ಬೆಜಿಪಿ ಪಕ್ಷದ ಚಿಹ್ಲೆ ( ಸಾಂದರ್ಭಿಕ ಚಿತ್ರ) 
ರಾಜಕೀಯ

ಬಿಜೆಪಿ ಆನ್ ಲೈನ್ ಪ್ರಚಾರಕ್ಕೆ 25 ಸಾವಿರ ಸ್ವಯಂಸೇವಕರ ಸೇರ್ಪಡೆ

ಮುಂಬರುವ ವಿಧಾನಸಭಾ ಚುನಾವಣೆ ಮೇಲೆ ಕಣ್ಣಿಟ್ಟಿರುವ ಬಿಜೆಪಿ , ಈ ಮಾಸಾಂತ್ಯದೊಳಗೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರಕ್ಕೆ 25 ಸಾವಿರ ಸ್ವಯಂ ಸೇವಕರನ್ನು ಸೇರ್ಪಡೆಗೊಳಿಸುವ ಆಲೋಚನೆಯಲ್ಲಿದೆ.

ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆ ಮೇಲೆ ಕಣ್ಣಿಟ್ಟಿರುವ ಬಿಜೆಪಿ , ಈ ಮಾಸಾಂತ್ಯದೊಳಗೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರಕ್ಕೆ 25 ಸಾವಿರ ಸ್ವಯಂ ಸೇವಕರನ್ನು ಸೇರ್ಪಡೆಗೊಳಿಸುವ ಆಲೋಚನೆಯಲ್ಲಿದೆ. ಕ್ಷೇತ್ರ ವ್ಯಾಪ್ತಿಯಲ್ಲಿ ಸ್ವಯಂ ಸೇವಕರಿಗೆ ತರಬೇ ಕಾರ್ಯಕ್ರಮ ಪೂರ್ಣಗೊಳಿಸುವಂತೆ ಪಕ್ಷದ ಮುಖಂಡರಿಗೆ ರಾಜ್ಯ ಬಿಜೆಪಿ ಉಸ್ತುವಾರಿ ಮುರಳೀಧರ್ ರಾವ್ ಗಡುವು ನೀಡಿದ್ದಾರೆ.

ಪ್ರತಿಯೊಂದು ಕ್ಷೇತ್ರದಲ್ಲಿ 100 ಸದಸ್ಯರನ್ನೊಳಗೊಂಡ ತಂಡವೊಂದನ್ನು ರಚಿಸಲಾಗಿದೆ. 224 ವಿಧಾನಸಭಾ ಕ್ಷೇತ್ರಗಳಲ್ಲಿ 160 ಕಾರ್ಯಗಾರವನ್ನು ಈಗಾಗಲೇ ನಡೆಸಲಾಗಿದೆ. ಉಳಿದಿರುವ 64 ಕಾರ್ಯಗಾರಗಳನ್ನು ಜ. 31ರೊಳಗೆ ಪೂರ್ಣಗೊಳಿಸಲಾಗುವುದು, ಈ ತಿಂಗಳೊಳಗೆ 25 ಸಾವಿರ ಸ್ವಯಂ ಸೇವಕರನ್ನು ಸೇರ್ಪಡೆಗೊಳಿಸಲಾಗುವುದು ಎಂದು ರಾಜ್ಯ ಬಿಜೆಪಿ ಸಾಮಾಜಿಕ ಜಾಲತಾಣ ಘಟಕದ ಮುಖ್ಯಸ್ಥ ಬಾಲಾಜಿ ಶ್ರೀನಿವಾಸ್  ತಿಳಿಸಿದ್ದಾರೆ.
 
ಫೇಸ್ ಬುಕ್, ಟ್ವಿಟರ್, ಮತ್ತಿತರ ಸಾಮಾಜಿಕ ಜಾಲತಾಣಗಳ ಮೂಲಕ ಬಿಜೆಪಿ ಹಾಗೂ ಪಕ್ಷದ ರಾಷ್ಟ್ರ, ರಾಜ್ಯಮಟ್ಟದ ಮುಖಂಡರ ಬಗ್ಗೆ ಒಳ್ಳೆಯ ಅಭಿಪ್ರಾಯ, ಸಂದೇಶ ಹರಡುವಂತೆ ಈ ಸ್ವಯಂ ಸೇವಕರಿಗೆ ತರಬೇತಿ ನೀಡಲಾಗಿದೆ. ಸಾಮಾಜಿಕ ಜಾಲತಾಣ ನಿರ್ವಹಿಸಲು ರಾಜ್ಯಮಟ್ಟದಲ್ಲಿ 15 ತಂಡಗಳಿವೆ. ಜಿಲ್ಲಾ ಹಾಗೂ ಕ್ಷೇತ್ರ ಮಟ್ಟದಲ್ಲೂ ಇಂತಹ ತಂಡಗಳಿದ್ದು, ಚಿತ್ರ, ವಿಡಿಯೋ ಸಂದೇಶ ಮೂಲಕ ಪಕ್ಷದ ಬಗ್ಗೆ ಒಳ್ಳೆಯ ಪರಿಕಲ್ಪನೆ ರೂಪಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಕಾಂಗ್ರೆಸ್, ಜೆಡಿಎಸ್ ಮತ್ತಿತರ ಪಕ್ಷಗಳ ದುರಾಡಳಿತದ ಬಗ್ಗೆಯೂ ಅರಿವು ಮೂಡಿಸಲಾಗುತ್ತಿದೆ, ಈಗಾಗಲೇ 8 ಸಾವಿರ ವಾಟ್ಸಪ್ ಗುಂಪುಗಳನ್ನು ರಚಿಸಲಾಗಿದೆ, ಈ ಗುಂಪಿನಲ್ಲಿ ಸ್ಥಳೀಯ ಸಮಸ್ಯೆಗಳು ಹಾಗೂ ನಾಯಕರ ಬಗ್ಗೆ ಒಳ್ಳೆಯ ಅಭಿಪ್ರಾಯ ಮೂಡುವಂತೆ ಕಾರ್ಯನಿರ್ವಹಿಸಲಾಗುತ್ತಿದೆ ಎಂದು ಶ್ರೀನಿವಾಸ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

Vijay Hazare Trophy: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

UP ದಲಿತ ಮಹಿಳೆ ಕೊಲೆ: ಯೋಗಿ ಸರ್ಕಾರ ಜಾತಿ, ಧರ್ಮದ ಆಧಾರದಲ್ಲಿ ದ್ವೇಷಕ್ಕೆ ಪ್ರಚೋದನೆ- ಕಾಂಗ್ರೆಸ್ ಕಿಡಿ!

SCROLL FOR NEXT