ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದು ಎರಡು ತಿಂಗಳ ನಂತರ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಮಂಗಳವಾರ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಮಾಡಿದ್ದಾರೆ.
ಖಾತೆ ಹಂಚಿಕೆ ಬಳಿಕ ಹಲವರು ಅಸಮಾಧಾನ ವ್ಯಕ್ತಪಡಿಸಿದ್ದರಿಂದ ಮತ್ತು ಸಚಿವ ಸ್ಥಾನ ಪಡೆದುಕೊಂಡ ಸಚಿವರಲ್ಲೂ ಹಲವರು ಗೊಂದಲ ಹೊಂದಿದ್ದರಿಂದ ಸಿಎಂ ಕುಮಾರಸ್ವಾಮಿ ಅವರು ಜಿಲ್ಲಾ ಉಸ್ತುವಾರಿ ಸಚಿವರ ನೇಮಕವನ್ನು ಮುಂದೂಡುತ್ತಾ ಬಂದಿದ್ದರು. ಇಂದು ಸಂಜೆ ಕೊನೆಗೂ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಮಾಡಿ, ಪಟ್ಟಿ ಬಿಡುಗಡೆ ಮಾಡಿದ್ದಾರೆ.
ದೋಸ್ತಿ ಸರ್ಕಾರದ ಜಿಲ್ಲಾ ಉಸ್ತುವಾರಿ ಸಚಿವರಗಳ ವಿವರ ಇಲ್ಲಿದೆ
ಡಾ. ಜಿ ಪರಮೇಶ್ವರ್ – ಬೆಂಗಳೂರು ನಗರ ಮತ್ತು ತುಮಕೂರು.
ಆರ್. ವಿ ದೇಶಪಾಂಡೆ – ಉತ್ತರ ಕನ್ನಡ ಮತ್ತು ಧಾರವಾಡ
ಡಿ.ಕೆ ಶಿವಕುಮಾರ್ – ರಾಮನಗರ ಮತ್ತು ಬಳ್ಳಾರಿ
ಕೆ.ಜೆ ಜಾರ್ಜ್ – ಚಿಕ್ಕಮಗಳೂರು
ರಮೇಶ್ ಜಾರಕೀಹೊಳಿ – ಬೆಳಗಾವಿ
ಶಿವಾನಂದ ಪಾಟೀಲ್ – ಬಾಗಲಕೋಟೆ
ಪ್ರಿಯಾಂಕ್ ಖರ್ಗೆ – ಕಲಬುರಗಿ
ರಾಜಶೇಖರ ಬ. ಪಾಟೀಲ್ – ಯಾದಗಿರಿ
ಎನ್.ಎಚ್ ಶಿವಶಂಕರರೆಡ್ಡಿ – ಚಿಕ್ಕಬಳ್ಳಾಪುರ
ಕೃಷ್ಣೇಭೈರೇಗೌಡ – ಬೆಂಗಳೂರು ಗ್ರಾಮಾಂತರ ಮತ್ತು ಕೋಲಾರ
ಯು.ಟಿ ಖಾದರ್ – ದಕ್ಷಿಣ ಕನ್ನಡ
ಸಿ. ಪುಟ್ಟರಂಗಶೆಟ್ಟಿ – ಚಾಮರಾಜನಗರ
ವೆಂಕಟರಾವ್ ನಾಡಗೌಡ – ರಾಯಚೂರು
ವಾಸು ಶ್ರೀನಿವಾಸ್ – ದಾವಣಗೆರೆ
ಸಿ.ಎಸ್ ಪುಟ್ಟರಾಜು – ಮಂಡ್ಯ
ಬಂಡೆಪ್ಪ ಕಾಶೆಂಪುರ್- ಬೀದರ್
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos