ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ 
ರಾಜಕೀಯ

ಕರಾವಳಿ ಜಿಲ್ಲೆಗಳ ಬಗ್ಗೆ ಸಿಎಂ ಮಲತಾಯಿ ಧೋರಣೆ: ವಿಪಕ್ಷ ನಾಯಕ ಕೋಟಾ ಶ್ರೀನಿವಾಸ್ ಪೂಜಾರಿ

ರಾಜ್ಯದಲ್ಲಿ ತಾಯಿ ಸ್ಥಾನದಲ್ಲಿಲಬೇಕಾದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಕರಾವಳಿ ಜಿಲ್ಲೆಗಳಿಗೆ ಮಲತಾಯಿ ಧೋರಣೆ ಅನುಸರಿಸಿದ್ದಾರೆಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟಾ ಶ್ರೀನಿವಾಸ್ ಪೂಜಾರಿಯವರು ಶನಿವಾರ ಹೇಳಿದ್ದಾರೆ...

ಮಂಗಳೂರು: ರಾಜ್ಯದಲ್ಲಿ ತಾಯಿ ಸ್ಥಾನದಲ್ಲಿಲಬೇಕಾದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಕರಾವಳಿ ಜಿಲ್ಲೆಗಳಿಗೆ ಮಲತಾಯಿ ಧೋರಣೆ ಅನುಸರಿಸಿದ್ದಾರೆಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟಾ ಶ್ರೀನಿವಾಸ್ ಪೂಜಾರಿಯವರು ಶನಿವಾರ ಹೇಳಿದ್ದಾರೆ. 
ಕೊಡಿಯಾಲ್ಬೆಲ್'ನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಕರಾವಳಿ ಜಿಲ್ಲೆಗಳನ್ನು ನಿರ್ಲಕ್ಷಿಸಿರುವುದನ್ನು ನೋಡಿದರೆ, ಶಿಕ್ಷಣ ಹಾಗೂ ಇತರೆ ಕ್ಷೇತ್ರಗಳ ಕುರಿತಂತೆ ಸರ್ಕಾರಕ್ಕಿರುವ ಉದ್ದೇಶಗಳು ಇಲ್ಲಿಯೇ ತಿಳಿಯುತ್ತಿದೆ. ಶಿಕ್ಷಣ ಕ್ಷೇತ್ರ ಸರಿಯಾಕಿ ಕಾರ್ಯನಿರ್ವಹಿಸುತ್ತಿಲ್ಲ. ಏಕೆಂದರೆ, ಸರ್ಕಾರ ಟಿಎಂಎ ಪೈ ಸೇರಿದಂತೆ ಹಲವು ಶಿಕ್ಷಣ ತಜ್ಞರನ್ನು ಹೊಂದಿದೆ ಎಂದು ವ್ಯಂಗ್ಯವಾಡಿದ್ದಾರೆ. 
ವಿದ್ಯುತ್ ಹಾಗೂ ಪೆಟ್ರೋಲ್ ಬೆಲೆ ಏರಿಕೆಯಿಂದಾಗಿ ಮಧ್ಯಮ ವರ್ಗದ ಜನರ ಮೇಲೆ ಗಂಭೀರ ಪರಿಣಾಮ ಬೀರಿದೆ. ಒಳನಾಡಿನ ಮೀನುಗಾರಿಕೆಗೆ ಮಾತ್ರ ಅನುದಾನಗಳನ್ನು ಮೀಸಲಿಟ್ಟಿದ್ದಾರೆ. 300 ಕಿ.ಮೀ ದೂರದಲ್ಲಿರುವ ಮೀನುಗಾರರ ಸಮಸ್ಯೆಗಳು ಸಿಎಂ ಗಮನಕ್ಕೆ ಬಂದೇ ಇಲ್ಲ. ಅಭಿವೃದ್ಧಿ ಕುರಿತಂತೆ ಸರ್ಕಾರಕ್ಕೆ ದೂರ ದೃಷ್ಟಿಗಳಿಲ್ಲದಿರುವುದು ಬಜೆಟ್ ನಿಂದಲೇ ತಿಳಿಯುತ್ತಿದೆ ಎಂದು ಹೇಳಿದ್ದಾರೆ. 
ಸಿದ್ದರಾಮಯ್ಯ ಸರ್ಕಾರ ಜಾರಿಗೆ ತಂದಿದ್ದ ಎಲ್ಲಾ ಯೋಜನೆ ಹಾಗೂ ಕಾರ್ಯಕ್ರಮಗಳನ್ನು ಮುಂದುವರೆಸುವುದಾಗಿ ಸರ್ಕಾರ ಭರವಸೆ ನೀಡಿತ್ತು. ಆದರೆ, 253 ಇಂದಿರಾ ಕ್ಯಾಂಟೀನ್ ಗಳಲ್ಲಿ 73 ಕ್ಯಾಂಟೀನ್ ಗಳು ಮಾತ್ರ ಕಾರ್ಯನಿರ್ವಹಿಸುತ್ತಿವೆ. ಸಿದ್ದು ಸರ್ಕಾರದ ಕಾರ್ಯಕ್ರಮಗಳು ಮುಂದುವರೆಯುವ ಯಾವುದೇ ನಂಬಿಕೆಗಳಿಲ್ಲ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Parliament Monsoon Session: ರಾಹುಲ್ ವಿರುದ್ಧ ಆಕ್ರೋಶ; ಸಂಸತ್ ಆವರಣದಲ್ಲಿ NDA ಸಂಸದರ ಬೃಹತ್ ಪ್ರತಿಭಟನಾ ಮೆರವಣಿಗೆ, ಲೋಕಸಭೆ ಕಲಾಪ ಮಧ್ಯಾಹ್ನ 2ಕ್ಕೆ ಮುಂದೂಡಿಕೆ..!

ಪಶ್ಚಿಮ ಕೊಲಂಬಿಯಾದಲ್ಲಿ 7.4 ತೀವ್ರತೆಯ ಭೂಕಂಪ; ಮೃತರ ಸಂಖ್ಯೆ 111ಕ್ಕೆ ಏರಿಕೆ, ಹಲವರಿಗೆ ಗಾಯ

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಬಾರ್ ಕ್ಯಾಷಿಯರ್‌ಗೆ ಬೆದರಿಕೆ; ಇಬ್ಬರು ಉದ್ಯಮಿಗಳು, ಪ್ರಭಾವಿ ಮಹಿಳೆ ಮೇಲೆ ಕಣ್ಣಿಟ್ಟ ಪೊಲೀಸರು!

ಬಿಲಿಯನೇರ್ Gautam Adaniಗೆ ಬಿಗ್ ರಿಲೀಫ್: ಎಲ್ಲಾ ಕ್ರಿಮಿನಲ್ ಪ್ರಕರಣಗಳ ವಜಾಗೊಳಿಸಿದ ಅಮೆರಿಕಾ ನ್ಯಾಯಾಲಯ..!

ಬಿಡದಿ ಹೋರಾಟ ಅರ್ಧಕ್ಕೆ ಸ್ಥಗಿತ; ‘ರೈತರ ನ್ಯಾಯಕ್ಕಾಗಿ ತಾರ್ಕಿಕ ಅಂತ್ಯದವರೆಗೆ ಹೋರಾಟ’ ಎಂದ ದೇವೇಗೌಡ, ಆ.18ಕ್ಕೆ ವಿಧಾನಸೌಧ ಮುತ್ತಿಗೆ..!