ವಿಧಾನಪರಿಷತ್ ಕಲಾಪದ ಸಾಂದರ್ಭಿಕ ಚಿತ್ರ 
ರಾಜಕೀಯ

ಸಚಿವರ, ಅಧಿಕಾರಿಗಳ ಸತತ ಗೈರು; ಸಿಟ್ಟುಗೊಂಡ ಸಭಾಪತಿ ಬಸವರಾಜ್ ಹೊರಟ್ಟಿ

ವಿಧಾನಪರಿಷತ್ತಿನಲ್ಲಿ ನಡೆದ ಕಲಾಪ ವೇಳೆ ಸಚಿವರು ಮತ್ತು ಅಧಿಕಾರಿಗಳ ಗೈರು ಕಂಡುಬಂದು ...

ಬೆಂಗಳೂರು: ವಿಧಾನಪರಿಷತ್ತಿನಲ್ಲಿ ನಡೆದ ಕಲಾಪ ವೇಳೆ ಸಚಿವರು ಮತ್ತು ಅಧಿಕಾರಿಗಳ ಗೈರು ಕಂಡುಬಂದು ಅಸಮಾಧಾನ ಹೊರಹಾಕಿದ ಸಭಾಪತಿ ಬಸವರಾಜ್ ಹೊರಟ್ಟಿ, ಕಲಾಪಕ್ಕೆ ಬಾರದವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ ಪ್ರಸಂಗ ನಿನ್ನೆ ನಡೆಯಿತು.

ಸರ್ಕಾರದ ಅಧಿಕಾರಿಗಳು ಸದನದ ಕಲಾಪಕ್ಕೆ ಉಚಿತವಾಗಿ ಬರುವುದಿಲ್ಲ. ಅವರಿಗೆ ಹಣ ಕೊಡಲಾಗುತ್ತದೆ. ಆದರೂ ಕಲಾಪದ ಸಂದರ್ಭದಲ್ಲಿ ಬಾರದಿರುವುದು ಖಂಡನೀಯ. ಈ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಬಳಿ ಮಾತನಾಡಿ ಅಧಿಕಾರಿಗಳಿಗೆ ಕಠಿಣ ಎಚ್ಚರಿಕೆ ನೀಡಬೇಕೆಂದು ಹೇಳುತ್ತೇನೆ. ಕಳೆದ ಶುಕ್ರವಾರ ಕೂಡ ಸಭಾಪತಿ ಹೊರಟ್ಟಿಯವರು ಗೈರಾಗಿರುವ ಸಚಿವರು ಮತ್ತು ಅಧಿಕಾರಿಗಳ ವಿರುದ್ಧ ಅಸಮಾಧಾನ ಹೊರಹಾಕಿದ್ದರು.

ಕಲಾಪಕ್ಕೆ ಬಾರದಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ. ತಾವು ಏನು ಬೇಕಾದರೂ ಮಾಡಬಹುದು ಎಂದು ಅಧಿಕಾರಿಗಳು ಭಾವಿಸಿದರೆ ನಾವು ಕಲಾಪ ಏಕೆ ನಡೆಸಬೇಕು ಎಂದು ಹೊರಟ್ಟಿ ಪ್ರಶ್ನಿಸಿದರು.

ನಿನ್ನೆ ಬೆಳಗಿನ ಕಲಾಪದಲ್ಲಿ ಹಲವು ಸಚಿವರು ಸದನದಲ್ಲಿ ಹಾಜರಿದ್ದು ಪ್ರಶ್ನೆಗಳಿಗೆ ಉತ್ತರಿಸಬೇಕಾಗಿತ್ತು. ಡಾ ಜಿ ಪರಮೇಶ್ವರ್, ಜಿ ಟಿ ದೇವೇಗೌಡ, ಪ್ರಿಯಾಂಕ್ ಖರ್ಗೆ, ಸಾ ರಾ ಮಹೇಶ್, ಎನ್ ಎಚ್ ಶಿವಶಂಕರ ರೆಡ್ಡಿ ಮತ್ತು ಸಿ ಎಸ್ ಪುಟ್ಟರಾಜು ಇವರಲ್ಲಿ ಮೂವರು ಮಾತ್ರ ಬೆಳಗಿನ ಕಲಾಪದ ವೇಳೆ ಹಾಜರಿದ್ದರು.

ಬೆಂಗಳೂರು ಮೆಟ್ರೊ ರೈಲು ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಜಯ್ ಸೇಥ್, ಜಲಸಂಪನ್ಮೂಲ ಇಲಾಖೆಯ ಬಿ ಜಿ ಗುರುಪಾದಸ್ವಾಮಿ, ಸಾರಿಗೆ ಇಲಾಖೆಯ ಬಿ ಬಸವರಾಜು, ಕಾನೂನು ಇಲಾಖೆಯ ಎನ್ ಸಿ ಶ್ರೀನಿವಾಸ್ ಸದನದಲ್ಲಿ ಹಾಜರಿರಬೇಕಾಗಿದ್ದ ಅಧಿಕಾರಿಗಳಾಗಿದ್ದರು. ಸಭಾಪತಿಗಳ ಎಚ್ಚರಿಕೆ ನಂತರ ಮುಖ್ಯ ಕಾರ್ಯದರ್ಶಿಗಳು ಸದನದ ಕಲಾಪದ ವೇಳೆ ಕೆಲ ಹೊತ್ತು ಹಾಜರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT