ಕಾಂಗ್ರೆಸ್ ಪಕ್ಷದ ಲೋಗೋ 
ರಾಜಕೀಯ

ಉತ್ತಮ ಯೋಜನೆಗಳ ಕ್ರೆಡಿಟ್ ಜೆಡಿಎಸ್ ಪಾಲಾಗುವುದನ್ನು ತಪ್ಪಿಸಲು ಹಿರಿಯ ಕಾಂಗ್ರೆಸಿಗರಿಗೆ ಸಂಪುಟದಲ್ಲಿ ಅವಕಾಶ!

ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಸಂಪುಟ ವಿಸ್ತರಣೆಗೆ ಕ್ಷಣಗಣನೆ ಆರಂಭವಾಗಿದೆ. ಹೀಗಿರುವಾಗ, ಕಾಂಗ್ರೆಸ್ ತನ್ನ ಪಕ್ಷದಿಂದ ಸಂಪುಟಕ್ಕೆ ಹೊಸ ...

ಮೈಸೂರು: ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಸಂಪುಟ ವಿಸ್ತರಣೆಗೆ  ಕ್ಷಣಗಣನೆ ಆರಂಭವಾಗಿದೆ. ಹೀಗಿರುವಾಗ, ಕಾಂಗ್ರೆಸ್ ತನ್ನ ಪಕ್ಷದಿಂದ ಸಂಪುಟಕ್ಕೆ ಹೊಸ ಮುಖಗಳನ್ನು ಸೇರಿಸಿಕೊಳ್ಳಲು ತಯಾರಿ ನಡೆಸಿದ್ದು ಹಿರಿಯರನ್ನು ನಿರ್ಲಕ್ಷಿಸಿತ್ತು. ಆದರೆ ಸಂಪುಟದಲ್ಲಿ ಸಮತೋಲನ ಕಾಪಾಡಿಕೊಳ್ಳಲು ಹಿರಿಯರಿಗೂ ಅವಕಾಶ ನೀಡುವಂತೆ ಒತ್ತಾಯಿಸಲಾಗುತ್ತಿದೆ.
ಡಿಸಿಎಂ ಪರಮೇಶ್ವರ್, ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಪಿ ಪ್ರಚಾರ ಸಮಿತಿ ಮುಖ್ಯಸ್ಥ ಡಿ.ಕೆ ಶಿವಕುಮಾರ್ ಹಾಗೂ ಹಿರಿಯ ಮುಖಂಡರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ವೇಣುಗೋಪಾಲ್ ಅವರುಗಳು ಈ ಸಂಬಂಧ ರಾಹುಲ್ ಗಾಂಧಿ ಜೊತೆ  ಚರ್ಚಿಸಲಿದ್ದಾರೆ. 
ಸಂಪುಟ ವಿಸ್ತರಣೆ ಸಂಬಂಧ ಸಚಿವರ  ಪಟ್ಟಿಯನ್ನು ಇಂದು ಸಂಜೆ ದೆಹಲಿಗೆ ತೆಗೆದುಕೊಂಡು ಹೋಗುವ ಸಾಧ್ಯತೆಯಿದೆ. ರಾಹುಲ್ ಗಾಂಧಿ ಪಟ್ಟಿಯನ್ನು ಅಂತಿಮಗೊಳಿಸಿದ್ದು ಬುಧವಾರ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಯಿದೆ. 
ಹಲವು ಹಿರಿಯ ಮುಖಂಡರು ಹಾಗೂ ಮಾಜಿ ಸಿವರು ತಮ್ಮ ಅಸಮಾಧಾನ ಹೊರ ಹಾಕಿದ್ದು, ರಾಹುಲ್ ಗಾಂಧಿಗೆ ತಮ್ಮ ಬೇಸರದ ಕುರಿತು ತಿಳಿಸುವಂತೆ ಸಿದ್ದರಾಮಯ್ಯ ಅವರಿಗೆ ಸೂಚಿಸಿದ್ದಾರೆ. ಒಂದುವ ವೇಳೆ ತಮನ್ನು ಕಡೆಗಣಿಸಿದರೇ ಲೋಕಸಭೆ ಚುನವಾಣೆಯಲ್ಲಿ ತಕ್ಕ ಬೆಲೆ ತೆರಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಸದ್ಯ ಸಮ್ಮಿಶ್ರ ಸರ್ಕಾರ ಸುಲಲಿತವಾಗಿ ನಡೆಯುತ್ತಿದ್ದು, ಸಿದ್ದರಾಮಯ್ಯ ಸರ್ಕಾರದಲ್ಲಿ ಸಚಿವರಾಗಿದ್ದವನರು ತಮಗೆ ಈ ಬಾರಿ ತಮಗೆ ಸಂಪುಟದಲ್ಲಿ ಸ್ಥಾನ ಸಿಗುವುದೆಂಬ ಭರವಸೆಯಲ್ಲಿದ್ದಾರೆ. ಹಿಂದಿನ ಸರ್ಕಾರಗ ಅವಧಿಯಲ್ಲಿ ಜಾರಿಗೆ ತಂದಿದ್ದ  ಯೋಜನೆಗಳನ್ನು ಅನುಷ್ಛಾನಗೊಳಿಸಲು ತಮಗೆ ಅಧಿಕಾರ ನೀಡಬೇಕೆಂದು ಮಾಜಿ ಸಚಿವರುಗಳು ಮನವಿ ಮಾಡಿದ್ದಾರೆ, ಇಲ್ಲದಿದ್ದರೇ ದೇವೇಗೌಡ ಮತ್ತು ಕುಮಾರಸ್ವಾಮಿ ಎಲ್ಲಾ ಕ್ರೆಡಿಟ್ ತೆಗೆದುಕೊಳ್ಳುತ್ತಾರೆ, ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ತೊಂದರೆಗೆ ಸಿಲುಕುತ್ತಾರೆ ಎಂದು  ಹಿರಿಯ ಕಾಂಗ್ರೆಸ್ ಮುಖಂಡು ಹೇಳಿದ್ದಾರೆ.
ಹಿರಿಯ ಸಚಿವರು ಸಂಪುಟದಲ್ಲಿದ್ದರೇ ವಿರೋಧ ಪಕ್ಷವನ್ನು ಸೂಕ್ತವಾಗಿ ನಿಬಾಯಿಸಬಹುದು, 
ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಬಹುದು, ಎಲ್ಲಾ ಉತ್ತಮ ಕೆಲಸಗಳ ಕ್ರೆಡಿಟ್ ಜೆಡಿಎಸ್ ಪಾಲಾಗುವುದನ್ನು ತಪ್ಪಿಸಬಹುದು, ಸಿದ್ದರಾಮಯ್ಯ ಸರ್ಕಾರದ  ಜನಪರ ಯೋಜನೆಗಳನ್ನು ಮುಂದುವರಿಸಿಕೊಂಡು ಹೋಗಬಹುದಾಗಿದೆ. ತಮ್ಮ ಉಪಸ್ಥಿತಿ ಇಲ್ಲದಿದ್ದರೇ ಲೋಕಸಭೆ ಚುನಾವಣೆ ವೇಳೆ ಹೆಚ್ಚಿನ ತೊಂದರೆಗೆ ಸಿಲುವಕುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!