ಸರ್ಕಾರ ಹಂಚಿಕೆ ಮಾಡಿದ ವಸತಿ ಬೇಡ ಎಂದ ಬಿ.ಎಸ್.ಯಡಿಯೂರಪ್ಪ 
ರಾಜಕೀಯ

ಸರ್ಕಾರ ನೀಡಿದ ವಸತಿ ಬೇಡ, ಮನೆಯಿಂದಲೇ ಕೆಲಸ ಮಾಡುವೆ ಎಂದ ಬಿ.ಎಸ್. ಯಡಿಯೂರಪ್ಪ

ತಮ್ಮ ಪಾಲಿನ ಅದೃಷ್ಟದ ನಿವಾಸ ನೀಡುವ ಬದಲು ರಾಜ್ಯ ಸರ್ಕಾರವು ಬೇರೆ ನಿವಾಸ ನೀಡಿರುವುದಕ್ಕೆ ವಿಧಾನಸಭೆ ಪ್ರತಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ಬೇಸರ ವ್ಯಕ್ತಪಡಿಸಿದ್ದು, ಹಂಚಿಕೆ ಮಾಡಿರುವ ಸರ್ಕಾರಿ ವಸತಿಯನ್ನು ತಿರಸ್ಕರಿಸಿದ್ದಾರೆ...

ಬೆಂಗಳೂರು: ತಮ್ಮ ಪಾಲಿನ ಅದೃಷ್ಟದ ನಿವಾಸ ನೀಡುವ ಬದಲು ರಾಜ್ಯ ಸರ್ಕಾರವು ಬೇರೆ ನಿವಾಸ ನೀಡಿರುವುದಕ್ಕೆ ವಿಧಾನಸಭೆ ಪ್ರತಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ಬೇಸರ ವ್ಯಕ್ತಪಡಿಸಿದ್ದು, ಹಂಚಿಕೆ ಮಾಡಿರುವ ಸರ್ಕಾರಿ ವಸತಿಯನ್ನು ತಿರಸ್ಕರಿಸಿದ್ದಾರೆ, 
ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಯಡಿಯೂರಪ್ಪ ಅವರು ರೇಸ್ ವ್ಯೂ ಕಾಟೇಜ್ ನಂ.2 ನಿವಾಸದಲ್ಲಿ ತಂಗಿದ್ದರು. ಇದು ಅವರ ಅದೃಷ್ಟದ ಮನೆ ಎಂದೇ ಭಾವಿಸಲಾಗಿತ್ತು. ಹೀಗಾಗಿ ಮತ್ತೊಮ್ಮೆ ಅದೇ ನಿವಾಸ ನೀಡುವಂತೆ ಕೋರಿ ಯಡಿಯೂರಪ್ಪ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಪತ್ರ ಬರೆದು ಮನವಿ ಮಾಡಿಕೊಂಡಿದ್ದರು. ಆದರೆ, ಯಡಿಯೂರಪ್ಪ ಮನವಿಯನ್ನು ತಿರಸ್ಕರಿಸಿದ ರಾಜ್ಯ ಸರ್ಕಾರವು ರೇಸ್ ವ್ಯೂ ಕಾಟೇಜ್ ನಂ.4 ನಿವಾಸವನ್ನು ಹಂಚಿಕೆ ಮಾಡಿದೆ. 
ಯಡಿಯೂರಪ್ಪ ಅವರು ಬಯಸಿದ್ದ ರೇಸ್ ವ್ಯೂ ಕಾಟೇಜ್ ನಂ.2 ಸಂಖ್ಯೆಯ ನಿವಾಸವನ್ನು ಸಚಿವ ಸಾ.ರಾ.ಮಹೇಳ್ ಅವರಿಗೆ ನೀಡಲಾಗಿದೆ. 
ಸರ್ಕಾರದ ಈ ನಡೆಗೆ ತೀವ್ರ ಬೇಸರ ವ್ಯಕ್ತಪಡಿಸಿರುವ ಯಡಿಯೂರಪ್ಪರ ಅವರು, ಸರ್ಕಾರಿ ನಿವಾಸಕ್ಕೆ ತೆರಳದೆ ಸ್ವಂತ ಮನೆಯಲ್ಲಿಯೇ ಇರಲು ನಿರ್ಧರಿಸಿದ್ದಾರೆ. 
ನನಗೆ ನೀಡಿರುವ ರೇಸ್ ವ್ಯೂ ಕಾಟೇಜ್ ನಂ.4 ನಿವಾಸವನ್ನು ತಿರಸ್ಕರಿಸಿದ್ದೇನೆ. ಮುಖ್ಯಮಂತ್ರಿಗಳಿಗೆ ಪತ್ರ ಬರೆದು ರೇಸ್ ವ್ಯೂ ಕಾಟೇಜ್ ನಂ.,2 ನಿವಾಸ ನೀಡುವಂತೆ ಮನವಿ ಮಾಡಿದ್ದೆ. ಆದರೆ, ಅವರು ನನ್ನ ಕೋರಿಕೆಯನ್ನು ಮನ್ನಿಸದ ಕಾರಣ ಅವರ ನಿರ್ಧಾರವನ್ನು ತಿರಸ್ಕರಿಸಿದ್ದೇನೆಂದು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

19 ವರ್ಷಗಳ ಹಳೆಯ ದಾಖಲೆ ಉಡೀಸ್: ಅಭಿಷೇಕ್, ಪಾಂಡ್ಯ ಅಬ್ಬರ; ಜಿಂಬಾಬ್ವೆಗೆ 257 ರನ್‌ ಬೃಹತ್ ಮೊತ್ತದ ಗುರಿ ನೀಡಿದ ಭಾರತ!

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT