ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ 
ರಾಜಕೀಯ

ಡಿ. ಕೆ. ಶಿವಕುಮಾರ್, ರೇವಣ್ಣ ಇಬ್ಬರೂ ಇಂಧನ ಖಾತೆಗೆ ಪಟ್ಟು- ಮುಖ್ಯಮಂತ್ರಿ ಕುಮಾರಸ್ವಾಮಿ

ಇಂಧನ ಖಾತೆ ಸೇರಿದಂತೆ ಪ್ರಮುಖ ಖಾತೆಗಳನ್ನು ಪಡೆದುಕೊಳ್ಳುವಲ್ಲಿ ಜೆಡಿಎಸ್ ಯಶಸ್ವಿಯಾದ ಒಂದು ದಿನದ ನಂತರ ಕಾಂಗ್ರೆಸ್ ಹಿರಿಯ ನಾಯಕ ಡಿ. ಕೆ. ಶಿವಕುಮಾರ್ ಕೂಡಾ ಆ ಖಾತೆಗಾಗಿ ಪಟ್ಟು ಹಿಡಿದಿದ್ದಾರೆ.

ಬೆಂಗಳೂರು: ಇಂಧನ ಖಾತೆ ಸೇರಿದಂತೆ ಪ್ರಮುಖ ಖಾತೆಗಳನ್ನು  ಪಡೆದುಕೊಳ್ಳುವಲ್ಲಿ ಜೆಡಿಎಸ್  ಯಶಸ್ವಿಯಾದ  ಒಂದು ದಿನದ ನಂತರ  ಕಾಂಗ್ರೆಸ್ ಹಿರಿಯ ನಾಯಕ ಡಿ. ಕೆ. ಶಿವಕುಮಾರ್  ಕೂಡಾ ಆ ಖಾತೆಗಾಗಿ ಪಟ್ಟು ಹಿಡಿದಿದ್ದಾರೆ.

 ಜೆಡಿಎಸ್ ಪಕ್ಷದ ಹೆಚ್. ಡಿ. ರೇವಣ್ಣ ಈ ಹಿಂದೆ  ಇಂಧನ ಖಾತೆಯನ್ನ ನಿರ್ವಹಿಸಿದ್ದರು. ಅದಕ್ಕಾಗಿ ಆ ಖಾತೆ ಪಡೆಯಲು ಒತ್ತಾಯಿಸಿದ್ದರು. ಆದರೆ, ಕಾಂಗ್ರೆಸ್ ಮುಖಂಡ ಡಿ. ಕೆ. ಶಿವಕುಮಾರ್ ಕೂಡಾ ಆ ಖಾತೆಗಾಗಿ ಪಟ್ಟು ಹಿಡಿದಿರುವುದು ನಿಜ ಎಂದು ಮುಖ್ಯಮಂತ್ರಿ  ಹೆಚ್. ಡಿ. ಕುಮಾರಸ್ವಾಮಿ  ಸುದ್ದಿಗಾರರಿಗೆ ತಿಳಿಸಿದ್ದಾರೆ.

 ಆದಾಗ್ಯೂ, ಖಾತೆ ಹಂಚಿಕೆ ವಿಚಾರದಲ್ಲಿ ಜೆಡಿಎಸ್ ವರಿಷ್ಠ ಹೆಚ್ . ಡಿ. ದೇವೇಗೌಡರು ಮಧ್ಯ ಪ್ರವೇಶಿಸುವುದಿಲ್ಲ ಎಂದು  ಕುಮಾರಸ್ವಾಮಿ ಸ್ಪಷ್ಪಪಡಿಸಿದರು.

ಹಣಕಾಸು ಖಾತೆಯನ್ನೂ ತಾವೇ ಪಡೆದುಕೊಂಡಿರುವುದರಿಂದ  ಹಲವು ಜನಪರ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ನೆರವಾಗಲಿದೆ ಎಂದು ಕುಮಾರಸ್ವಾಮಿ, ಮೈತ್ರಿ ಸರ್ಕಾರದಲ್ಲಿ ಖಾತೆ ಹಂಚಿಕೆ ಸೇರಿದಂತೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಕಾಂಗ್ರೆಸ್  ನಾಯಕರ ಪಟ್ಟಿಯನ್ನು  ಜೆಡಿಎಸ್  ಒಪ್ಪಿಕೊಳ್ಳಲಿದೆ ಎಂದು ಹೇಳಿದರು.

ಹಣಕಾಸು , ಇಂಧನ ಖಾತೆ ಹಂಚಿಕೆ ನಡುವಿನ ಭಿನ್ನಾಭಿಪ್ರಾಯದಿಂದಾಗಿ ಸಂಪುಟ ರಚನೆ ಪ್ರಕ್ರಿಯೆ ವಿಳಂಬವಾಗುತ್ತಿದೆ ಎಂಬಂತಹ ಮಾಹಿತಿಗಳು ತಿಳಿದುಬಂದಿವೆ. ಕಾಂಗ್ರೆಸ್ ಹೈಕಮಾಂಡ್ ಮಧ್ಯಪ್ರವೇಶದ ನಂತರ ಈ ಎರಡು ಪ್ರಮುಖ ಖಾತೆಗಳನ್ನು ಜೆಡಿಎಸ್ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ.

ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ  ಇಂಧನ ಖಾತೆ ನಿರ್ವಹಿಸಿದ್ದ ಡಿ. ಕೆ. ಶಿವಕುಮಾರ್ , ಪಕ್ಷದ ನಿರ್ಧಾರದಿಂದ ಅಸಮಾಧಾನಗೊಂಡಿದ್ದಾರೆ.  ಗೃಹ ಖಾತೆಗೆ ಪ್ರಯತ್ನಿಸುತ್ತಿರುವುದಾಗಿ ಅವರು ಹೇಳಿದ್ದಾರೆ.

ಖಾತೆ ಹಂಚಿಕೆ ಸಂಬಂಧಿಸಿದಂತೆ   ಹೆಚ್. ಡಿ. ದೇವೇಗೌಡ ಅವರೊಂದಿಗೆ ಮಾತುಕತೆಗೆ ತಮ್ಮನ್ನು ಕರೆಯದಿರುವುದಕ್ಕೆ ಡಿ. ಕೆ. ಶಿವಕುಮಾರ್ ಸೇರಿದಂತೆ ಹಲವು ನಾಯಕರು ಅಸಮಾಧಾನಗೊಂಡಿದ್ದಾರೆ.
ಶುಕ್ರವಾರ ಎಐಸಿಸಿ  ರಾಜ್ಯ ಉಸ್ತುವಾರಿ ಕೆ. ಸಿ, ವೇಣುಗೋಪಾಲ್ ಹಾಗೂ  ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ದೇವೇಗೌಡರೊಂದಿಗೆ ಮಾತುಕತೆ ನಡೆಸಿ ಖಾತೆ ಹಂಚಿಕೆ ಅಂತಿಮಗೊಳಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT