ವಿಧಾನಪರಿಷತ್ ಕಲಾಪದ ಸಾಂದರ್ಭಿಕ ಚಿತ್ರ 
ರಾಜಕೀಯ

ಸಚಿವರ, ಅಧಿಕಾರಿಗಳ ಸತತ ಗೈರು; ಸಿಟ್ಟುಗೊಂಡ ಸಭಾಪತಿ ಬಸವರಾಜ್ ಹೊರಟ್ಟಿ

ವಿಧಾನಪರಿಷತ್ತಿನಲ್ಲಿ ನಡೆದ ಕಲಾಪ ವೇಳೆ ಸಚಿವರು ಮತ್ತು ಅಧಿಕಾರಿಗಳ ಗೈರು ಕಂಡುಬಂದು ...

ಬೆಂಗಳೂರು: ವಿಧಾನಪರಿಷತ್ತಿನಲ್ಲಿ ನಡೆದ ಕಲಾಪ ವೇಳೆ ಸಚಿವರು ಮತ್ತು ಅಧಿಕಾರಿಗಳ ಗೈರು ಕಂಡುಬಂದು ಅಸಮಾಧಾನ ಹೊರಹಾಕಿದ ಸಭಾಪತಿ ಬಸವರಾಜ್ ಹೊರಟ್ಟಿ, ಕಲಾಪಕ್ಕೆ ಬಾರದವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ ಪ್ರಸಂಗ ನಿನ್ನೆ ನಡೆಯಿತು.

ಸರ್ಕಾರದ ಅಧಿಕಾರಿಗಳು ಸದನದ ಕಲಾಪಕ್ಕೆ ಉಚಿತವಾಗಿ ಬರುವುದಿಲ್ಲ. ಅವರಿಗೆ ಹಣ ಕೊಡಲಾಗುತ್ತದೆ. ಆದರೂ ಕಲಾಪದ ಸಂದರ್ಭದಲ್ಲಿ ಬಾರದಿರುವುದು ಖಂಡನೀಯ. ಈ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಬಳಿ ಮಾತನಾಡಿ ಅಧಿಕಾರಿಗಳಿಗೆ ಕಠಿಣ ಎಚ್ಚರಿಕೆ ನೀಡಬೇಕೆಂದು ಹೇಳುತ್ತೇನೆ. ಕಳೆದ ಶುಕ್ರವಾರ ಕೂಡ ಸಭಾಪತಿ ಹೊರಟ್ಟಿಯವರು ಗೈರಾಗಿರುವ ಸಚಿವರು ಮತ್ತು ಅಧಿಕಾರಿಗಳ ವಿರುದ್ಧ ಅಸಮಾಧಾನ ಹೊರಹಾಕಿದ್ದರು.

ಕಲಾಪಕ್ಕೆ ಬಾರದಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ. ತಾವು ಏನು ಬೇಕಾದರೂ ಮಾಡಬಹುದು ಎಂದು ಅಧಿಕಾರಿಗಳು ಭಾವಿಸಿದರೆ ನಾವು ಕಲಾಪ ಏಕೆ ನಡೆಸಬೇಕು ಎಂದು ಹೊರಟ್ಟಿ ಪ್ರಶ್ನಿಸಿದರು.

ನಿನ್ನೆ ಬೆಳಗಿನ ಕಲಾಪದಲ್ಲಿ ಹಲವು ಸಚಿವರು ಸದನದಲ್ಲಿ ಹಾಜರಿದ್ದು ಪ್ರಶ್ನೆಗಳಿಗೆ ಉತ್ತರಿಸಬೇಕಾಗಿತ್ತು. ಡಾ ಜಿ ಪರಮೇಶ್ವರ್, ಜಿ ಟಿ ದೇವೇಗೌಡ, ಪ್ರಿಯಾಂಕ್ ಖರ್ಗೆ, ಸಾ ರಾ ಮಹೇಶ್, ಎನ್ ಎಚ್ ಶಿವಶಂಕರ ರೆಡ್ಡಿ ಮತ್ತು ಸಿ ಎಸ್ ಪುಟ್ಟರಾಜು ಇವರಲ್ಲಿ ಮೂವರು ಮಾತ್ರ ಬೆಳಗಿನ ಕಲಾಪದ ವೇಳೆ ಹಾಜರಿದ್ದರು.

ಬೆಂಗಳೂರು ಮೆಟ್ರೊ ರೈಲು ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಜಯ್ ಸೇಥ್, ಜಲಸಂಪನ್ಮೂಲ ಇಲಾಖೆಯ ಬಿ ಜಿ ಗುರುಪಾದಸ್ವಾಮಿ, ಸಾರಿಗೆ ಇಲಾಖೆಯ ಬಿ ಬಸವರಾಜು, ಕಾನೂನು ಇಲಾಖೆಯ ಎನ್ ಸಿ ಶ್ರೀನಿವಾಸ್ ಸದನದಲ್ಲಿ ಹಾಜರಿರಬೇಕಾಗಿದ್ದ ಅಧಿಕಾರಿಗಳಾಗಿದ್ದರು. ಸಭಾಪತಿಗಳ ಎಚ್ಚರಿಕೆ ನಂತರ ಮುಖ್ಯ ಕಾರ್ಯದರ್ಶಿಗಳು ಸದನದ ಕಲಾಪದ ವೇಳೆ ಕೆಲ ಹೊತ್ತು ಹಾಜರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಮಧ್ಯಾಹ್ನ 2.30ಕ್ಕೆ ಸಿದ್ದರಾಮಯ್ಯ ರಾಜೀನಾಮೆ; 3 ಗಂಟೆಗೆ ಪತ್ರಿಕಾಗೋಷ್ಠಿ; ಮುಂದಿನ CM ಡಿ.ಕೆ ಶಿವಕುಮಾರ್

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT