ಬಿಜೆಪಿಯ ಚಿಹ್ನೆ 
ರಾಜಕೀಯ

ಲೋಕಸಭಾ ಚುನಾವಣೆ: ಶೀಘ್ರದಲ್ಲಿಯೇ ಬಿಜೆಪಿ ಉಸ್ತುವಾರಿ ಕಾರ್ಯದರ್ಶಿಗಳ ನೇಮಕ

2019 ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್- ಜೆಡಿಎಸ್ ಮೈತ್ರಿಯನ್ನು ಸದೆಬಡಿಯುವ ನಿಟ್ಟಿನಲ್ಲಿ ಬಿಜೆಪಿ ಸಿದ್ಧತಾ ಕಾರ್ಯಗಳನ್ನು ಆರಂಭಿಸಿದ್ದು, ರಾಜ್ಯದ ಎಲ್ಲಾ ಲೋಕಸಭಾ ಕ್ಷೇತ್ರಗಳಲ್ಲೂ ಉಸ್ತುವಾರಿ ಕಾರ್ಯದರ್ಶಿಗಳನ್ನು ನೇಮಕ ಮಾಡುತ್ತಿದೆ.

ಬೆಂಗಳೂರು: 2019 ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್- ಜೆಡಿಎಸ್ ಮೈತ್ರಿಯನ್ನು ಸದೆಬಡಿಯುವ ನಿಟ್ಟಿನಲ್ಲಿ ಬಿಜೆಪಿ ಸಿದ್ಧತಾ ಕಾರ್ಯಗಳನ್ನು ಆರಂಭಿಸಿದ್ದು,  ರಾಜ್ಯದ ಎಲ್ಲಾ ಲೋಕಸಭಾ  ಕ್ಷೇತ್ರಗಳಲ್ಲೂ  ಉಸ್ತುವಾರಿ ಕಾರ್ಯದರ್ಶಿಗಳನ್ನು ನೇಮಕ ಮಾಡುತ್ತಿದೆ.

ಲೋಕಸಭಾ ಚುನಾವಣೆ ಸಿದ್ಧತೆಗಾಗಿ ಜುಲೈ 30 ರಿಂದ ಎಲ್ಲಾ ಲೋಕಸಭಾ ಕ್ಷೇತ್ರಗಳಿಗೆ ಉಸ್ತುವಾರಿ ಕಾರ್ಯದರ್ಶಿಗಳನ್ನು ನೇಮಕ ಮಾಡಲಾಗುವುದು,ಲೋಕಸಭಾ ಚುನಾವಣೆ  ಸಿದ್ಧತೆ ಅವರ ಜವಾಬ್ದಾರಿಯಾಗಿರುತ್ತದೆ. ನೇಮಕವಾದ ನಂತರ ಅವರು ಕಾರ್ಯಾರಂಭಿಸಬೇಕು ಎಂದು ಬಿಜೆಪಿಯ ಹಿರಿಯ ಮುಖಂಡರು ತಿಳಿಸಿದ್ದಾರೆ.

ಈ ನಾಯಕರು ಪಕ್ಷದ ಹೈಕಮಾಂಡ್  ನಿರ್ದೇಶನದಂತೆ   ಕ್ಷೇತ್ರದ ಕಾರ್ಯಕರ್ತರೊಂದಿಗೆ  ಸಮನ್ವಯ ಸಾಧಿಸಬೇಕು. ಕಾಂಗ್ರೆಸ್ , ಜೆಡಿಎಸ್ ಮೈತ್ರಿಯಾದರೂ  ಕಾಂಗ್ರೆಸ್ ವಿರೋಧಿ ಮತಗಳು ಚದುರುವುದಿಲ್ಲ. ಇದು ಪಕ್ಷಕ್ಕೆ ಲಾಭವಾಗಲಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

 ಪ್ರಧಾನಿ ನರೇಂದ್ರಮೋದಿ ಸಮಾವೇಶ ಮುಂದೂಡಿಕೆ.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರಮೋದಿ ಬೆಳಗಾವಿ ಜಿಲ್ಲೆಯ ಚಿಕ್ಕೊಡಿಯಲ್ಲಿ ಜುಲೈ 29 ರಂದು ನಡೆಸಲು ಉದ್ದೇಶಿಸಿದ್ದ ಮೋದಿ ಸಮಾವೇಶವನ್ನು ಮುಂದೂಡಲಾಗಿದೆ. ಶೀಘ್ರದಲ್ಲಿ ನೂತನ ದಿನಾಂಕವನ್ನು ನಿರ್ಧಾರಿಸಲಾಗುವುದು ಎಂದು ವಿಧಾನಪರಿಷತ್ ಸದಸ್ಯ ರವಿಕುಮಾರ್ ತಿಳಿಸಿದ್ದಾರೆ.

ರೈತರ ಸಂಪೂರ್ಣ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ಬಿಜೆಪಿ ರಾಮನಗರಿಂದ ಬೆಂಗಳೂರಿನವರೆಗೂ ಮೂರುದಿನಗಳ ಪಾದಯಾತ್ರೆ ಹಮ್ಮಿಕೊಂಡಿದೆ. ವಿಧಾನಪರಿಷತ್ ಸದಸ್ಯೆ ತೇಜಸ್ವಿನಿ ಗೌಡ, ಮಾಜಿ ಶಾಸಕ ಸಿ. ಪಿ. ಯೋಗೇಶ್ವರ್, ಮತ್ತಿತರ ಹಲವು ನಾಯಕರು ಈ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT