಾಗಿಯೂ ಕೌರವರ ಸರ್ಕಾರ, ಅದರ ನೇತೃತ್ವ ವಹಿಸಿರುವ ಸಿದ್ದರಾಮಯ್ಯ ದುರ್ಯೋಧನನಂತೆ ವರ್ತಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಸಿದ್ದರಾಮಯ್ಯ ಅವರು ವಿಧಾನಸಭೆ ಚುನಾವಣೆಯೆಂಬ ಕುರುಕ್ಷೇತ್ರ ಯುದ್ಧದಲ್ಲಿ ಕಾಂಗ್ರೆಸ್‌ನವರು ಪಾಂಡವರ ಪಕ್ಷ, ಬಿಜೆಪಿಯವರು ಕೌರವರ ಪಕ್ಷ ಎಂದು ಹೇಳಿದ್ದಾರೆ. ಆದರೆ ರಾಜ್ಯದಲ್ಲಿನ ಕಾಂಗ್ರೆಸ್‌ ಸರ್ಕಾರದ ಆಡಳಿತದಲ್ಲಿ ಅತಿಹೆಚ್ಚು ಭ್ರಷ್ಟಾಚಾರ, ಅತ್ಯಾಚಾರ, ಹತ್ಯೆಗಳು, ಕೋಮುಗಲಭೆಗಳು ನಡೆದಿವೆ. ಹೀಗಿರುವಾಗ, ಕಾಂಗ್ರೆಸ್‌ ಪಾಂಡವರ ಪಕ್ಷವಾಗಲು ಹೇಗೆ ಸಾಧ್ಯ ಎಂಬುದನ್ನು ಸಿದ್ದರಾಮಯ್ಯ ಸ್ಪಷ್ಟಪಡಿಸಬೇಕು ಎಂದು ಬಿಜೆಪಿ ಶಾಸಕ ಸಿಟಿ ರವಿ ಸವಾಲು ಹಾಕಿದರು.
ಪಾಂಡವರು ಇರುವ ಕಡೆ ಶ್ರೀಕೃಷ್ಣ ಇರುತ್ತಾನೆ. ಉಡುಪಿಯ ಶ್ರೀಕೃಷ್ಣನ ದರ್ಶನ ಮಾಡಲು ನಿಮಗೆ ಮನಸ್ಸಿಲ್ಲ. ಶ್ರೀಕೃಷ್ಣ ವಿರೋಧಿಯಂತೆ ವರ್ತನೆ ಮಾಡಿದ ನೀವು ಪಾಂಡವರಾಗಲು ಹೇಗೆ ಸಾಧ್ಯ? ಎಂದು ಸಿಟಿ ರವಿ ಸಪ್ರಶ್ನಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

SCROLL FOR NEXT