ಮಠದಲ್ಲಿ ಪತ್ನಿಯೊಂದಿಗೆ ಧಾರ್ಮಿಕ ವಿಧಿ ವಿಧಾನದತ್ತೆ ತೊಡಗಿರುವ ಸಚಿವ ಡಿಕೆ ಶಿವಕುಮಾರ್ 
ರಾಜಕೀಯ

ವಿಧಾನ ಸಭೆಯಲ್ಲಿ ಎಚ್ ಡಿಕೆ ಬಜೆಟ್ ಮಂಡನೆ: ಸದನಕ್ಕೆ ಗೈರಾಗಿ ಮಠದಲ್ಲಿ ಡಿಕೆಶಿ, ಹೋಮ-ಹವನ ನಡೆಸಿದ್ದು ಏಕೆ?

ಸಚಿವ ಡಿ.ಕೆ ಶಿವಕುಮಾರ್ ಗೈರಾಗಿದ್ದರು. ಸದನಕ್ಕೆ ಬಾರದ ಡಿಕೆಶಿ ಪತ್ನಿ ಉಷಾ ಅವರೊಂದಿಗೆ ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಸೋಮೆಕಟ್ಟೆ ಕಾಡುಸಿದ್ದೇಶ್ವರ...

ತುಮಕೂರು: ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಸಿಎಂ ಕುಮಾರ ಸ್ವಾಮಿ ಗುರುವಾರ ತಮ್ಮ ಚೊಚ್ಚಲ ಬಜೆಟ್ ಮಂಡಿಸಿದರು. ಈ ವೇಳೆ ಕಾಂಗ್ರೆಸ್ ಪ್ರಭಾವಿ ಸಚಿವ ಡಿ.ಕೆ ಶಿವಕುಮಾರ್ ಗೈರಾಗಿದ್ದರು. ಸದನಕ್ಕೆ ಬಾರದ ಡಿಕೆಶಿ ಪತ್ನಿ ಉಷಾ ಅವರೊಂದಿಗೆ ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಸೋಮೆಕಟ್ಟೆ ಕಾಡಸಿದ್ದೇಶ್ವರ ಮಠದಲ್ಲಿ ಪೂಜಾ ಕೈಂಕರ್ಯದಲ್ಲಿ ತೊಡಗಿಕೊಂಡಿದ್ದರು.
ಜುಲೈ 1 ರಂದು ಆರಂಭವಾದ ಈ ಧಾರ್ಮಿಕ ವಿಧಿ ವಿಧಾನದಲ್ಲಿ ಹಲವು ಹೋಮ ಹವನ ನಡೆದಿದ್ದವು, ಅಂತಿಮ ದಿನವಾದ ಗುರುವಾರ ಪೂರ್ಣಾಹುತಿ ನೀಡಬೇಕಿತ್ತು, ಇದಕ್ಕೆ ಡಿಕೆ ಶಿವಕುಮಾರ್ ಕಡ್ಡಾಯವಾಗಿ ಹಾಜರಾಗಬೇಕೆಂದು ಮಠದ ಸ್ವಾಮಿಜೀ ತಿಳಿಸಿದ್ದರು. ಹೀಗಾಗಿ ಅವರು ಭಾಗವಹಿಸಿದ್ದರು ಎಂದು ಮಠದ ದಯಾನಂದ ಸಾಗರ ತಿಳಿಸಿದ್ದಾರೆ.
ಡಿ,ಕೆ ಶಿವಕುಮಾರ್ ಮುಂದೊಮ್ಮೆ ಮುಖ್ಯಮಂತ್ರಿಯಾಗುತ್ತಾರೆ ಎಂದು ಸ್ವಾಮೀಜಿಗಳು ಭವಿಷ್ಯ ನುಡಿದಿದ್ದು ಅವರ ಸಲಹೆಯಂತೆ ಪೂಜೆ ನಡೆದಿದೆ. ಶಿವಕುಮಾರ್ ಅವರ ಆಪ್ತ ಜ್ಯೋತಿಷಿ  ನಾಗರಾಜ್ ಶಾಸ್ತ್ರಿ ಸಲಹೆ ಮೇರೆಗೆ ಸಚಿವರು ಪೂಜಾ ಕೈಂಕರ್ಯ ನಡೆಸಿದ್ದಾರೆ.
ಇದೊಂದು ಪೂರ್ವ ನಿರ್ಧರಿತ ಕೆಲಸವಾಗಿತ್ತು. ಇದರ ಬಗ್ಗೆ ನಾನು ಮುಖ್ಯಮಂತ್ರಿ ಅವರಿಗೆ ತಿಳಿಸಿದ್ದೆ, ನಾನು ಬಜೆಟ್ ಮಂಡಿಸುವ ವೇಳೆ ಹಾಜರಿರಲು ಸಾಧ್ಯವಿಲ್ಲ ಎಂದು ಹೇಳಿರುವುದಾಗಿ ಶಿವಕುಮಾರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಕಳೆದ 15 ವರ್ಷಗಳಿಂದ ಶಿವಕುಮಾರ್ ಮಠದ ಭಕ್ತಾದಿಯಾಗಿದ್ದಾರೆ. ಹಿಂದೊಮ್ಮೆ ಎಸ್ ಎಂ ಕೃಷ್ಣ ಮಠಕ್ಕೆ ಭೇಟಿ ನೀಡಿದ್ದರು. ಮಠಕ್ಕೆ ಭೇಟಿ ನೀಡಿದ ನಂತರ 2005 ರಲ್ಲಿ ಕೃಷ್ಣ ಮಹಾರಾಷ್ಟ್ರ ರಾಜ್ಯಪಾಲರಾಗಿ ನೇಮಕಗೊಂಡಿದ್ದರು.
ಮಠಕ್ಕೆ ಭೇಟಿ ನೀಡಿದ ನಂತರ ನನ್ನ ರಾಜಕೀಯ ಜೀವನದ ಭವಿಷ್ಯವೇ ಬದಲಾಯಿತು ಎಂದು ಕೃಷ್ಣ ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT