ಎಚ್ ಡಿ ರೇವಣ್ಣ 
ರಾಜಕೀಯ

ಘನತೆ, ಗೌರವದಿಂದ ವರದಿ ಮಾಡಿ: ಮಾಧ್ಯಮಗಳ ವಿರುದ್ಧ ರೇವಣ್ಣ ಕಿಡಿ

ಟಿವಿ ಮಾಧ್ಯಮಗಳು ಘನತೆ, ಗೌರವ ಕಾಪಾಡಿಕೊಂಡು ವರದಿಗಳನ್ನು ಮಾಡಬೇಕು ಎಂದು ಲೋಕೋಪಯೋಗಿ....

ಬೆಂಗಳೂರು: ಟಿವಿ ಮಾಧ್ಯಮಗಳು ಘನತೆ, ಗೌರವ ಕಾಪಾಡಿಕೊಂಡು ವರದಿಗಳನ್ನು ಮಾಡಬೇಕು ಎಂದು ಲೋಕೋಪಯೋಗಿ ಸಚಿವ ಎಚ್​ ಡಿ ರೇವಣ್ಣ ಅವರು ಸೋಮವಾರ ಮಾಧ್ಯಮಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇಂದು ನಗರದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ರೇವಣ್ಣ, ನಾನು ಬೇರೆ ಇಲಾಖೆಗಳಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ಹಸ್ತಕ್ಷೇಪ ಮಾಡುವುದಕ್ಕೆ ನನಗೆೇನೂ ಹುಚ್ಚು ಡಿದಿದೆಯೇ? ಎಂದು ಪ್ರಶ್ನಿಸಿದರು.
ಬೇರೆ ಇಲಾಖೆಗಳಲ್ಲಿ ನಾನೇಕೆ ಹಸ್ತಕ್ಷೇಪ ಮಾಡಲಿ, ನಾನ್ಯಾಕೆ ನನ್ನ ಇಲಾಖೆ ಬಿಟ್ಟು ಬೇರೆ ಕಡೆ ತಲೆ ಹಾಕಲಿ? ಮುಜರಾಯಿ ಇಲಾಖೆಯಲ್ಲಿ ಹಸ್ತಕ್ಷೇಪ ಮಾಡಿದ್ದೇನೆ, ಆ ಅಧಿಕಾರಿಗಳ ಜತೆ ಸಭೆ ಮಾಡಿದ್ದೇನೆ ಎಂದು ಸುಳ್ಳು ಸುದ್ದಿ ಪ್ರಸಾರ ಮಾಡಿದ್ದೀರಿ ಎಂದು ಮಾಧ್ಯಮದವರ ಮೇಲೆ ಹರಿಹಾಯ್ದಿದ್ದಾರೆ.
ಈ ಹಿಂದೆ ವಾರ ಪತ್ರಿಕೆಯೊಂದು ನನ್ನ ವಿರುದ್ಧ ನಿರಂತರವಾಗಿ ಸುದ್ದಿ ಮಾಡಿತ್ತು. ಆದರೂ ನಾನು ಐದು ಬಾರಿ ಎಂಎಲ್​ಎ ಆದೆ. ನೀವು ಏನೇ ಮಾಡಿದರೂ ನಾನು ಹೆದರುವುದಿಲ್ಲ. ಸುಳ್ಳು ಸುದ್ದಿ ಮಾಡಿ ನಿಮ್ಮ ಹೆಸರು ನೀವೇ ಹಾಳು ಮಾಡಿಕೊಳ್ಳುತ್ತೀರಿ. ನಿಮಗೆ ಹೆದರಿ ನಾನು ಮನೆಗೆ ಓಡಿ ಹೋಗುವುದಿಲ್ಲ. ನಿಮಗೆ ಬೇಕಾದ ಹಾಗೆ ಸುದ್ದಿ ಮಾಡಿಕೊಳ್ಳಿ ಎಂದು ಕಿಡಿಕಾರಿದರು.
ರೇವಣ್ಣ ಅವರು ಬೇರೆ ಇಲಾಖೆಯಲ್ಲಿ ಹಸ್ತಕ್ಷೇಪ ಮಾಡುತ್ತಾರೆ ಎಂಬ ಕೆಲ ಕಾಂಗ್ರೆಸ್​ ಮುಖಂಡರ ಆರೋಪಕ್ಕೆ ಸಂಬಂಧಿಸಿದಂತೆ ಪ್ರಶ್ನೆ ಮಾಡಿದ ಮಾಧ್ಯಮದವರ ವಿರುದ್ಧ ಸಚಿವರು ಈ ರೀತಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT