ಎಚ್.ಡಿ ಕುಮಾರಸ್ವಾಮಿ 
ರಾಜಕೀಯ

ನನಗೆ ನೋವಾದಾಗ ತುಂಬಾ ಭಾವುಕನಾಗುತ್ತೇನೆ: ಸಿಎಂ ಕುಮಾರ ಸ್ವಾಮಿ

ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ನಾನು ಕಠಿಣನಾಗಿರುತ್ತೇನೆ ಹಾಗೆಯೇ ನೋವಾದಾಗ ತುಂಬಾ ಭಾವುಕನಾಗುತ್ತೇನೆ ಎಂದು ಸಿಎಂ ಎಚ್.ಡಿ ...

ಬೆಂಗಳೂರು: ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ನಾನು ಕಠಿಣನಾಗಿರುತ್ತೇನೆ ಹಾಗೆಯೇ ನೋವಾದಾಗ ತುಂಬಾ ಭಾವುಕನಾಗುತ್ತೇನೆ ಎಂದು ಸಿಎಂ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.
ದೆಹಲಿಯಲ್ಲಿ ಮಾತನಾಡಿದ ಸಿಎಂ, ಇದು ನನ್ನ ಸ್ವಾಭಾವಿಕ ವರ್ತನೆ, ಜನರ ಮುಂದೆ ಬಹಿರಂಗವಾಗಿ ನನ್ನ ನೋವನ್ನು ತೋಡಿಕೊಳ್ಳುತ್ತೇನೆ, ನನಗೆ  ಅದೊಂದು ನೈಸರ್ಗಿಕ ಕ್ರಿಯೆ, ಅದಕ್ಕೆ ಯಾವುದೇ ಬಣ್ಣ ಇರುವುದಿಲ್ಲ, ನನ್ನ ನಡವಳಿಕೆಯಂತೆ ನನ್ನ ಕಣ್ಣೀರು ಕೂಡ ಪಾರದರ್ಶಕವಾಗಿರುತ್ತದೆ.
ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಜೆಡಿಎಸ್ ಕಾರ್ಯಕ್ರಮದಲ್ಲಿ ಮಾತನಾಡುವಾದಗ ಕುಮಾರ ಸ್ವಾಮಿ ಭಾವುಕರಾಗಿ ಕಣ್ಣೀರು ಹಾಕಿದ್ದರು, ನನ್ನ ನೋವನ್ನು ಜನರ ಜೊತೆ ಹಂಚಿಕೊಂಡಿದ್ದೇನೆ, ನನ್ನ ಕಣ್ಣೀರು ಸತ್ಯವಾದದ್ದು, ಇದಕ್ಕೆ ವಿಭಿನ್ನ ಅರ್ಥಕೊಡುವ ಅಗತ್ಯವಿಲ್ಲ ಎಂದು ಕುಮಾರ ಸ್ವಾಮಿ ತಿಳಿಸಿದ್ದಾರೆ.
ಮುಖ್ಯಮಂತ್ರಿಯಾಗಿ ನಾನು ರೈತರ ಸಾಲ ಮನ್ನಾ ಮಾಡಲು ತುಂಬಾ ಶ್ರಮಿಸುತ್ತಿದ್ದೇನೆ, ನಾನು ಪ್ರಯತ್ನ ಪಡುತ್ತಿದ್ದರೂ ಜನ ನನ್ನನ್ನು ಪ್ರೋತ್ಸಾಹಿಸುತ್ತಿಲ್ಲ,ಹೀಗಾಗಿ ನಾನು ನೋವು ವ್ಯಕ್ತ ಪಡಿಸಿದೆ ಎಂದು ತಿಳಿಸಿದ್ದಾರೆ.
ಸದ್ಯ ದೆಹಲಿಯಲ್ಲಿರುವ ಸಿಎಂ ಕುಮಾರ ಸ್ವಾಮಿ ಕೇಂದ್ರ ಸಚಿವರನ್ನು ಭೇಟಿ ಮಾಡಲಿದ್ದಾರೆ, ನಿತಿನ್ ಗಡ್ಕರಿ, ನಿರ್ಮಲಾ ಸೀತಾರಾಮನ್ ಹಾಗೂ  ರಾಜ್ಯದ ಹಲವು ಸಂಸದರನ್ನು ಸಿಎಂ ಭೇಟಿಯಾಗಲಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT