ಕಾಂಗ್ರೆಸ್ ಚಿಹ್ಹೆ 
ರಾಜಕೀಯ

ಪಕ್ಷ ವಿರೋಧಿ ಹೇಳಿಕೆ : ಮುಖಂಡರಿಂದ ವಿವರಣೆ ಬಯಸಿ ಕಾಂಗ್ರೆಸ್ ನೋಟಿಸ್

ಪಕ್ಷದ ನಾಯಕತ್ವದ ವಿರುದ್ದ ಹೇಳಿಕೆ ನೀಡಿದ್ದಕ್ಕಾಗಿ ವಿವರಣೆ ನೀಡುವಂತೆ ಇಬ್ಬರು ಹಿರಿಯ ನಾಯಕರಿಗೆ ಕೆಪಿಸಿಸಿ ನೋಟಿಸ್ ನೀಡಿದೆ. ವಾರದೊಳಗೆ ವಿವರಣೆ ನೀಡುವಂತೆ ಮಾಜಿ ಸ್ಪೀಕರ್ ಕೆ. ಬಿ. ಕೋಳಿವಾಡ್ ಮತ್ತು ಮಾಜಿ ಶಾಸಕ ಕೆ. ಎನ್. ರಾಜಣ್ಣ ಅವರಿಗೆ ಸೂಚಿಸಲಾಗಿದೆ.

ಬೆಂಗಳೂರು: 2018ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಅಧಿಕಾರ ಕಸಿದುಕೊಳ್ಳುವ ನಿಟ್ಟಿನಲ್ಲಿ ಕಾಂಗ್ರೆಸ್ ಮಹಾ ಮೈತ್ರಿಕೂಟ ರಚನೆಯತ್ತ ಗಮನ ಹರಿಸಿದ್ದು, ಜೆಡಿಎಸ್ -ಕಾಂಗ್ರೆಸ್ ಮೈತ್ರಿ ಸರ್ಕಾರದ ವಿರುದ್ಧ ಭಿನ್ನಾಭಿಪ್ರಾಯ ಸೃಷ್ಟಿಸುವಂತಹ ಹೇಳಿಕೆ ನೀಡದಂತೆ ಮುಖಂಡರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.

ಪಕ್ಷದ ನಾಯಕತ್ವದ ವಿರುದ್ದ ಹೇಳಿಕೆ ನೀಡಿದ್ದಕ್ಕಾಗಿ ವಿವರಣೆ ನೀಡುವಂತೆ ಇಬ್ಬರು ಹಿರಿಯ ನಾಯಕರಿಗೆ ಕೆಪಿಸಿಸಿ ನೋಟಿಸ್ ನೀಡಿದೆ. ವಾರದೊಳಗೆ ವಿವರಣೆ ನೀಡುವಂತೆ ಮಾಜಿ ಸ್ಪೀಕರ್ ಕೆ.ಬಿ. ಕೋಳಿವಾಡ್ ಮತ್ತು ಮಾಜಿ ಶಾಸಕ ಕೆ.ಎನ್. ರಾಜಣ್ಣ ಅವರಿಗೆ ಸೂಚಿಸಲಾಗಿದೆ.

ಕುಮಾರಸ್ವಾಮಿ ಸಾರ್ವಜನಿವಾಗಿ ಆಳಲು ಕಾಂಗ್ರೆಸ್ ನಾಯಕರು ಕಾರಣ ಎಂದು ಕೋಳಿವಾಡ್ ಹೇಳಿಕೆ ನೀಡಿದ್ದರು. ಈ ಮಧ್ಯೆ ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಸೀಟು ಹೊಂದಾಣಿಕೆಗೆ ಸಂಬಂಧಿಸಿದಂತೆ ರಾಜಣ್ಣ ಸಾರ್ವಜನಿಕವಾಗಿ ವಿರೋಧ ವ್ಯಕ್ತಪಡಿಸಿದ್ದರು.

ನಿಮ್ಮ ಹೇಳಿಕೆಗಳು ಪಕ್ಷಕ್ಕೆ ಮುಜುಗರ ಉಂಟುಮಾಡಿವೆ. ಇದು ಪಕ್ಷ ವಿರೋಧಿ ಚಟುವಟಿಕೆಯನ್ನು ತೋರಿಸುತ್ತದೆ. ಈ ವಿಷಯವನ್ನು ಗಂಭೀರವಾಗಿ ತೆಗೆದುಕೊಂಡಿರುವುದಾಗಿ ಕೋಳಿವಾಡ್ ಗೆ ನೀಡಿರುವ ನೋಟಿಸ್ ನಲ್ಲಿ ತಿಳಿಸಲಾಗಿದೆ.ವಾರದೊಳಗೆ ವಿವರಣೆ ನೀಡಬೇಕು, ಒಂದು ವೇಳೆ ನೀಡಲು ವಿಫಲವಾದ್ದಲ್ಲಿ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಹೇಳಲಾಗಿದೆ.

ನೋಟಿಸ್ ತಮ್ಮಗೆ ತಲುಪಿಲ್ಲ. ನೋಟಿಸ್ ನೋಡಿದ ನಂತರ ಪ್ರತಿಕ್ರಿಯೆ ನೀಡುತ್ತೇನೆ. ಪಕ್ಷದೊಳಗಿನ ಕೆಲ ನಾಯಕರ ವಿರುದ್ಧ ಮಾತನಾಡಿದ್ದೇನೆ ಹೊರತು, ಪಕ್ಷ ವಿರೋಧಿ ಹೇಳಿಕೆಯನ್ನು ನೀಡಿಲ್ಲ  ಎಂದು ಕೋಳಿವಾಡ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?