ವಿಧಾನಸಭೆ 
ರಾಜಕೀಯ

ಬಜೆಟ್ ಅಧಿವೇಶನಕ್ಕೆ ತೆರೆ, ಮುಂದಿನ ಅಧಿವೇಶನ ಬೆಳಗಾವಿಗೆ ಶಿಫ್ಟ್

11 ದಿನಗಳ ಬಜೆಟ್ ಅಧಿವೇಶನಕ್ಕೆ ಶುಕ್ರವಾರ ತೆರೆ ಬಿದ್ದಿದ್ದು, ಮುಂದಿನ ಚಳಿಗಾಲದ ಅಧಿವೇಶನವನ್ನು ಬೆಳಗಾವಿಯಲ್ಲಿ...

ಬೆಂಗಳೂರು: 11 ದಿನಗಳ ಬಜೆಟ್ ಅಧಿವೇಶನಕ್ಕೆ ಶುಕ್ರವಾರ ತೆರೆ ಬಿದ್ದಿದ್ದು, ಮುಂದಿನ ಚಳಿಗಾಲದ ಅಧಿವೇಶನವನ್ನು ಬೆಳಗಾವಿಯಲ್ಲಿ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಅವರು ಜುಲೈ 5ರಂದು ಮಂಡಿಸಿದ್ದ 2018-19ನೇ ಸಾಲಿನ ಬಜೆಟ್ ಗೆ ಅಂಗೀಕಾರ, ರೈತರ ಸಾಲ ಮನ್ನಾ ಮೊತ್ತವನ್ನು 40 ಸಾವಿರ ಕೋಟಿ ರುಪಾಯಿಗೆ ಏರಿಕೆ ಸೇರಿದಂತೆ ಹಲವು ಪ್ರಮುಖ ನಿರ್ಧಾರಗಳನ್ನು ಅಧಿವೇಶನದಲ್ಲಿ ತೆಗೆದುಕೊಳ್ಳಲಾಗಿದೆ.
ನಿನ್ನೆ ಬಿಜೆಪಿ ಸಭಾತ್ಯಾಗದ ಮಧ್ಯೆಯೇ ಕರ್ನಾಟಕ ಧನವಿನಿಯೋಗ ವಿಧೇಯಕ, ಮೋಟಾರು ವಾಹನಗಳ ತೆರಿಗೆ ವಿಧೇಯಕ, ಕರ್ನಾಟಕ ಮೌಲ್ಯವರ್ಧಿತ ತೆರಿಗೆ ವಿಧೇಯಕ ಹಾಗೂ ಕರ್ನಾಟಕ ವಿದ್ಯುಚ್ಛಕ್ತಿ ವಿಧೇಯಕಗಳಿಗೆ ವಿಧಾನಸಭೆ ಅಂಗೀಕಾರ ನೀಡಿತ್ತು.
ಸ್ಪೀಕರ್ ರಮೇಶ್ ಕುಮಾರ್ ಅವರು ಇಂದು ವಿಧಾನಸಭೆ ಕಾಲಪವನ್ನು ಅನಿರ್ಧಿಷ್ಠಾವಧಿಗೆ ಮುಂದೂಡಿದ್ದು, ಮುಂದಿನ ಅಧಿವೇಶನ ನವೆಂಬರ್ ನಲ್ಲಿ ಬೆಳಗಾವಿಯಲ್ಲಿ ನಡೆಯಲಿದೆ.
ವಿಧಾನ ಪರಿಷತ್ ಕಲಾಪಕ್ಕೆ ನಿನ್ನೆಯೇ ತೆರೆ ಬಿದ್ದಿದ್ದು, ಮುಂದಿನ ತಿಂಗಳು ನಿವೃತ್ತಿ ಹೊಂದಲಿರುವ ಬಿಜೆಪಿಯ ಕೆ ಬಿ ಶಾಣಪ್ಪ ಮತ್ತು ತಾರಾ ಅನುರಾಧ ಅವರಿಗೆ ಆತ್ಮೀಯವಾಗಿ ಬಿಳ್ಕೋಡಲಾಯಿತು.
ಪರಿಷತ್ ಸಭಾನಾಯಕಿ ಜಯಮಾಲಾ ಹಾಗೂ ಪ್ರತಿಪಕ್ಷ ನಾಯಕ ಕೋಟಾ ಶ್ರೀನಿವಾಸ್ ಪೂಜಾರಿ ಅವರು, ಕೆಬಿ ಶಾಣಪ್ಪ ಮತ್ತು ತಾರಾ ಅನುರಾಧ ಅವರು ಮಾದರಿ ಪರಿಷತ್ ಸದಸ್ಯರಾಗಿದ್ದರು ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT