ಕಾಂಗ್ರೆಸ್ ಚಿಹ್ಹೆ 
ರಾಜಕೀಯ

ಪಕ್ಷ ವಿರೋಧಿ ಹೇಳಿಕೆ : ಮುಖಂಡರಿಂದ ವಿವರಣೆ ಬಯಸಿ ಕಾಂಗ್ರೆಸ್ ನೋಟಿಸ್

ಪಕ್ಷದ ನಾಯಕತ್ವದ ವಿರುದ್ದ ಹೇಳಿಕೆ ನೀಡಿದ್ದಕ್ಕಾಗಿ ವಿವರಣೆ ನೀಡುವಂತೆ ಇಬ್ಬರು ಹಿರಿಯ ನಾಯಕರಿಗೆ ಕೆಪಿಸಿಸಿ ನೋಟಿಸ್ ನೀಡಿದೆ. ವಾರದೊಳಗೆ ವಿವರಣೆ ನೀಡುವಂತೆ ಮಾಜಿ ಸ್ಪೀಕರ್ ಕೆ. ಬಿ. ಕೋಳಿವಾಡ್ ಮತ್ತು ಮಾಜಿ ಶಾಸಕ ಕೆ. ಎನ್. ರಾಜಣ್ಣ ಅವರಿಗೆ ಸೂಚಿಸಲಾಗಿದೆ.

ಬೆಂಗಳೂರು: 2018ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಅಧಿಕಾರ ಕಸಿದುಕೊಳ್ಳುವ ನಿಟ್ಟಿನಲ್ಲಿ ಕಾಂಗ್ರೆಸ್ ಮಹಾ ಮೈತ್ರಿಕೂಟ ರಚನೆಯತ್ತ ಗಮನ ಹರಿಸಿದ್ದು, ಜೆಡಿಎಸ್ -ಕಾಂಗ್ರೆಸ್ ಮೈತ್ರಿ ಸರ್ಕಾರದ ವಿರುದ್ಧ ಭಿನ್ನಾಭಿಪ್ರಾಯ ಸೃಷ್ಟಿಸುವಂತಹ ಹೇಳಿಕೆ ನೀಡದಂತೆ ಮುಖಂಡರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.

ಪಕ್ಷದ ನಾಯಕತ್ವದ ವಿರುದ್ದ ಹೇಳಿಕೆ ನೀಡಿದ್ದಕ್ಕಾಗಿ ವಿವರಣೆ ನೀಡುವಂತೆ ಇಬ್ಬರು ಹಿರಿಯ ನಾಯಕರಿಗೆ ಕೆಪಿಸಿಸಿ ನೋಟಿಸ್ ನೀಡಿದೆ. ವಾರದೊಳಗೆ ವಿವರಣೆ ನೀಡುವಂತೆ ಮಾಜಿ ಸ್ಪೀಕರ್ ಕೆ.ಬಿ. ಕೋಳಿವಾಡ್ ಮತ್ತು ಮಾಜಿ ಶಾಸಕ ಕೆ.ಎನ್. ರಾಜಣ್ಣ ಅವರಿಗೆ ಸೂಚಿಸಲಾಗಿದೆ.

ಕುಮಾರಸ್ವಾಮಿ ಸಾರ್ವಜನಿವಾಗಿ ಆಳಲು ಕಾಂಗ್ರೆಸ್ ನಾಯಕರು ಕಾರಣ ಎಂದು ಕೋಳಿವಾಡ್ ಹೇಳಿಕೆ ನೀಡಿದ್ದರು. ಈ ಮಧ್ಯೆ ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಸೀಟು ಹೊಂದಾಣಿಕೆಗೆ ಸಂಬಂಧಿಸಿದಂತೆ ರಾಜಣ್ಣ ಸಾರ್ವಜನಿಕವಾಗಿ ವಿರೋಧ ವ್ಯಕ್ತಪಡಿಸಿದ್ದರು.

ನಿಮ್ಮ ಹೇಳಿಕೆಗಳು ಪಕ್ಷಕ್ಕೆ ಮುಜುಗರ ಉಂಟುಮಾಡಿವೆ. ಇದು ಪಕ್ಷ ವಿರೋಧಿ ಚಟುವಟಿಕೆಯನ್ನು ತೋರಿಸುತ್ತದೆ. ಈ ವಿಷಯವನ್ನು ಗಂಭೀರವಾಗಿ ತೆಗೆದುಕೊಂಡಿರುವುದಾಗಿ ಕೋಳಿವಾಡ್ ಗೆ ನೀಡಿರುವ ನೋಟಿಸ್ ನಲ್ಲಿ ತಿಳಿಸಲಾಗಿದೆ.ವಾರದೊಳಗೆ ವಿವರಣೆ ನೀಡಬೇಕು, ಒಂದು ವೇಳೆ ನೀಡಲು ವಿಫಲವಾದ್ದಲ್ಲಿ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಹೇಳಲಾಗಿದೆ.

ನೋಟಿಸ್ ತಮ್ಮಗೆ ತಲುಪಿಲ್ಲ. ನೋಟಿಸ್ ನೋಡಿದ ನಂತರ ಪ್ರತಿಕ್ರಿಯೆ ನೀಡುತ್ತೇನೆ. ಪಕ್ಷದೊಳಗಿನ ಕೆಲ ನಾಯಕರ ವಿರುದ್ಧ ಮಾತನಾಡಿದ್ದೇನೆ ಹೊರತು, ಪಕ್ಷ ವಿರೋಧಿ ಹೇಳಿಕೆಯನ್ನು ನೀಡಿಲ್ಲ  ಎಂದು ಕೋಳಿವಾಡ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT