ಹೆಚ್ ಡಿ ಕುಮಾರಸ್ವಾಮಿ-ಸಿದ್ದರಾಮಯ್ಯ 
ರಾಜಕೀಯ

ಕುಮಾರಸ್ವಾಮಿ ಹಠಕ್ಕೆ ಮಣಿದ ಕಾಂಗ್ರೆಸ್; ಬೆಳೆ ಸಾಲಮನ್ನಾ, ನೂತನ ಬಜೆಟ್ ಮಂಡನೆಗೆ ಸಮ್ಮತಿ!

ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಸಭೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಘೋಷಿಸಿದಂತೆ ರೈತರ ಕೃಷಿ ಸಾಲ ಮನ್ನಾಗೆ ಹಸಿರು ನಿಶಾನೆ ಸಿಕ್ಕಿದ್ದು...

ಬೆಂಗಳೂರು: ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಸಭೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಘೋಷಿಸಿದಂತೆ ರೈತರ ಕೃಷಿ ಸಾಲ ಮನ್ನಾಗೆ ಹಸಿರು ನಿಶಾನೆ ಸಿಕ್ಕಿದ್ದು ನೂತನ ಬಜೆಟ್ ಮಂಡನೆಗೆ ಸಮ್ಮತಿಸಲಾಗಿದೆ. 
ರೈತರ ಸಾಲ ಮನ್ನಾ ವಿಷಯವಾಗಿ ಇದ್ದ ಗೊಂದಲಗಳು ನಿವಾರಣೆಯಾಗಿದೆ. ಕುಮಾರಸ್ವಾಮಿ ಅವರ ಹಠಕ್ಕೆ ಕೊನೆಗೂ ಮಣಿದ ಕಾಂಗ್ರೆಸ್ ಆರ್ಥಿಕ ಹೊರೆ ಆಗದ ರೀತಿಯಲ್ಲಿ ಸಾಲಮನ್ನಾ ಮಾಡಲು ಒಪ್ಪಿಗೆ ನೀಡಿದೆ. ಇದೇ 5ರಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮಂಡಿಸಲಿರುವ ಬಜೆಟ್ ನಲ್ಲಿ ರೈತರ ಸಾಲಮನ್ನಾ ಕುರಿತು ಘೋಷಣೆ ಮಾಡಲಿದ್ದಾರೆ. 
ಕುಮಾರಕೃಪ ಅತಿಥಿ ಗೃಹದಲ್ಲಿ ನಡೆದ ಸಭೆಯಲ್ಲಿ ಸಿಎಂ ಕುಮಾರಸ್ವಾಮಿ, ಡಿಸಿಎಂ ಪರಮೇಶ್ವರ್, ಜೆಡಿಎಸ್ ನ ರಾಷ್ಟ್ರೀಯ ಮಹಾ ಪ್ರಧಾನ ಕಾರ್ಯದರ್ಶಿ ಡ್ಯಾನೀಶ್ ಅಲಿ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆಸಿ ವೇಣುಗೋಪಾಲ್ ಉಪಸ್ಥಿತರಿದ್ದರು. 
ಇದೇ ವೇಳೆ ಹಿಂದಿನ ಸಿದ್ದರಾಮಯ್ಯ ಸರ್ಕಾರದ ಎಲ್ಲಾ ಜನಪ್ರಿಯ ಭಾಗ್ಯ ಮತ್ತಿತ್ತರ ಯೋಜನೆಗಳನ್ನು ಮುಂದುವರಿಸಿಕೊಂಡು ಹೋಗಲು ಸಹ ತೀರ್ಮಾನಿಸಲಾಗಿದೆ. 
ನೂತನ ಸರ್ಕಾರದ ಸಾಮಾನ್ಯ ಕನಿಷ್ಠ ಕಾರ್ಯಕ್ರಮವನ್ನು 'ಕನಿಷ್ಠ ಬದಲಾವಣೆ' ಹಾಗೂ 'ಸಣ್ಣ ಹೊಂದಾಣಿಕೆ' ಮೂಲಕ ಜಾರಿಗೆ ತರಲು ತೀರ್ಮಾನಿಸಲಾಗಿದೆ ಎಂದು ಡ್ಯಾನೀಶ್ ಅಲಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT