ದಿನೇಶ್ ಗುಂಡೂರಾವ್ 
ರಾಜಕೀಯ

ಸಿಎಂ ಕುಮಾರಸ್ವಾಮಿಯನ್ನು ಸಮರ್ಥಿಸಿಕೊಳ್ಳುವಂತೆ ಪಕ್ಷದ ವಕ್ತಾರರಿಗೆ ಕಾಂಗ್ರೆಸ್ ಸೂಚನೆ

ಸಿಎಂ ಕಣ್ಣೀರಧಾರೆಗೆ ಕರಗಿದ ಕಾಂಗ್ರೆಸ್, ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಭಾವನಾತ್ಮಕ ವ್ಯಕ್ತಿಯಾಗಿದ್ದು....

ಬೆಂಗಳೂರು: ಸಿಎಂ ಕಣ್ಣೀರಧಾರೆಗೆ ಕರಗಿದ ಕಾಂಗ್ರೆಸ್, ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಭಾವನಾತ್ಮಕ ವ್ಯಕ್ತಿಯಾಗಿದ್ದು, ಅವರನ್ನು ಸಮರ್ಥಿಸಿಕೊಳ್ಳುವಂತೆ ತನ್ನ ವಕ್ತಾರರಿಗೆ ಮಂಗಳವಾರ ಸೂಚಿಸಿದೆ.
ಸಮ್ಮಿಶ್ರ ಸರ್ಕಾರದಲ್ಲಿ ಅವರು ನಮ್ಮ ಮಿತ್ರರಾಗಿದ್ದು, ಮುಖ್ಯಮಂತ್ರಿಗಳನ್ನು ಮತ್ತು ಸರ್ಕಾರವನ್ನು ಸಮರ್ಥಿಸಿಕೊಳ್ಳುವಂತೆ ನಮ್ಮ ಪಕ್ಷದ ವಕ್ತಾರರಿಗೆ ಸೂಚಿಸಲಾಗಿದೆ. ಕೆಲ ವಿಚಾರಗಳನ್ನು ಜೆಡಿಎಸ್ ವಕ್ತಾರರಿಗೆ ಮಾತ್ರ ಬಿಡಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ವಕ್ತಾರರು ಪಿಟಿಐಗೆ ತಿಳಿಸಿದ್ದಾರೆ.
ಈ ಸಂಬಂಧ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಇಂದು ವಕ್ತಾರರ ಸಭೆ ನಡೆಸಿದ್ದು, ಸಭೆಯಲ್ಲಿ ಸಮ್ಮಿಶ್ರ ಸರ್ಕಾರವನ್ನು ಮತ್ತು ಮಿತ್ರ ಪಕ್ಷ ಜೆಡಿಎಸ್ ಅನ್ನು ಸಮರ್ಥಿಸಿಕೊಳ್ಳುವಂತೆ ಸೂಚಿಸಿರುವುದಾಗಿ ಕಾಂಗ್ರೆಸ್ ಉನ್ನತ ಮೂಲಗಳು ತಿಳಿಸಿವೆ.
ಇತ್ತೀಚಿಗೆ ಜೆಡಿಎಸ್ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪಕ್ಷದ ನೂತನ ಸಚಿವರು ಮತ್ತು ಶಾಸಕರ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಕುಮಾರಸ್ವಾಮಿ ಅವರು, ತೀವ್ರ ಭಾವೋದ್ವೇಗಕ್ಕೆ ಒಳಗಾಗಿ ಕಣ್ಣೀರಿಟ್ಟಿದ್ದರು. ಅಲ್ಲದೆ ಮುಖ್ಯಮಂತ್ರಿ ಹುದ್ದೆಯಲ್ಲಿ ನಾನು ಸಂತೋಷವಾಗಿಲ್ಲ. ನಾನು ವಿಷಕಂಠ ಎಂದೆಲ್ಲಾ ಹೇಳಿದ್ದರು. ಇದು ಪ್ರತಿಪಕ್ಷ ಕಾಂಗ್ರೆಸ್ ತೀವ್ರ ಇರಿಸುಮುರಿಸು ಉಂಟು ಮಾಡಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ಮನೆ ಮುಂದೆ ನಿಲ್ಲಿಸೋ ವಾಹನಗಳಿಗೆ ಪಾರ್ಕಿಂಗ್ ಶುಲ್ಕಕ್ಕೆ ರಾಮಲಿಂಗಾರೆಡ್ಡಿ ತೀವ್ರ ಆಕ್ಷೇಪ; CM ಡಿಕೆಶಿಗೆ ಪತ್ರ

'30 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ,ಇನ್ನು ಸಾಧ್ಯವಿಲ್ಲ': ನಿವೃತ್ತಿಯ ಸುಳಿವು ನೀಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ; ಹೊಸ ಪೀಳಿಗೆಗೆ ದಾರಿ ಮಾಡಿಕೊಡುವ ಇಂಗಿತ!

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!