ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ 
ರಾಜಕೀಯ

ಕುಮಾರಸ್ವಾಮಿಯವರು 'ಯೂ ಟರ್ನ್' ಮುಖ್ಯಮಂತ್ರಿ: ಬಿಜೆಪಿ ಲೇವಡಿ

ಐಎಎಸ್ ಅಧಿಕಾರಿ ಡಿ ಕೆ ರವಿ ಅವರ ನಿಗೂಢ ಸಾವು ಮತ್ತು ಡಿವೈಎಸ್ಪಿ ಎಂ ಕೆ ಗಣಪತಿ ಆತ್ಮಹತ್ಯೆ ...

ಬೆಂಗಳೂರು: ಐಎಎಸ್ ಅಧಿಕಾರಿ ಡಿ ಕೆ ರವಿ ಅವರ ನಿಗೂಢ ಸಾವು ಮತ್ತು ಡಿವೈಎಸ್ಪಿ ಎಂ ಕೆ ಗಣಪತಿ ಆತ್ಮಹತ್ಯೆ ಪ್ರಕರಣಗಳಲ್ಲಿ ಸಚಿವ ಕೆ ಜೆ ಜಾರ್ಜ್ ಅವರ ಪರವಹಿಸಿ ನಿನ್ನೆ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ವಿಧಾನಸಭೆಯಲ್ಲಿ ಮಾತನಾಡಿದ್ದು ಪ್ರತಿಪಕ್ಷ ಬಿಜೆಪಿಯ ತೀವ್ರ ಟೀಕೆಗೆ ಗುರಿಯಾಗಿದ್ದಾರೆ.

ಈ ಕುರಿತು ತನ್ನ ಟ್ವಿಟ್ಟರ್ ಪೇಜ್ ನಲ್ಲಿ ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ, ಹೆಚ್ ಡಿ ಕುಮಾರಸ್ವಾಮಿಯವರು ಯೂಟರ್ನ್ ಮುಖ್ಯಮಂತ್ರಿ ಎಂದು ಸಾಬೀತಾಗಿದ್ದಾರೆ. ರಾಜ್ಯದಲ್ಲಿರುವ ಎಲ್ಲಾ ಯೂಟರ್ನ್ ಸೂಚನಾ ಫಲಕಗಳಿರುವ ಜಾಗಗಳಲ್ಲಿ ಕುಮಾರಸ್ವಾಮಿಯವರ ಫೋಟೋ ಹಾಕಬೇಕು ಎಂದು ಲೇವಡಿ ಮಾಡಿದೆ.

ನಾಲ್ಕು ವರ್ಷದ ಹಿಂದೆ ಡಿ ಕೆ ರವಿಯವರ ನಿಗೂಢ ಸಾವಿನ ಸಮಯದಲ್ಲಿ ಸಚಿವ ಕೆ ಜೆ ಜಾರ್ಜ್ ಅವರ ವಿರುದ್ಧ ಕೊಲೆ ಆರೋಪ ಕೇಳಿಬಂದಿದ್ದಾಗ  ಜಾರ್ಜ್ ರಂತಹ ಸಚಿವರು ಅಧಿಕಾರದಲ್ಲಿ ಮುಂದುವರಿಯಬಾರದು ಎಂದು ಹೇಳಿದ್ದರು.ಇಂದು ಮುಖ್ಯಮಂತ್ರಿಯಾಗಿರುವ ಕುಮಾರಸ್ವಾಮಿಯವರ ಸರ್ಕಾರದಲ್ಲಿ ಕೆ ಜೆ ಜಾರ್ಜ್ ಸಂಪುಟ ದರ್ಜೆ ಸಚಿವರಾಗಿರುವುದು ಮಾತ್ರವಲ್ಲದೆ ಅವರು ಅಮಾಯಕ ವ್ಯಕ್ತಿ ಎಂದು ಕುಮಾರಸ್ವಾಮಿಯವರು ಘೋಷಿಸಿದ್ದಾರೆ ಎಂದು ಬಿಜೆಪಿ ಟ್ವೀಟ್ ಮಾಡಿದೆ.

ಕುಮಾರಸ್ವಾಮಿಯವರ ಈ ಮಾತುಗಳಿಂದಲೇ ಅವರು ಎಂತಹ ವ್ಯಕ್ತಿ, ಎಷ್ಟು ಪ್ರಾಮಾಣಿಕರು, ಅವರು ನುಡಿದಂತೆ ನಡೆಯುವವರೇ ಎಂದು ತೋರಿಸುತ್ತದೆ ಎಂದು ಬಿಜೆಪಿ ಟೀಕಿಸಿದೆ.

ಸಚಿವ ಕೆ ಜೆ ಜಾರ್ಜ್ ಅವರನ್ನು ನಿನ್ನೆ ವಿಧಾನಸಭೆಯಲ್ಲಿ ಬಲವಾಗಿ ಸಮರ್ಥಿಸಿಕೊಂಡ ಕುಮಾರಸ್ವಾಮಿಯವರು ಅವರಿಗೆ ಕ್ಲೀನ್ ಚಿಟ್ ಕೊಟ್ಟಿದ್ದಾರೆ. ರಾಜ್ಯಪಾಲರ ವಂದನಾ ನಿರ್ಣಯದ ಪ್ರಸ್ತಾವದ ಮೇಲಿನ ಚರ್ಚೆಗೆ ಸರ್ಕಾರದ ಪರವಾಗಿ ಉತ್ತರಿಸುತ್ತಿದ್ದ ಸಂದರ್ಭದಲ್ಲಿ ಸಿಬಿಐ ನೀಡಿರುವ ವರದಿಯಲ್ಲಿ ಜಾರ್ಜ್ ಪಾತ್ರವಿಲ್ಲ. ಇನ್ನು ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣ ಕುರಿತಂತೆ ನನಗಿರುವ ಪ್ರಾಥಮಿಕ ಮಾಹಿತಿ ಪ್ರಕಾರ ಜಾರ್ಜ್ ಅವರ ಪಾತ್ರವಿಲ್ಲ ಎಂದು ಹೇಳಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT