ದಿನೇಶ್ ಗುಂಡೂರಾವ್ 
ರಾಜಕೀಯ

ಸಿಎಂ ಕುಮಾರಸ್ವಾಮಿಯನ್ನು ಸಮರ್ಥಿಸಿಕೊಳ್ಳುವಂತೆ ಪಕ್ಷದ ವಕ್ತಾರರಿಗೆ ಕಾಂಗ್ರೆಸ್ ಸೂಚನೆ

ಸಿಎಂ ಕಣ್ಣೀರಧಾರೆಗೆ ಕರಗಿದ ಕಾಂಗ್ರೆಸ್, ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಭಾವನಾತ್ಮಕ ವ್ಯಕ್ತಿಯಾಗಿದ್ದು....

ಬೆಂಗಳೂರು: ಸಿಎಂ ಕಣ್ಣೀರಧಾರೆಗೆ ಕರಗಿದ ಕಾಂಗ್ರೆಸ್, ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಭಾವನಾತ್ಮಕ ವ್ಯಕ್ತಿಯಾಗಿದ್ದು, ಅವರನ್ನು ಸಮರ್ಥಿಸಿಕೊಳ್ಳುವಂತೆ ತನ್ನ ವಕ್ತಾರರಿಗೆ ಮಂಗಳವಾರ ಸೂಚಿಸಿದೆ.
ಸಮ್ಮಿಶ್ರ ಸರ್ಕಾರದಲ್ಲಿ ಅವರು ನಮ್ಮ ಮಿತ್ರರಾಗಿದ್ದು, ಮುಖ್ಯಮಂತ್ರಿಗಳನ್ನು ಮತ್ತು ಸರ್ಕಾರವನ್ನು ಸಮರ್ಥಿಸಿಕೊಳ್ಳುವಂತೆ ನಮ್ಮ ಪಕ್ಷದ ವಕ್ತಾರರಿಗೆ ಸೂಚಿಸಲಾಗಿದೆ. ಕೆಲ ವಿಚಾರಗಳನ್ನು ಜೆಡಿಎಸ್ ವಕ್ತಾರರಿಗೆ ಮಾತ್ರ ಬಿಡಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ವಕ್ತಾರರು ಪಿಟಿಐಗೆ ತಿಳಿಸಿದ್ದಾರೆ.
ಈ ಸಂಬಂಧ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಇಂದು ವಕ್ತಾರರ ಸಭೆ ನಡೆಸಿದ್ದು, ಸಭೆಯಲ್ಲಿ ಸಮ್ಮಿಶ್ರ ಸರ್ಕಾರವನ್ನು ಮತ್ತು ಮಿತ್ರ ಪಕ್ಷ ಜೆಡಿಎಸ್ ಅನ್ನು ಸಮರ್ಥಿಸಿಕೊಳ್ಳುವಂತೆ ಸೂಚಿಸಿರುವುದಾಗಿ ಕಾಂಗ್ರೆಸ್ ಉನ್ನತ ಮೂಲಗಳು ತಿಳಿಸಿವೆ.
ಇತ್ತೀಚಿಗೆ ಜೆಡಿಎಸ್ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪಕ್ಷದ ನೂತನ ಸಚಿವರು ಮತ್ತು ಶಾಸಕರ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಕುಮಾರಸ್ವಾಮಿ ಅವರು, ತೀವ್ರ ಭಾವೋದ್ವೇಗಕ್ಕೆ ಒಳಗಾಗಿ ಕಣ್ಣೀರಿಟ್ಟಿದ್ದರು. ಅಲ್ಲದೆ ಮುಖ್ಯಮಂತ್ರಿ ಹುದ್ದೆಯಲ್ಲಿ ನಾನು ಸಂತೋಷವಾಗಿಲ್ಲ. ನಾನು ವಿಷಕಂಠ ಎಂದೆಲ್ಲಾ ಹೇಳಿದ್ದರು. ಇದು ಪ್ರತಿಪಕ್ಷ ಕಾಂಗ್ರೆಸ್ ತೀವ್ರ ಇರಿಸುಮುರಿಸು ಉಂಟು ಮಾಡಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಧಮ್ ಇದ್ರೆ ನನ್ನ ಕೊಲ್ಲಿ.. ಕನಿಷ್ಠ 1 ಸಾವಿರ ಕ್ಷಿಪಣಿಗಳು ಲೋಡ್ ಆಗಿ ನಿಂತಿವೆ': ಇರಾನ್ ಗೆ Donald Trump ಎಚ್ಚರಿಕೆ

ಭಾರತ–ನ್ಯೂಜಿಲ್ಯಾಂಡ್ ಸಂಬಂಧ ಕಾರ್ಯತಂತ್ರ ಪಾಲುದಾರಿಕೆಗೆ ಉನ್ನತಿ; 5 ವರ್ಷಗಳಲ್ಲಿ 35,000 ಕೋಟಿ ರೂ ವ್ಯಾಪಾರದ ಗುರಿ; Video

'ಮಟನ್ ಹಾಕ್ತೀವಿ ಅಂತ ಹೇಳಿ ಚಿಕನ್ ಕೊಟ್ರು': ರಣಾಂಗಣವಾಯ್ತು 'ನಿಕಾಹ್ ಸಮಾರಂಭ', 12 ಮಂದಿಗೆ ಗಾಯ, Video

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಬೆಂಗಳೂರು: ತಾಯಿ, ಅಜ್ಜಿ, ಮಾವನನ್ನು ಕೊಂದು ಆರೋಪಿ ಆತ್ಮಹತ್ಯೆ!