ಬಿಜೆಪಿಯ ಚಿಹ್ನೆ 
ರಾಜಕೀಯ

ಲೋಕಸಭಾ ಚುನಾವಣೆ: ಶೀಘ್ರದಲ್ಲಿಯೇ ಬಿಜೆಪಿ ಉಸ್ತುವಾರಿ ಕಾರ್ಯದರ್ಶಿಗಳ ನೇಮಕ

2019 ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್- ಜೆಡಿಎಸ್ ಮೈತ್ರಿಯನ್ನು ಸದೆಬಡಿಯುವ ನಿಟ್ಟಿನಲ್ಲಿ ಬಿಜೆಪಿ ಸಿದ್ಧತಾ ಕಾರ್ಯಗಳನ್ನು ಆರಂಭಿಸಿದ್ದು, ರಾಜ್ಯದ ಎಲ್ಲಾ ಲೋಕಸಭಾ ಕ್ಷೇತ್ರಗಳಲ್ಲೂ ಉಸ್ತುವಾರಿ ಕಾರ್ಯದರ್ಶಿಗಳನ್ನು ನೇಮಕ ಮಾಡುತ್ತಿದೆ.

ಬೆಂಗಳೂರು: 2019 ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್- ಜೆಡಿಎಸ್ ಮೈತ್ರಿಯನ್ನು ಸದೆಬಡಿಯುವ ನಿಟ್ಟಿನಲ್ಲಿ ಬಿಜೆಪಿ ಸಿದ್ಧತಾ ಕಾರ್ಯಗಳನ್ನು ಆರಂಭಿಸಿದ್ದು,  ರಾಜ್ಯದ ಎಲ್ಲಾ ಲೋಕಸಭಾ  ಕ್ಷೇತ್ರಗಳಲ್ಲೂ  ಉಸ್ತುವಾರಿ ಕಾರ್ಯದರ್ಶಿಗಳನ್ನು ನೇಮಕ ಮಾಡುತ್ತಿದೆ.

ಲೋಕಸಭಾ ಚುನಾವಣೆ ಸಿದ್ಧತೆಗಾಗಿ ಜುಲೈ 30 ರಿಂದ ಎಲ್ಲಾ ಲೋಕಸಭಾ ಕ್ಷೇತ್ರಗಳಿಗೆ ಉಸ್ತುವಾರಿ ಕಾರ್ಯದರ್ಶಿಗಳನ್ನು ನೇಮಕ ಮಾಡಲಾಗುವುದು,ಲೋಕಸಭಾ ಚುನಾವಣೆ  ಸಿದ್ಧತೆ ಅವರ ಜವಾಬ್ದಾರಿಯಾಗಿರುತ್ತದೆ. ನೇಮಕವಾದ ನಂತರ ಅವರು ಕಾರ್ಯಾರಂಭಿಸಬೇಕು ಎಂದು ಬಿಜೆಪಿಯ ಹಿರಿಯ ಮುಖಂಡರು ತಿಳಿಸಿದ್ದಾರೆ.

ಈ ನಾಯಕರು ಪಕ್ಷದ ಹೈಕಮಾಂಡ್  ನಿರ್ದೇಶನದಂತೆ   ಕ್ಷೇತ್ರದ ಕಾರ್ಯಕರ್ತರೊಂದಿಗೆ  ಸಮನ್ವಯ ಸಾಧಿಸಬೇಕು. ಕಾಂಗ್ರೆಸ್ , ಜೆಡಿಎಸ್ ಮೈತ್ರಿಯಾದರೂ  ಕಾಂಗ್ರೆಸ್ ವಿರೋಧಿ ಮತಗಳು ಚದುರುವುದಿಲ್ಲ. ಇದು ಪಕ್ಷಕ್ಕೆ ಲಾಭವಾಗಲಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

 ಪ್ರಧಾನಿ ನರೇಂದ್ರಮೋದಿ ಸಮಾವೇಶ ಮುಂದೂಡಿಕೆ.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರಮೋದಿ ಬೆಳಗಾವಿ ಜಿಲ್ಲೆಯ ಚಿಕ್ಕೊಡಿಯಲ್ಲಿ ಜುಲೈ 29 ರಂದು ನಡೆಸಲು ಉದ್ದೇಶಿಸಿದ್ದ ಮೋದಿ ಸಮಾವೇಶವನ್ನು ಮುಂದೂಡಲಾಗಿದೆ. ಶೀಘ್ರದಲ್ಲಿ ನೂತನ ದಿನಾಂಕವನ್ನು ನಿರ್ಧಾರಿಸಲಾಗುವುದು ಎಂದು ವಿಧಾನಪರಿಷತ್ ಸದಸ್ಯ ರವಿಕುಮಾರ್ ತಿಳಿಸಿದ್ದಾರೆ.

ರೈತರ ಸಂಪೂರ್ಣ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ಬಿಜೆಪಿ ರಾಮನಗರಿಂದ ಬೆಂಗಳೂರಿನವರೆಗೂ ಮೂರುದಿನಗಳ ಪಾದಯಾತ್ರೆ ಹಮ್ಮಿಕೊಂಡಿದೆ. ವಿಧಾನಪರಿಷತ್ ಸದಸ್ಯೆ ತೇಜಸ್ವಿನಿ ಗೌಡ, ಮಾಜಿ ಶಾಸಕ ಸಿ. ಪಿ. ಯೋಗೇಶ್ವರ್, ಮತ್ತಿತರ ಹಲವು ನಾಯಕರು ಈ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT