ಮಠದಲ್ಲಿ ಪತ್ನಿಯೊಂದಿಗೆ ಧಾರ್ಮಿಕ ವಿಧಿ ವಿಧಾನದತ್ತೆ ತೊಡಗಿರುವ ಸಚಿವ ಡಿಕೆ ಶಿವಕುಮಾರ್ 
ರಾಜಕೀಯ

ವಿಧಾನ ಸಭೆಯಲ್ಲಿ ಎಚ್ ಡಿಕೆ ಬಜೆಟ್ ಮಂಡನೆ: ಸದನಕ್ಕೆ ಗೈರಾಗಿ ಮಠದಲ್ಲಿ ಡಿಕೆಶಿ, ಹೋಮ-ಹವನ ನಡೆಸಿದ್ದು ಏಕೆ?

ಸಚಿವ ಡಿ.ಕೆ ಶಿವಕುಮಾರ್ ಗೈರಾಗಿದ್ದರು. ಸದನಕ್ಕೆ ಬಾರದ ಡಿಕೆಶಿ ಪತ್ನಿ ಉಷಾ ಅವರೊಂದಿಗೆ ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಸೋಮೆಕಟ್ಟೆ ಕಾಡುಸಿದ್ದೇಶ್ವರ...

ತುಮಕೂರು: ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಸಿಎಂ ಕುಮಾರ ಸ್ವಾಮಿ ಗುರುವಾರ ತಮ್ಮ ಚೊಚ್ಚಲ ಬಜೆಟ್ ಮಂಡಿಸಿದರು. ಈ ವೇಳೆ ಕಾಂಗ್ರೆಸ್ ಪ್ರಭಾವಿ ಸಚಿವ ಡಿ.ಕೆ ಶಿವಕುಮಾರ್ ಗೈರಾಗಿದ್ದರು. ಸದನಕ್ಕೆ ಬಾರದ ಡಿಕೆಶಿ ಪತ್ನಿ ಉಷಾ ಅವರೊಂದಿಗೆ ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಸೋಮೆಕಟ್ಟೆ ಕಾಡಸಿದ್ದೇಶ್ವರ ಮಠದಲ್ಲಿ ಪೂಜಾ ಕೈಂಕರ್ಯದಲ್ಲಿ ತೊಡಗಿಕೊಂಡಿದ್ದರು.
ಜುಲೈ 1 ರಂದು ಆರಂಭವಾದ ಈ ಧಾರ್ಮಿಕ ವಿಧಿ ವಿಧಾನದಲ್ಲಿ ಹಲವು ಹೋಮ ಹವನ ನಡೆದಿದ್ದವು, ಅಂತಿಮ ದಿನವಾದ ಗುರುವಾರ ಪೂರ್ಣಾಹುತಿ ನೀಡಬೇಕಿತ್ತು, ಇದಕ್ಕೆ ಡಿಕೆ ಶಿವಕುಮಾರ್ ಕಡ್ಡಾಯವಾಗಿ ಹಾಜರಾಗಬೇಕೆಂದು ಮಠದ ಸ್ವಾಮಿಜೀ ತಿಳಿಸಿದ್ದರು. ಹೀಗಾಗಿ ಅವರು ಭಾಗವಹಿಸಿದ್ದರು ಎಂದು ಮಠದ ದಯಾನಂದ ಸಾಗರ ತಿಳಿಸಿದ್ದಾರೆ.
ಡಿ,ಕೆ ಶಿವಕುಮಾರ್ ಮುಂದೊಮ್ಮೆ ಮುಖ್ಯಮಂತ್ರಿಯಾಗುತ್ತಾರೆ ಎಂದು ಸ್ವಾಮೀಜಿಗಳು ಭವಿಷ್ಯ ನುಡಿದಿದ್ದು ಅವರ ಸಲಹೆಯಂತೆ ಪೂಜೆ ನಡೆದಿದೆ. ಶಿವಕುಮಾರ್ ಅವರ ಆಪ್ತ ಜ್ಯೋತಿಷಿ  ನಾಗರಾಜ್ ಶಾಸ್ತ್ರಿ ಸಲಹೆ ಮೇರೆಗೆ ಸಚಿವರು ಪೂಜಾ ಕೈಂಕರ್ಯ ನಡೆಸಿದ್ದಾರೆ.
ಇದೊಂದು ಪೂರ್ವ ನಿರ್ಧರಿತ ಕೆಲಸವಾಗಿತ್ತು. ಇದರ ಬಗ್ಗೆ ನಾನು ಮುಖ್ಯಮಂತ್ರಿ ಅವರಿಗೆ ತಿಳಿಸಿದ್ದೆ, ನಾನು ಬಜೆಟ್ ಮಂಡಿಸುವ ವೇಳೆ ಹಾಜರಿರಲು ಸಾಧ್ಯವಿಲ್ಲ ಎಂದು ಹೇಳಿರುವುದಾಗಿ ಶಿವಕುಮಾರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಕಳೆದ 15 ವರ್ಷಗಳಿಂದ ಶಿವಕುಮಾರ್ ಮಠದ ಭಕ್ತಾದಿಯಾಗಿದ್ದಾರೆ. ಹಿಂದೊಮ್ಮೆ ಎಸ್ ಎಂ ಕೃಷ್ಣ ಮಠಕ್ಕೆ ಭೇಟಿ ನೀಡಿದ್ದರು. ಮಠಕ್ಕೆ ಭೇಟಿ ನೀಡಿದ ನಂತರ 2005 ರಲ್ಲಿ ಕೃಷ್ಣ ಮಹಾರಾಷ್ಟ್ರ ರಾಜ್ಯಪಾಲರಾಗಿ ನೇಮಕಗೊಂಡಿದ್ದರು.
ಮಠಕ್ಕೆ ಭೇಟಿ ನೀಡಿದ ನಂತರ ನನ್ನ ರಾಜಕೀಯ ಜೀವನದ ಭವಿಷ್ಯವೇ ಬದಲಾಯಿತು ಎಂದು ಕೃಷ್ಣ ಹೇಳಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್, ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

ಲೆಬನಾನ್ ನಲ್ಲಿ ಇಸ್ರೇಲ್ ಆರ್ಭಟ: ಮನೆಗಳ ಮೇಲೆ ಸ್ಫೋಟಕಗಳಿಂದ ದಾಳಿ; ಹಲವು ಹಳ್ಳಿಗಳು ನಾಮಾವಶೇಷ!

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

SCROLL FOR NEXT