ಸಂಗ್ರಹ ಚಿತ್ರ 
ರಾಜಕೀಯ

ಸಿಎಂ ಕುಮಾರಸ್ವಾಮಿ ಅತ್ಯುತ್ತಮ ನಟ, ಜನರನ್ನು ಮೂರ್ಖರನ್ನಾಗಿಸುತ್ತಿದ್ದಾರೆ: ಬಿಜೆಪಿ

ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಒಬ್ಬ ಅತ್ಯುತ್ತಮ ನಟರಾಗಿದ್ದು, ತಮ್ಮ ಅಪರೂಪದ ಕೌಶಲ್ಯಗಳಿಂದ ಜನರನ್ನು ಮೂರ್ಖರನ್ನಾಗಿಸುತ್ತಲೇ ಇರುತ್ತಾರೆಂದು ರಾಜ್ಯ ಬಿಜೆಪಿ ವ್ಯಂಗ್ಯವಾಡಿದೆ...

ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಒಬ್ಬ ಅತ್ಯುತ್ತಮ ನಟರಾಗಿದ್ದು, ತಮ್ಮ ಅಪರೂಪದ ಕೌಶಲ್ಯಗಳಿಂದ ಜನರನ್ನು ಮೂರ್ಖರನ್ನಾಗಿಸುತ್ತಲೇ ಇರುತ್ತಾರೆಂದು ರಾಜ್ಯ ಬಿಜೆಪಿ ವ್ಯಂಗ್ಯವಾಡಿದೆ. 
ಜೆಡಿಎಸ್ ಕಾರ್ಯಕ್ರಮವೊಂದರಲ್ಲಿ ಕುಮಾರಸ್ವಾಮಿಯವರು ಭಾವೋದ್ವೇಗದಿಂದ ಮಾತನಾಡಿರುವ ಹಿನ್ನಲೆಯಲ್ಲಿ ಟ್ವಿಟರ್ ನಲ್ಲಿ ಬಿಜೆಪಿ ವ್ಯಂಗ್ಯವಾಡಿದೆ. 
ನಮ್ಮ ದೇಶ ಅನೇಕ ಪ್ರತಿಭಾವಂತ ನಟರನ್ನು ಕೊಟ್ಟಿದೆ. ಆ ನಟರು ತಮ್ಮ ಅದ್ಭುತ ನಟನೆಯಿಂದ ಪ್ರೇಕ್ಷಕರನ್ನು ವಿಸ್ಮಯರನ್ನಾಗಿ ಮಾಡಿದ್ದಾರೆ. ಇಲ್ಲಿ ಕುಮಾರಸ್ವಾಮಿ ಅವರು ಮತ್ತೊಬ್ಬ ಮೇರುನಟರಾಗಿದ್ದು, ಸತತವಾಗಿ ಜನಸಾಮಾನ್ಯರನ್ನು ಮೂರ್ಖರನ್ನಾಗಿಸುತ್ತಲೇ ಇದ್ದಾರೆಂದು ಟ್ವಿಟರ್ ನಲ್ಲಿ ತಿಳಿಸಿದೆ. 
ಜೆಪಿ ಭವನದಲ್ಲಿರುವ ಜೆಡಿಎಸ್ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪಕ್ಷದ ನೂತನ ಸಚಿವರು ಮತ್ತು ಶಾಸಕರ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಕುಮಾರಸ್ವಾಮಿಯವರು ತೀವ್ರ ಭಾವೋದ್ವೇಗಕ್ಕೆ ಒಳಗಾಗಿದ್ದರು.
ರಾಜ್ಯ ಸಮ್ಮಿಶ್ರ ಸರ್ಕಾರ ಮುಖ್ಯಮಂತ್ರಿಯಾಗಿರುವುದಕ್ಕೆ ಕಾರ್ಯಕರ್ತರಿಗೆ ಸಂತೋಷವಾಗಿದೆ. ಆದರೆ, ನಾನು ಸಂತೋಷದಲ್ಲಿಲ್ಲ. ನೋವಿನ ವಿಷ ನುಂಗುತ್ತಿರುವ ನಾನು ವಿಷಕಂಠನಾಗಿದ್ದು, ನಿಮಗೆ ಅಮೃತ ನೀಡುವ ಪ್ರಯತ್ನಗಳನ್ನು ಮಾಡುತ್ತಿದ್ದೇನೆಂದು ಕುಮಾರಸ್ವಾಮಿಯವರು ಹೇಳಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT