ಡಿ ವಿ ಸದಾನಂದ ಗೌಡ 
ರಾಜಕೀಯ

ಸಮ್ಮಿಶ್ರ ಸರ್ಕಾರ ಶೀಘ್ರ ಪತನ: ಡಿ ವಿ ಸದಾನಂದ ಗೌಡ

ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷದ ನಾಯಕರು ಅಧಿಕಾರಕ್ಕಾಗಿ ಕಿತ್ತಾಟ ನಡೆಸುತ್ತಿದ್ದು ಕೆಲವೇ ...

ಮಂಗಳೂರು: ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷದ ನಾಯಕರು ಅಧಿಕಾರಕ್ಕಾಗಿ ಕಿತ್ತಾಟ ನಡೆಸುತ್ತಿದ್ದು ಕೆಲವೇ ದಿನಗಳಲ್ಲಿ ಸಮ್ಮಿಶ್ರ ಸರ್ಕಾರ ಪತನವಾಗಲಿದೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಹೇಳಿದ್ದಾರೆ.

ಮಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಜನತೆ ಕೂಡ ಅದನ್ನೇ ಆಶಿಸುತ್ತಿದ್ದಾರೆ. ಜನಾದೇಶವಿಲ್ಲದೆ ಬಿಜೆಪಿಯನ್ನು ದೂರವಿಡಬೇಕೆಂಬ ಏಕೈಕ ಉದ್ದೇಶದಿಂದ ಅಧಿಕಾರಕ್ಕೆ ಬಂದ ಸಮ್ಮಿಶ್ರ ಸರ್ಕಾರ ಹೆಚ್ಚು ದಿನ ಉಳಿಯುವ ಲಕ್ಷಣಗಳು ಕಾಣುತ್ತಿಲ್ಲ. ಕಾಂಗ್ರೆಸ್‌ -ಜೆಡಿಎಸ್‌ ನಾಯಕರ ನಡುವೆ ತೆರೆಮರೆಯಲ್ಲಿ ಕುರ್ಚಿಗಾಗಿ ಕಿತ್ತಾಟ, ಮಂತ್ರಿ ಸ್ಥಾನಕ್ಕಾಗಿ ಹೋರಾಟ ನಡೆಯುತ್ತಿದೆ. ಇವರ ಒಳಜಗಳಗಳಿಂದಾಗಿ ರಾಜ್ಯ ಸರ್ಕಾರದಲ್ಲಿ ಆಡಳಿತ ಸಂಪೂರ್ಣ ಕುಸಿದಿದೆ. ಅಧಿಕಾರಿಗಳ ಮೇಲೆ ಅಂಕುಶ ಇಲ್ಲದಾಗಿದೆ. ಹೀಗಾಗಿ ಅವರು ತಮಗೆ ಬೇಕಾದಂತೆ ಆರಾಮವಾಗಿ ಇದ್ದಾರೆ ಎಂದರು.

ಮಳೆಗೆ ಮುಂಚಿತವಾಗಿ ಯಾವುದೇ ಸರ್ಕಾರದಲ್ಲಿ ಜಿಲ್ಲಾಧಿಕಾರಿಗಳು,  ಜನಪ್ರತಿನಿಧಿಗಳ, ಅಧಿಕಾರಿಗಳ ನೇತೃತ್ವದಲ್ಲಿ  ಸಭೆ ಕರೆಯಬೇಕು. 5 ರಿಂದ 10 ಕೋಟಿ ರೂಪಾಯಿ ಪರಿಹಾರಕ್ಕಾಗಿ ಮೀಸಲಿಡಬೇಕು. ಆದರೆ ಸರ್ಕಾರ ಈ ಮಳೆಗಾಲದಲ್ಲಿ ಯಾವುದೇ ಕೆಲಸ ಕಾರ್ಯಗಳನ್ನು ಮಾಡಲಿಲ್ಲ. ಜನ ಮುಳುಗಿ ಹೋದರೆ ನಮಗೇನು ಅನ್ನುವ ಧೋರಣೆ ತಳೆದಿದೆ, ಆದರೆ ಕೆಲವೇ ದಿನಗಳಲ್ಲಿ ಇವರು ಮುಳುಗಿ ಹೋಗುತ್ತಾರೆ ಎಂದು ಟೀಕಿಸಿದರು.

ಕೇಂದ್ರದಲ್ಲಿ ಮುಂದಿನ ವರ್ಷ ನಡೆಯುವ ಲೋಕಸಭೆ ಚುನಾವಣೆಯಲ್ಲಿ ಮೋದಯವರನ್ನು ಸೋಲಿಸಲು ತೃತೀಯ ರಂಗ ರಚನೆ ಮಾಡುವುದು ಕೇವಲ ಕನಸು. ತೃತೀಯ ರಂಗ ಹರಿದ ಬಟ್ಟೆಯಂತೆ, ಒಂದು ಕಡೆ ಸೂಜಿ ಹಿಡಿದು ಹೊಲಿದರೆ ಇನ್ನೊಂದು ಕಡೆ ಹರಿಯುತ್ತಿದೆ. ಈಗ ಸಣ್ಣ ಸಣ್ಣ ತೂತುಗಳನ್ನು  ಹೊಲಿಯಲಾಗಿದ್ದು ಇನ್ನೊಂದು ಕಡೆ ದೊಡ್ಡದಾಗಿ ಹರಿಯುತ್ತದೆ ಎಂದು ಲೇವಡಿ ಮಾಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

T20 ವಿಶ್ವಕಪ್ 2026: ಭಾರತ vs ಪಾಕಿಸ್ತಾನ ಪಂದ್ಯಕ್ಕೆ ಮಳೆ ಅಡ್ಡಿ?, ಕೊಲಂಬೋದಲ್ಲಿ ಶೇ.94ರಷ್ಟು ವರ್ಷಧಾರೆ ಸಾಧ್ಯತೆ!

ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕ ಮೂಲದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ: 6 ದಿನಗಳ ನಂತರ ಶವ ಪತ್ತೆ

ಬೆಂಗಳೂರಿನ ಡಬಲ್ ಡೆಕ್ಕರ್ ಯೋಜನೆ ಬಗ್ಗೆ ಕೇಂದ್ರ ಕಳವಳ!

T20 World Cup 2026: ಭಾರತದ ಸಂಭಾವ್ಯ ಪ್ಲೇಯಿಂಗ್ XI; ಗೌತಮ್ ಗಂಭೀರ್, ಸೂರ್ಯಕುಮಾರ್ ಯಾದವ್‌ಗೆ ತಲೆನೋವಾದ ಆಯ್ಕೆ!

T20 World Cup 2026: 'ಭಾರತ ಮಾತ್ರ ಭಾರತವನ್ನು ಸೋಲಿಸಲು ಸಾಧ್ಯ'; IND vs PAK ಪಂದ್ಯಕ್ಕೂ ಮುನ್ನ ಪಾಕ್ ಮಾಜಿ ಕ್ರಿಕೆಟಿಗ ಹೇಳಿಕೆ

SCROLL FOR NEXT